Webdunia - Bharat's app for daily news and videos

Install App

ಗುರು ದೆಶೆ ತಿರುಗಿಬಿದ್ದರೆ ಎಂಥಾ ಕೆಟ್ಟ ಪರಿಣಾಮವಾಗುತ್ತದೆ ನೋಡಿ

Krishnaveni K
ಸೋಮವಾರ, 22 ಏಪ್ರಿಲ್ 2024 (12:04 IST)
ಬೆಂಗಳೂರು: ಗುರು ದೆಶೆ ಬಂದರೆ ಎಲ್ಲವೂ ಶುಭವಾಗುತ್ತದೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಗುರು ದೆಶೆ ಎಲ್ಲಾ ಬಾರಿಯೂ ಒಳ್ಳೆಯದು ಮಾಡಲ್ಲ. ಗುರು ದೆಶೆಯ ಅಡ್ಡಪರಿಣಾಮವೂ ಅಷ್ಟೇ ಕೆಟ್ಟದಾಗಿರುತ್ತದೆ.

ಗುರು ದೆಶೆ ತಿರುಗಿಬಿದ್ದರೆ ಯಾವೆಲ್ಲಾ ಅಡ್ಡಪರಿಣಾಮಗಳಾಗುತ್ತವೆ ಎಂಬುದನ್ನು ನೋಡೋಣ. ಗುರುಗ್ರಹವು ದೋಷಪೂರಿತ ಮನೆಯಲ್ಲಿದ್ದರೆ ಸಾಕಷ್ಟು ಕೆಟ್ಟ ಪ್ರಭಾವಗಳನ್ನು ಎದುರಿಸಬೇಕಾಗುತ್ತದೆ. ಮುಖ್ಯವಾಗಿ ನಮ್ಮ ನಿರ್ಧಾರ ತೆಗೆದುಕೊಳ್ಳುವ ವಿಚಾರದಲ್ಲಿ ಹಿನ್ನಡೆ, ಸೋಲು ಕಂಡುಬರಬಹುದು.

ಅಷ್ಟೇ ಅಲ್ಲ, ಅನಗತ್ಯ ವಿಚಾರಗಳಿಗೆ ವಿಪರೀತ ಖರ್ಚು ಮಾಡುವುದು, ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರ ತಪ್ಪುವುದು ಇತ್ಯಾದಿ ಕಂಡಬರಬಹುದು. ವಿದ್ಯಾರ್ಥಿಗಳಿರಲಿ, ಉದ್ಯೋಗಸ್ಥರಿರಲಿ ತಮ್ಮ ಕೆಲಸದಲ್ಲಿ, ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ಸಾಧಿಸಲು ಸಾಧ‍್ಯವಾಗದೇ ಚಂಚಲ ಮನೋಭಾವ ಕಂಡುಬಂದೀತು.

ಮುಖ್ಯವಾಗಿ ಹಣಕಾಸಿನ ನಷ್ಟ, ವಿಪರೀತ ಸಾಲ ಇತ್ಯಾದಿ ಸಮಸ್ಯೆಗಳು ಎದುರಾಗಿ ಜೀವನದಲ್ಲಿ ಕಷ್ಟಗಳ ಸರಮಾಲೆ ಎದುರಿಸಬೇಕಾದೀತು. ಹೀಗಾಗಿ ಗುರುಗ್ರಹದ ಋಣಾತ್ಮಕ ಪ್ರಭಾವದಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಗುರು ಗ್ರಹಕ್ಕೆ ಸಂಬಂಧಪಟ್ಟ ಶ್ಲೋಕ, ಮಂತ್ರಗಳನ್ನು ಪಠಿಸಿದರೆ ಉತ್ತಮ. ಪ್ರತಿನಿತ್ಯ ‘ಓಂ ಗ್ರಾಂ ಗ್ರೀಂ ಗ್ರೌಂ ಸಃ ಗುರವೇ ನಮಃ’ ಎನ್ನುವ ಮಂತ್ರವನ್ನು 108 ಬಾರಿ ಪಠಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments