Webdunia - Bharat's app for daily news and videos

Install App

'ಅಕ್ಷಯ ತೃತೀಯ' ಶುಭ ಕಾರ್ಯಗಳಿಗೆ ಪ್ರಶಸ್ತ

Webdunia
PTI
ವೈಶಾಖ - ಶುಕ್ಲ - ತೃಥಿಯ ತಿಥಿಯೆ, ಅಕ್ಷಯ ತೃತೀಯ, ಹಿಂದುಗಳ ಪವಿತ್ರ ದಿನಗಳಲ್ಲಿ ಅತ್ಯಂತ ಪವಿತ್ರವಾದ ಮೂರುವರೆ ಶುಭ ಮುಹೂರ್ತಗಳಲ್ಲಿ ಯುಗಾದಿ, ಅಕ್ಷಯ ತೃತೀಯ, ವಿಜಯ ದಶಮಿ ಮತ್ತು ಬಲಿಪಾಡ್ಯಮಿ ಅರ್ಧ ದಿವಸ ಶುಭಕಾರ್ಯಗಳಿಗೆ ಪಂಚಾಂಗ ಶುದ್ದಿ ನೋಡುವ ಅವಶ್ಯಕತೆ ಇರುವುದಿಲ್ಲ.

ಈ ದಿವಸ ಸಾಮಾನ್ಯವಾಗಿ ಎಲ್ಲಾ ಶುಭ ಕೆಲಸವನ್ನು ಮಾಡಿದರೆ, ಅಕ್ಷಯವಾಗಿ ಪರಿಣಮಿಸುವುದು. ಈ ದಿವಸ ಜೀವನದ ಹೊಸ ಹೊಸ ಉದ್ಯೋಗಗಳನ್ನು ಪ್ರಾರಂಭಿಸುವುದು ಶುಭಕರ. ಈ ತೃತೀಯ ತಿಥಿಯ ಜೊತೆ ರೋಹಿಣಿ ನಕ್ಷತ್ರವಿದ್ದರೆ, ಮಹಾ ಪುಣ್ಯಕರವೆಂದು ಪುರಾಣದಲ್ಲಿದೆ. ಈ ಶುಭ ದಿವಸದಂದು ವಿಷ್ಣು ಮತ್ತು ಲಕ್ಷ್ಮೀ, ಗಂಗಾದೇವಿಗೆ ಪೂಜೆ ಸಲ್ಲಿಸಿದ್ದರಿಂದ ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ಸಕಲ ದೋಷ ಪರಿಹಾರವಾಗುತ್ತದೆಂದು ಪ್ರತೀತಿ. ಗಂಗಾ ಮಾತೆ ಸ್ವರ್ಗದಿಂದ ಭೂಮಿಗಿಳಿದ ದಿವಸ ಅಕ್ಷಯ ತೃತೀಯ ದಿವಸ. ಈ ದಿವಸ ಕೃತ ಯುಗದ ಪ್ರಾರಂಭ ದಿನ. ವಿಷ್ಣುವಿನ 6ನೇ ಅವತಾರವಾದ ಪರಶುರಾಮ ಹಾಗೂ 12ನೇ ಶತಮಾನದಲ್ಲಿ ಮಹಾ ಪುರುಷ ಬಸವೇಶ್ವರವರು ಜನಿಸಿದ್ದು, ಈ ದಿವಸದಂದು. ಈ ದಿವಸ ಮಹಾವಿಷ್ಣುವಿನ ಪೂಜೆ ಮಾಡಿದರೆ ಮೋಕ್ಷ ದೊರೆಯುವುದೆಂಬ ಪ್ರತೀತಿ ಇದೆ. ಈ ದಿವಸ ವಿಷ್ಣುವಿನ ಪೂಜೆಗೆ ಮೊದಲ ಆದ್ಯತೆಯಿದೆ.

ಈ ಅಕ್ಷಯ ತೃತೀಯ ದಿವಸ ರವಿ ಮತ್ತು ಚಂದ್ರ ಏಕಕಾಲದಲ್ಲಿ ಅತ್ಯುಚ್ಛ ಪ್ರಮಾಣ ತಲುಪಿ ಉಚ್ಚರಾಶಿಯಲ್ಲಿ ಉಜ್ವಲತೆ ಉಂಟಾಗುವುದರಿಂದ ಎಲ್ಲಾ ಶುಭ ಕಾರ್ಯಗಳಿಗೆ ಅತ್ಯಂತ ಪ್ರಶಸ್ತವಾಗಿರುತ್ತದೆ. ರವಿ ಆತ್ಮ ಮತ್ತು ದೇಹಕಾರಕ, ಚಂದ್ರ ಮನಸ್ಸುಕಾರಕ, ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಹೊಂದುವ ದಿವಸವಾಗಿದೆ.

ಪಾಂಡವರು ವನವಾಸದಲ್ಲಿದ್ದಾಗ ಕೃಷ್ಣನ ಆದೇಶದಂತೆ ಸೂರ್ಯನನ್ನು ಪ್ರಾರ್ಥಿಸಿ, ದ್ರೌಪದಿ ಅಕ್ಷಯ ಪಾತ್ರೆಯನ್ನು ಪಡೆದಿದ್ದು, ಅಕ್ಷಯ ತೃತೀಯ ದಿವಸವೇ ಆಗಿದೆ. ಹಾಗೂ ಪಾಂಡವರು ತಮ್ಮ ವನವಾಸ, ಅಜ್ಞಾತವಾಸದ ನಂತರ ಶಸ್ತ್ರಾಸ್ತ್ರಗಳನ್ನು ಪುನಃ ಪಡೆದಿದ್ದು, ಅಕ್ಷಯ ತೃತೀಯದಂದು, ಚಾಮುಂಡೇಶ್ವರಿ ರಾಕ್ಷಸರನ್ನು ಸಂಹರಿಸಿದ್ದು, ಅಕ್ಷಯ ತೃತೀಯ ದಿನದಂದು. ಶ್ರೀಕೃಷ್ಣನು ಕುಚೇಲನನ್ನು ಸತ್ಕರಿಸಿದ ಶ್ರೇಷ್ಠದಿನ.

ವೇದವ್ಯಾಸರು ಗಣಪತಿಯೊಂದಿಗೆ ಒಪ್ಪಂದ ಮಾಡಿಕೊಂಡು ಮಹಾಭಾರತ ಬರೆಯಿಸಲು ಪ್ರಾರಂಭಿಸಿದ್ದು ಅಕ್ಷಯ ತೃತೀಯ ದಿನದಂದು.

ಅಕ್ಷಯ ತೃತೀಯದಂದು ಶುಭಕಾರ್ಯಗಳನ್ನು ಹಾಗೂ ದಾನ ಮಾಡಿದರೆ ಹೆಚ್ಚಿನ ಪ್ರತಿಫಲ ಉಂಟಾಗುವುದೆಂಬ ಪ್ರತೀತಿಯಿದೆ.

ನಾಲ್ಕು ಪುರುಷಾರ್ಥಗಳಲ್ಲಿ ಅರ್ಥ ಪುರುಷಾರ್ಥವನ್ನು ಅಂದರೆ ಸಂಪತ್ತು, ಕೀರ್ತಿ ಪಡೆಯಲು ಈ ದಿವಸ ಕುಬೇರ ಹಾಗು ಲಕ್ಷ್ಮಿ ಇವರುಗಳ ಪೂಜೆ ಮಾಡಲಾಗುತ್ತದೆ. ಮಹಾಲಕ್ಷ್ಮಿ ಅನುಷ್ಠಾನ ಮಾಡಿದರೆ ಇಡೀವರ್ಷ ಉತ್ತಮ ಫಲ ದೊರೆಯುತ್ತದೆ.

ಈ ಅಕ್ಷಯ ತೃತೀಯ ದಿವಸ ಚಿನ್ನ, ಬೆಳ್ಳಿ, ವಜ್ರ, ರತ್ನಾಭರಣ, ಭೂಮಿ ಇವುಗಳ ಖರೀದಿ, ಆಸ್ತಿಯಲ್ಲಿ ಹೂಡಿಕೆಗೆ ಪ್ರಶಸ್ತವೆನಿಸಿದೆ ಹಾಗೂ ಸಮೃದ್ದಿ ದೊರೆಯುತ್ತದೆಂದೂ ನಂಬಿಕೆ ಇದೆ. ಆದ್ದರಿಂದಲೇ ಅಕ್ಷಯ ತೃತೀಯ ಕುರಿತು ಇರುವ ಪವಿತ್ರ ಭಾವನೆ, ಉಳಿತಾಯದ ಮತ್ತು ಸಂಪತ್ತಿನ ಸದುಪಯೋಗ ಹಾಗೂ ಪೂರ್ಣ ಫಲ ದೊರೆಯಬೇಕೆಂಬ ಸದ್ಬಾವನೆಯಿಂದಲೇ ಆ ಕುರಿತು ಖರೀದಿ ಹೂಡಿಕೆಗಳು ಭರದಿಂದ ನಡೆಯುತ್ತವೆ.

ಇದೇ ಮೇ 6 ರಂದು ಶುಕ್ರವಾರ ದಿವಸ ವೈಶಾಖ ಶುಕ್ಲ ತೃತೀಯ ದಿವಸ ಅಕ್ಷಯ ತೃತೀಯ. ತೃತೀಯ ತಿಥಿ ಸಂಜೆ 4 ಗಂಟೆ 8 ನಿಮಿಷದವರೆಗೆ ಇರುತ್ತದೆ ಜೊತೆಗೆ ರೋಹಿಣಿ ನಕ್ಷತ್ರವು ಸೂರ್ಯೋದಯಲ್ಲಿರುವುದರಿಂದ ಶ್ರೇಷ್ಠವಾಗಿದೆ. ಈ ಅಕ್ಷಯ ತೃತೀಯ ಮೇ 5 ರಂದು ಗುರುವಾರ ಮದ್ಯಾಹ್ನ 3 ಗಂಟೆ 16 ನಿಮಿಷದಿಂದ ಪ್ರಾರಂಭವಾಗುತ್ತದೆ. ಜೊತೆಗೆ ರೋಹಿಣಿ ನಕ್ಷತ್ರವು ಇರುವುದರಿಂದ ಗುರುವಾರ ಮತ್ತು ಶುಕ್ರವಾರ 2 ದಿವಸಗಳವರೆಗೆ ಅಕ್ಷಯ ತೃತೀಯದ ಪ್ರಭಾವ ಹೆಚ್ಚಾಗಿರುತ್ತದೆ. ಈ ಅವಧಿಯಲ್ಲಿ ಯಾವುದೇ ಶುಭಕಾರ್ಯಗಳನ್ನು ಪ್ರಾರಂಭಿಸಬಹುದು ಹಾಗೂ ಚಿನ್ನ, ಬೆಳ್ಳಿ ಆಭರಣ, ಭೂಮಿ ಖರೀದಿಸಬಹುದು ಹಾಗೂ ವಿವಾಹ, ಗೃಹಪ್ರವೇಶ ಮತ್ತು ಇತರೆ ಶುಭ ಕಾರ್ಯಗಳನ್ನು ಮಾಡಬಹುದಾಗಿದೆ.

ಆರ್. ಸೀತಾರಾಮಯ್ಯ,
ಜೋತೀಷ್ಕರು,
ಕಮಲ, 5ನೇ ತಿರುವು, ಬಸವನಗುಡಿ,
ಶಿವಮೊಗ್ಗ - 577 201
ಮೋ: 94490 48340
ಪೋನ್: 08182-227344

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

Show comments