ಬುಧವಾರ ಈ ಒಂದು ಕೆಲಸ ಮಾಡುವುದರಿಂದ ಆರೋಗ್ಯ ಸಮಸ್ಯೆ ನಿವಾರಣೆಯಾಗುತ್ತದೆ

Krishnaveni K
ಬುಧವಾರ, 16 ಅಕ್ಟೋಬರ್ 2024 (08:37 IST)
ಬೆಂಗಳೂರು: ಹಿಂದೂ ಧರ್ಮದಲ್ಲಿ ಪ್ರತಿಯೊಂದು ವಾರಕ್ಕೂ ಅದರದ್ದೇ ಆದ ವಿಶೇಷತೆಗಳಿರುತ್ತವೆ. ಅದೇ ರೀತಿ ಬುಧವಾರದಂದು ಆದಿ ಪೂಜಿತ ಗಣಪತಿಯ ದಿನವಾಗಿದೆ. ಈ ದಿನ ಈ ಒಂದು ಕೆಲಸ ಮಾಡುವುದರಿಂದ ನಿಮಗೆ ಅರೋಗ್ಯ ಸಮಸ್ಯೆಗಳು ದೂರವಾಗುತ್ತದೆ.

ಗಣಪತಿಯನ್ನು ವಿದ್ಯಾಧಿಪತಿ ಎಂದು ಕರೆಯಲಾಗುತ್ತದೆ. ವಿದ್ಯಾಭ್ಯಾಸದಲ್ಲಿ ತೊಡಕುಗಳಾಗುತ್ತಿದ್ದರೆ ಗಣೇಶನನ್ನು ಪೂಜೆ ಮಾಡುವುದರಿಂದ ವಿಘ್ನಗಳು ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಗಣಪತಿ ಕೇವಲ ವಿದ್ಯೆಗೆ ಮಾತ್ರ ದೇವರಲ್ಲ. ಆತನನ್ನು ಪೂಜಿಸುವುದರಿಂದ ಆರೋಗ್ಯ ಸಮಸ್ಯೆಗಳೂ ದೂರವಾಗುತ್ತದೆ.

ಕೇವಲ ಮಂತ್ರ ಮಾತ್ರವಲ್ಲ, ನಾವು ಮಾಡುವ ದಾನ ಧರ್ಮಗಳೂ ನಮ್ಮನ್ನು ಕಾಪಾಡುತ್ತದೆ. ಅದೇ ರೀತಿ ಬುಧವಾರದಂದು ತೃತೀಯ ಲಿಂಗಿಗಳಿಗೆ ಹಸಿರು ಬಣ್ಣದ ಬಟ್ಟೆ ದಾನ ಮಾಡುವುದರಿಂದ ಆರೋಗ್ಯ ಸಮಸ್ಯೆ ದೂರವಾಗುತ್ತದೆ. ಇದರಿಂದ ಭಗವಂತನೂ ಸಂತುಷ್ಟನಾಗುತ್ತಾನೆ ಎಂಬ ನಂಬಿಕೆಯಿದೆ.

ಅದೇ ರೀತಿ ಬುಧವಾರದಂದು ಬಡವರಿಗೆ ಪಚ್ಚೆ ಹೆಸರು ಅಥವಾ ಯಾವುದೇ ಹಸಿರು ಬಣ್ಣದ ವಸ್ತುಗಳನ್ನು ದಾನ ಮಾಡುವುದು ಶ್ರೇಯಸ್ಕರವಾಗಿದೆ. ಇದರಿಂದ ಬುಧಗ್ರಹಕ್ಕೆ ಸಂಬಂಧಿಸಿದ ಸಮಸ್ಯೆಗಳೂ ನಿವಾರಣೆಯಾಗುತ್ತದೆ. ಇದರಿಂದ ಮನೋವ್ಯಾಧಿಗಳೂ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments