ಮಂಗಳವಾರ ಮಾಡುವ ಈ ವ್ರತದಿಂದ ಮನುಷ್ಯ ಮಾಡಿದ ಎಲ್ಲಾ ದೋಷಗಳು ಪರಿಹಾರವಾಗುತ್ತದೆಯಂತೆ

Webdunia
ಮಂಗಳವಾರ, 25 ಸೆಪ್ಟಂಬರ್ 2018 (19:27 IST)
ಬೆಂಗಳೂರು : ಹಿಂದೂಗಳು ಪೂಜಿಸುವ ದೇವರುಗಳಲ್ಲಿ  ಶ್ರೀರಾಮನ ಭಕ್ತ ಹನುಮಂತ ಕೂಡ ಒಬ್ಬ. ಶನಿವಾರ ಹಾಗೂ ಮಂಗಳವಾರ ಹನುಮಂತನಿಗೆ ಪೂಜೆ ಮಾಡಿದರೆ ಒಳ್ಳೆಯದು ಎಂದು ಭಾವಿಸಲಾಗಿದೆ. ನೆಮ್ಮದಿಯ ಜೀವನ ಬಯಸುವವರು ಶ್ರದ್ಧೆ, ಭಕ್ತಿಯಿಂದ ಹನುಮಂತನ ಪೂಜೆ ಮಾಡಿದ್ರೆ ಸಾಕು.


ಸರ್ವ ಸುಖ, ಗೌರವಗಳಿಗಾಗಿ ಮಂಗಳವಾರ ವೃತ ಮಾಡುವುದು ಬಹಳ ಉತ್ತಮ. ಈ ವೃತದಲ್ಲಿ ಗೋಧಿ ಹಾಗೂ ಬೆಲ್ಲವನ್ನು ಮಾತ್ರ ಸೇವನೆ ಮಾಡಬೇಕು. ರಾತ್ರಿ ಮಾತ್ರ ಭೋಜನ ಮಾಡಬೇಕು. 21 ವಾರಗಳ ಕಾಲ ಈ ವೃತವನ್ನು ಮಾಡಬೇಕಾಗುತ್ತದೆ. ಈ ವೃತದಿಂದ ಮನುಷ್ಯ ಮಾಡಿದ ಎಲ್ಲ ದೋಷಗಳೂ ನಷ್ಟವಾಗುತ್ತವೆ.


ವೃತದ ಪೂಜೆಯ ವೇಳೆ ಕೆಂಪು ಹೂ ಅರ್ಪಣೆ ಮಾಡಬೇಕು. ಹಾಗೆ ಕೆಂಪು ಬಟ್ಟೆಯನ್ನು ಧರಿಸಬೇಕು. ಹನುಮಂತನ ಪೂಜೆ ಮಾಡುವ ಜೊತೆಗೆ ಹನುಮಂತನ ಕಥೆಯನ್ನು ಓದಬೇಕು. ಹನುಮಂತನಿಗೆ ತೆಂಗಿನ ಕಾಯಿ, ಧೂಪದ್ರವ್ಯ, ದೀಪ, ಕುಂಕುಮಗಳನ್ನು ಅರ್ಪಿಸಿ. ನಿಯಮ ಬದ್ಧವಾಗಿ ಮಂಗಳವಾರದ ಪೂಜೆ ಮಾಡುವುದರಿಂದ ಬಂದ ಕಷ್ಟಗಳೆಲ್ಲ ದೂರವಾಗಿ ಸುಖ ಪ್ರಾಪ್ತಿಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮುಂದಿನ ಸುದ್ದಿ
Show comments