ಧನ ಪ್ರಾಪ್ತಿಯಾಗಲು ಈ ಮಾಲೆಯನ್ನು ಕೈಯಲ್ಲಿ ಹಿಡಿದು ಜಪಿಸಿ

Webdunia
ಬುಧವಾರ, 8 ಮೇ 2019 (09:30 IST)
ಬೆಂಗಳೂರು : ಹಿಂದೂ ಧರ್ಮದಲ್ಲಿ ದೇವರನ್ನು ಪ್ರಾರ್ಥಿಸುವಾಗ ಮಾಲೆಯನ್ನು ಕೈಯಲ್ಲಿ ಹಿಡಿದು ಮಂತ್ರ ಜಪಿಸುತ್ತಾರೆ. ಮಾಲೆಗಳನ್ನು ಹಿಡಿದು ದೇವರನ್ನು ಪ್ರಾರ್ಥಿಸುವುದರಿಂದ ದೇಹಕ್ಕೂ ಹಾಗೂ ಮನಸ್ಸಿಗೆ ಒಳ್ಳೆಯದು ಎಂದು ಹೇಳುತ್ತಾರೆ. ಈ ಮಾಲೆಗಳ ಮಹತ್ವ ಏನು ಎಂಬುದನ್ನು ತಿಳಿದುಕೊಳ್ಳೋಣ.




ರುದ್ರಾಕ್ಷಿ: ಈ ಮಾಲೆಯನ್ನು ಹಿಡಿದು ಎಲ್ಲಾ ಮಂತ್ರಗಳನ್ನೂ ಸುಲಭವಾಗಿ ಜಪಿಸಬಹುದು. ಇನ್ನು ಶಿವನಿಗೆ ರುದ್ರಾಕ್ಷಿ ಪ್ರಿಯ. ಆದುದರಿಂದ ಮಹಾಮೃತ್ಯುಂಜಯ ಮಂತ್ರ ಜಪಿಸಲು ರುದ್ರಾಕ್ಷಿ ಮಾಲೆ ಬಳಸಲಾಗುತ್ತದೆ. ಜತೆಗೆ ಬೇರೆ ದೇವರ ಮಂತ್ರವನ್ನೂ ಈ ಮಾಲೆ ಬಳಸಿ ಪಠಿಸಬಹುದು.


ಸ್ಫಟಿಕ: ಸ್ಪಟಿಕ ಮಾಲೆ ಹಿಡಿದು ಜಪಿಸುವುದರಿಂದ ಧನ ಪ್ರಾಪ್ತಿಯಾಗುತ್ತದೆ. ಜೊತೆಗೆ ಮನಸ್ಸಿನ ಏಕಾಗ್ರತೆ ಹೆಚ್ಚುತ್ತದೆ. ಲಕ್ಷ್ಮಿ ದೇವಿಯನ್ನು ಜಪಿಸಲು ಈ ಮಾಲೆ ಬಳಸಲಾಗುತ್ತದೆ. ಅಧಿಕ ರಕ್ತದೊತ್ತಡ ಇರವವರು ಈ ಮಾಲೆ ಬಳಸಬೇಕು.


ಹಳದಿ: ಹಳದಿ ಬಣ್ಣದ ಮಾಲೆ ಹಿಡಿದು ಜಪಿಸಿದರೆ ಮನಸ್ಸಿನ ಇಚ್ಛೆ ಪೂರ್ತಿಯಾಗುತ್ತದೆ. ಬೃಹಸ್ಪತಿ ಮತ್ತು ಬಾಗಲಾಮುಖಿ ದೇವಿ ಮಂತ್ರ ಜಪಿಸುವಾಗಲೂ ಈ ಮಾಲೆ ಬಳಸಬೇಕು. ಹಳದಿ ಮಾಲೆಯಿಂದ ವಿದ್ಯೆ, ಸಂತಾನ ಮತ್ತು ಜ್ಞಾನ ಪ್ರಾಪ್ತಿಯಾಗುತ್ತದೆ.


ಚಂದನ: ದುರ್ಗಾ ದೇವಿಯ ಮಂತ್ರ ಜಪಿಸಲು ಕೆಂಪು ಚಂದನ ಹಾಗೂ ಕೃಷ್ಣಾ ಮಂತ್ರ ಜಪಿಸಲು ಬಿಳಿ ಚಂದನ ಬಳಸುತ್ತಾರೆ.
ತುಳಸಿ : ತುಳಸಿ ಮಾಲೆ ದೇವಿ ಮತ್ತು ಶಿವನ ಮಂತ್ರ ಜಪಿಸಲು ಬಳಕೆಯಾಗುತ್ತದೆ. ತುಳಸಿ ಮಾಲೆ ಧರಿಸಿದರೆ ಜೀವನ ಸುಖಮಯವಾಗುತ್ತದೆ ಎಂಬ ನಂಬಿಕೆ ಇದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments