Webdunia - Bharat's app for daily news and videos

Install App

ಗುರುವಾರ ರಾಘವೇಂದ್ರ ಸ್ವಾಮಿಯ ಆರಾಧನೆ ಹೀಗೆ ಮಾಡಿದರೆ ಈ ಯೋಗ ನಿಮ್ಮದಾಗುತ್ತದೆ

Krishnaveni K
ಗುರುವಾರ, 8 ಆಗಸ್ಟ್ 2024 (08:44 IST)
Photo Credit: Facebook
ಬೆಂಗಳೂರು: ಗುರುವಾರ ಬಂತೆಂದರೆ ಗುರು ರಾಘವೇಂದ್ರ ಸ್ವಾಮಿಯ ದಿನ ಎಂದು ನಮಗೆಲ್ಲಾ ಗೊತ್ತು. ಮಹಾವಿಷ್ಣುವಿನಂತೆ ಗುರುವಾರ ರಾಘವೇಂದ್ರ ಸ್ವಾಮಿಗಳ ಆರಾಧನೆಗೂ ಪ್ರಶಸ್ತವಾದ ದಿನವಾಗಿದೆ.

ಗುರುವಾರ ರಾಯರ ಆರಾಧನೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ, ಸುಖ ಸಮೃದ್ಧಿ ನಮ್ಮದಾಗುತ್ತದೆ. ರಾಘವೇಂದ್ರ ಸ್ವಾಮಿಯ ಭಕ್ತರು ಇಂದು ರಾಯರ ಮಠಕ್ಕೆ ತೆರಳಿ ಪೂಜೆ ಸಲ್ಲಿಸುವುದು ಸಾಮಾನ್ಯ. ಅದರ ಹೊರತಾಗಿ ಮನೆಯಲ್ಲಿಯೂ ರಾಘವೇಂದ್ರ ಸ್ವಾಮಿಗಳ ಪೂಜೆ ಮಾಡಿಕೊಳ್ಳಬಹುದು.

ಸತತವಾಗಿ ಏಳು ಗುರುವಾರಗಳಂದು ವ್ರತವಿದ್ದು ರಾಯರ ಪೂಜೆ ಮಾಡುವುದರಿಂದ ಮನೆಯಲ್ಲಿ ಅಶಾಂತಿ, ಕಲಹ, ಮಾನಸಿಕ ಮತ್ತು ದೈಹಿಕ ಆರೋಗ್ಯ ಸಮಸ್ಯೆಗಳು ದೂರವಾಗಿ ನೆಮ್ಮದಿ ಮೂಡುವುದು. ಮನೆಯಲ್ಲಿ ರಾಘವೇಂದ್ರ ಸ್ವಾಮಿಯ ವಿಗ್ರಹವಿದ್ದರೆ ಅದನ್ನು ಸ್ವಚ್ಛಗೊಳಿಸಿ ಕುಂಕುಮ ಮತ್ತು ಶ್ರೀಗಂಧವನ್ನು ಹಚ್ಚಿ.

ನೆನಪಿರಲಿ, ರಾಘವೇಂದ್ರ ಸ್ವಾಮಿಗೆ ತುಳಸಿಯ ಹಾರ ಅತ್ಯಂತ ಪ್ರಿಯವಾಗಿದ್ದು, ಇದನ್ನು ಪೂಜೆಯಲ್ಲಿ ಬಳಸಲೇಬೇಕು. ತಾಜಾ ಹಣ್ಣು, ತೆಂಗಿನ ಕಾಯಿ, ವೀಳ್ಯದೆಲೆಯಿಂದ ನೈವೇದ್ಯ ಮಾಡಬೇಕು. ದೀಪ ಬೆಳಗಿ ರಾಘವೇಂದ್ರ ಸ್ವಾಮಿಗಳ ಕುರಿತಾಗಿ ‘ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರಥಾಯ ಚ ಭಜತಾಂ ಕಲ್ಪ ವೃಕ್ಷಾಯ ನಮತಾಂ ಕಾಮಧೇನುವೇ’ ಎಂದು ಮಂತ್ರ ಹೇಳುತ್ತಾ ಪೂಜೆ ಮಾಡಿ. ಈ ರೀತಿ ಪ್ರತೀ ಗುರುವಾರ ಮಾಡುವುದರಿಂದ ಮನೆಯಲ್ಲಿ ನೆಮ್ಮದಿ, ಸಮೃದ್ಧಿ ಉಂಟಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments