Webdunia - Bharat's app for daily news and videos

Install App

ರಾಜ್ಯಸಭೆಯಲ್ಲಿ ಪೆಗಾಸಸ್ ರಾದ್ಧಾಂತ !?

Webdunia
ಶುಕ್ರವಾರ, 23 ಜುಲೈ 2021 (10:08 IST)
ನವದೆಹಲಿ (ಜು,23):  ಇಸ್ರೇಲಿ ಸಾಫ್ಟ್ವೇರ್ ಪೆಗಾಸಸ್ ಬಳಸಿ ದೇಶದಲ್ಲಿ 400 ಮಂದಿಯ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿ ರಾಜ್ಯಸಭೆಯಲ್ಲಿ ಗುರುವಾರ ರಾದ್ಧಾಂತಕ್ಕೆ ಕಾರಣವಾಗಿದೆ.

•ಇಸ್ರೇಲಿ ಸಾಫ್ಟ್ವೇರ್ ಪೆಗಾಸಸ್ ಬಳಸಿ ದೇಶದಲ್ಲಿ 400 ಮಂದಿಯ ಬೇಹುಗಾರಿಕೆ
•ರಾಜ್ಯಸಭೆಯಲ್ಲಿ ಗುರುವಾರ ರಾದ್ಧಾಂತಕ್ಕೆ ಕಾರಣವಾದ ವರದಿ

ಈ ವಿವಾದ ಕುರಿತು ಹೇಳಿಕೆ ನೀಡಲು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಆರಂಭಿಸುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು ವ್ಯಗ್ರರಾಗಿದ್ದಾರೆ. ಸಚಿವರ ಹೇಳಿಕೆ ಪ್ರತಿಯನ್ನು ಕಸಿದು, ಅದನ್ನು ಹರಿದು ರಾಜ್ಯಸಭೆ ಉಪಸಭಾಪತಿಯತ್ತ ಗಾಳಿಯಲ್ಲಿ ತೂರಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪ ಬಲಿಯಾಗಿದೆ.

ಪೆಗಾಸಸ್ ವಿಚಾರವಾಗಿ ಚರ್ಚೆ, ಈ ಸುದ್ದಿ ಹಿಂದೆ ಯಾರಿದ್ದಾರೆಂದು ತಿಳಿಯೋಣ: ಆರ್ಸಿ
ಪೆಗಾಸಸ್ ವಿವಾದದ ಕುರಿತು ಹೇಳಿಕೆ ನೀಡುವಂತೆ ವೈಷ್ಣವ್ ಅವರಿಗೆ ಉಪಸಭಾಪತಿಗಳು ಸೂಚಿಸಿದರು. ಕೂಡಲೇ ತೃಣಮೂಲ ಕಾಂಗ್ರೆಸ್ ಹಾಗೂ ಇತರೆ ಪ್ರತಿಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಘೋಷಣೆ ಕೂಗಿದರು. ನಮಗೆ ಸಚಿವರ ಹೇಳಿಕೆ ಬೇಕಿಲ್ಲ. ವಿವಾದದ ಕುರಿತು ತನಿಖೆಯಾಗಬೇಕು ಹಾಗೂ ಸದನದಲ್ಲಿ ಚರ್ಚೆಯಾಗಬೇಕು ಎಂದು ಆಗ್ರಹಿಸಿದರು. ವೈಷ್ಣವ್ ಅವರು ಹೇಳಿಕೆ ನೀಡಲು ಮುಂದಾಗುತ್ತಿದ್ದಂತೆ ತೃಣಮೂಲ ಕಾಂಗ್ರೆಸ್ ಸಂಸದ ಶಂತನು ಸೇನ್ ಅವರು ಸಚಿವರ ಹೇಳಿಕೆ ಪ್ರತಿಯನ್ನು ಕಸಿದು, ಹರಿದು ಉಪಸಭಾಪತಿ ಹರಿವಂಶ ನಾರಾಯಣ ಸಿಂಗ್ ಅವರತ್ತ ತೂರಿದರು.
ಈ ವೇಳೆ ಆಡಳಿತ ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಕೇಂದ್ರ ಸಚಿವ ಹರದೀಪ್ ಸಿಂಗ್ ಪುರಿ ಅವರು ತೃಣಮೂಲ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾರ್ಷಲ್ಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಬಳಿಕ ಸದನವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments