Webdunia - Bharat's app for daily news and videos

Install App

ಬಾಳೆಹಣ್ಣು, ತೆಂಗಿನಕಾಯಿ ನೀರಿನ ಮೇಲೆ ತೇಲುವಂತಹ ಪವಾಡವಿರುವ ಈ ದೇವಾಲಯ ಎಲ್ಲಿದೆ ಗೊತ್ತಾ?

Webdunia
ಸೋಮವಾರ, 24 ಸೆಪ್ಟಂಬರ್ 2018 (14:33 IST)
ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಿಂದ 11 ಕಿಲೋ ಮೀಟರ್ ದೂರದಲ್ಲಿರುವ ಶ್ರೀ ಕ್ಷೇತ್ರ ಹಾಲುರಾಮೇಶ್ವರ ದೇವಾಲಯ ರಾಮಾಯಣ ಕಾಲದಲ್ಲಿ ವಾಲ್ಮೀಕಿ ನಿರ್ಮಿಸಿದ್ದಾರಂತೆ. ಸಂತಾನ ಇಲ್ಲದವರು ಸಂತಾನ  ಫಲ ಬೇಡಲು ಇಲ್ಲಿಗೆ ಬರುತ್ತಾರಂತೆ. ಅಷ್ಟೇ ಅಲ್ಲದೇ ಮೈಸೂರು ಮಹಾರಾಜರು ಸಹ ಇಲ್ಲಿ ಫಲ ಬೇಡಲು ಬಂದ ಇತಿಹಾಸವಿದೆ.


ಈ ದೇವಾಲಯದ ಕೊಳದಲ್ಲಿ ಬರವಿರಲಿ, ಮಳೆಯಿರಲಿ ಎಲ್ಲ ಕಾಲದಲ್ಲೂ ನೀರು ಸದಾ ಇರುತ್ತದೆಯಂತೆ. ಬಾಳೆಹಣ್ಣು, ತೆಂಗಿನಕಾಯಿ ಹೋಳು ಇತ್ಯಾದಿ ವಸ್ತುಗಳು ನೀರಿನ ಮೇಲೆ ತೇಲುವುದೇ ಇಲ್ಲಿನ ಒಂದು ಪವಾಡ. ಹಾಗೇ ಕರಗುವ ಕುಂಕುಮ, ಅರಿಶಿನ ಕರಗದೆ ತೇಲುವುದು ಮತ್ತೊಂದು ವಿಶೇಷ.


ಮೈಸೂರು ಮಹಾರಾಜರಾಗಿದ್ದ ಜಯಚಾಮರಾಜ ಒಡೆಯರ್ ಅವರು ಇಲ್ಲಿ ಬಂದು ಗಂಗೆಯನ್ನು ಪೂಜಿಸಿ ಸಂತಾನ ಕರುಣಿಸುವಂತೆ ಕೋರಿದಾಗ ಅವರಿಗೆ ಬೆಳ್ಳಿ ತೊಟ್ಟಿಲು ಬಂತಂತೆ. ಆ ನಂತರವೇ ಶ್ರೀಕಂಠದತ್ತ ನರಸಿಂಹರಾಜ ಒಡೆಯರು ಜನಿಸಿದರು ಎಂದು ಅಧಿಕೃತ ಉಲ್ಲೇಖವಿದೆ ಎನ್ನುತ್ತಾರೆ.


ಇಲ್ಲಿಗೆ ಬರುವ ಭಕ್ತರಿಗೆ ದೇವರನ್ನು ಮುಟ್ಟಿ ಪೂಜಿಸುವ ಅವಕಾಶವುಂಟು. ಜಾತಿ, ಮತ, ಧರ್ಮಗಳ ಭೇದವಿಲ್ಲದೆ ಎಲ್ಲರೂ ಭಕ್ತಿಯಿಂದ ದೇವರನ್ನು ಪೂಜಿಸುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments