Webdunia - Bharat's app for daily news and videos

Install App

ಕೇರಳ ಕಾಲೇಜಲ್ಲಿ ವರದಕ್ಷಿಣೆ ವಿರೋಧಿ ಬಾಂಡ್ ಕಡ್ಡಾಯ?

Webdunia
ಶುಕ್ರವಾರ, 23 ಜುಲೈ 2021 (09:34 IST)
ತಿರುವನಂತಪುರ (ಜು.23): ವರದಕ್ಷಿಣೆ ಪಡೆಯುವ ಹಾಗೂ ವರದಕ್ಷಿಣೆಗಾಗಿ ಕಿರುಕುಳ ನೀಡುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾಲೇಜು ಸೇರುವ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆ ಪಡೆಯಲ್ಲ, ವರದಕ್ಷಿಣೆ ಕೊಡಲ್ಲ’ ಎಂಬ ಬಾಂಡ್ ಅನ್ನು ಕೇರಳ ಸರ್ಕಾರ ಕಡ್ಡಾಯಗೊಳಿಸುವ ಸಾಧ್ಯತೆ ಇದೆ.


•ವರದಕ್ಷಿಣೆ ಪಡೆಯುವ ಹಾಗೂ ವರದಕ್ಷಿಣೆಗಾಗಿ ಕಿರುಕುಳ ನೀಡುವ ಪ್ರಕರಣಗಳು ಹೆಚ್ಚಳ
•ಕಾಲೇಜು ಸೇರುವ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆ ಪಡೆಯಲ್ಲ, ವರದಕ್ಷಿಣೆ ಕೊಡಲ್ಲ’ ಎಂಬ ಬಾಂಡ್
•ಬಾಂಡ್ ಅನ್ನು ಕೇರಳ ಸರ್ಕಾರ ಕಡ್ಡಾಯಗೊಳಿಸುವ ಸಾಧ್ಯತೆ

ವರದಕ್ಷಿಣೆ ವಿರುದ್ಧ ಸಮರ ಸಾರಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಈ ಸಂಬಂಧ ಸಲಹೆ ನೀಡಿದ್ದಾರೆ. ಅಲ್ಲದೆ ಈ ವಿಚಾರವಾಗಿ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆಗೂ ಚರ್ಚೆ ನಡೆಸಿದ್ದಾರೆ. ತಾವು ನೀಡಿದ ವರದಕ್ಷಿಣೆ ವಿರೋಧಿ ಬಾಂಡ್ ಸಲಹೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಆಸಕ್ತಿ ತೋರಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟುಕುಲಪತಿಗಳ ಜತೆ ಚರ್ಚೆ ನಡೆಸಲಾಗುತ್ತದೆ. ವರದಕ್ಷಿಣೆ ಬಾಂಡ್ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
21 ಆಮೆ, ಲ್ಯಾಬ್ರಡಾರ್ ವರದಕ್ಷಿಣೆ ಕೇಳಿದ ವರ..!
ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ಪಡೆಯುವ ಪದವಿಗಳು ವರದಕ್ಷಿಣೆ ಕೇಳಲು ಲೈಸೆನ್ಸ್ ಆಗಬಾರದು. ಯಾರೇ ಆಗಲಿ ಕಾಲೇಜಿಗೆ ಪ್ರವೇಶ ಪಡೆಯುವಾಗ, ವರದಕ್ಷಿಣೆ ಪಡೆಯಲ್ಲ ಅಥವಾ ಕೊಡಲ್ಲ ಎಂಬ ಬಾಂಡ್ಗೆ ಸಹಿ ಮಾಡಿಕೊಡಬೇಕು. ವರದಕ್ಷಿಣೆ ಎಂಬುದು ಶಿಕ್ಷಾರ್ಹ ಅಪರಾಧ. ಹೀಗಾಗಿ ವಿವಿಗಳು ಈ ಕುರಿತು ಬಾಂಡ್ ಕೇಳಿದರೆ ಕಾನೂನು ಎತ್ತಿ ಹಿಡಿದಂತಾಗುತ್ತದೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ.
ವರದಕ್ಷಿಣೆ ವಿರೋಧಿಸಿ ಹಾಗೂ ಅದರ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯಪಾಲರು ಜು.14ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿ ಗಮನಸೆಳೆದಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments