Webdunia - Bharat's app for daily news and videos

Install App

ಶ್ರಾವಣ ಮಾಸದಲ್ಲಿ ನಾನ್ ವೆಜ್ ತಿನ್ನಬಾರದೇ

Krishnaveni K
ಮಂಗಳವಾರ, 6 ಆಗಸ್ಟ್ 2024 (08:39 IST)
ಬೆಂಗಳೂರು: ಆಷಾಢ ಮಾಸ ಕಳೆದು ಶ್ರಾವಣ ಮಾಸ ಬಂದೇ ಬಿಟ್ಟಿದೆ. ಇನ್ನೇನು ಸಾಲು ಸಾಲು ಹಬ್ಬಗಳು ಬರಲಿವೆ. ಈ ಮಾಸದಲ್ಲಿ ನಾನ್ ವೆಜ್ ತಿನ್ನಬಾರದು ಎನ್ನುತ್ತಾರೆ. ಇದು ಯಾಕೆ, ನಿಜವೇ ಎಂದು ಇಲ್ಲಿ ನೋಡಿ.

ಶ್ರಾವಣ ಮಾಸದಲ್ಲಿ ಅನೇಕರು ಮಾಂಸಾಹಾರವನ್ನು ತ್ಯಜಿಸುತ್ತಾರೆ. ದೇವರ ಹೆಸರಿನಲ್ಲಿ ಈ ಒಂದು ಮಾಸ ಮಾಂಸಾಹಾರ ತ್ಯಜಿಸಿ ದೇವರ ಉಪಾಸನೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಇದನ್ನು ಕೆಲವರು ಧಾರ್ಮಿಕ ಶ್ರದ್ಧೆಯಿಂದ ಮಾಡಿದರೆ ಇದರ ಹಿಂದೆ ವೈಜ್ಞಾನಿಕ ಕಾರಣವೂ ಇದೆ ಎನ್ನುವವರಿದ್ದಾರೆ.

ಮಳೆಗಾಲದಲ್ಲಿ ನೀರು ಕಲುಷಿತವಾಗಿದ್ದು, ಈ ಸಮಯದಲ್ಲಿ ಮೀನು ಇತ್ಯಾದಿ ಮಾಂಸಾಹಾರ ಯೋಗ್ಯ ಜೀವಿಗಳು ರೋಗ ಹರಡುವ ಭಯವಿದೆ. ಹೀಗಾಗಿ ಈ ಸಮಯದಲ್ಲಿ ಮಾಂಸಾಹಾರ ಸೇವನೆ ಅಷ್ಟು ಒಳ್ಳೆಯದಲ್ಲ ಎನ್ನುವುದು ವೈಜ್ಞಾನಿಕವಾಗಿ ನೀಡಲಾಗುವ ಕಾರಣವಾಗಿದೆ.

ಇದರ ಜೊತೆಗೆ ಧಾರ್ಮಿಕವಾಗಿಯೂ ಈ ಮಾಸದಲ್ಲಿ ಮಾಂಸಾಹಾರ ತ್ಯಜಿಸುತ್ತಾರೆ. ಯಾಕೆಂದರೆ ಶ್ರಾವಣ ಮಾಸ ಹಲವು ದೇವರುಗಳ ಹಬ್ಬಗಳ ಮಾಸ. ದೇವರ ಆರಾಧನೆಯ ನಡುವೆ ಮಾಂಸಾಹಾರ ಮಾಡದೇ ಸಾತ್ವಿಕ ಆಹಾರ ಮಾಡುವುದು ಒಳ್ಳೆಯದು ಎಂಬ ಕಾರಣಕ್ಕೆ ಶ್ರಾವಣ ಮಾಸದಲ್ಲಿ ಮಾಂಸಾಹಾರ ತ್ಯಜಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments