ಶ್ರಾವಣ ಮಾಸದಲ್ಲಿ ಈ ವಸ್ತುಗಳನ್ನು ಮನೆಗೆ ತಂದರೆ ಶುಭ ಫಲ ದೊರಕುತ್ತದೆಯಂತೆ

Webdunia
ಬುಧವಾರ, 22 ಆಗಸ್ಟ್ 2018 (07:15 IST)
ಬೆಂಗಳೂರು : ಶ್ರಾವಣ ಮಾಸದಲ್ಲಿ ಶಿವನ ಆರಾಧನೆ ಮಾಡಿದರೆ ವಿಶೇಷ ಫಲ ದೊರೆಯುತ್ತದೆ. ಆದ್ದರಿಂದ ಶಿವ ದೇವಾಲಯಗಳಲ್ಲಿ ಭಕ್ತರ ದಂಡೇ ನೆರೆದಿರುತ್ತದೆ. ಅದರಲ್ಲೂ ವಿಶೇಷವಾಗಿ ಸೋಮವಾರದಂದು ದೇವಸ್ಥಾನದಲ್ಲಿ ಶಿವನ ಪೂಜೆ, ಅಭಿಷೇಕ ಜೋರಾಗಿರುತ್ತದೆ.


ಶ್ರಾವಣ ಮಾಸದಲ್ಲಿ ಶಿವ ಪೂಜೆಯ ಜೊತೆಗೆ ಶಿವನಿಗೆ ಸಂಬಂಧಪಟ್ಟ ಕೆಲವು ವಸ್ತುಗಳನ್ನು ಮನೆಯಲ್ಲಿ ತಂದಿಟ್ಟುಕೊಳ್ಳುವುದರಿಂದ ಮನೆಯಲ್ಲಿ ಸುಖ ಶಾಂತಿ ನೆಲೆಸಿರುತ್ತದೆ. ಶ್ರಾವಣ ಮಾಸದಲ್ಲಿ ಬೆಳ್ಳಿ ತ್ರಿಶೂಲವನ್ನು ತಂದಿಡುವುದರಿಂದ ಅವಮಾನದಿಂದ ಮುಕ್ತಿ ಸಿಗುತ್ತದೆ.


ಹಾವು ಶಿವನ ಆಭರಣ. ಆದ್ದರಿಂದ ಶ್ರಾವಣ ಮಾಸದ ಸೋಮವಾರದಂದು ಹಾವಿನ ಬೆಳ್ಳಿ ಮೂರ್ತಿಯನ್ನು ಮನೆಗೆ ತೆಗೆದುಕೊಂಡು ಬಂದು ಪ್ರತಿದಿನ ಪೂಜೆ ಮಾಡಿ. ನಂತರ ಶ್ರಾವಣ ಮಾಸದ ಕೊನೆಯ ದಿನ ಅದನ್ನು ಪವಿತ್ರವಾದ ನದಿಯಲ್ಲಿ ತೊಳೆದು ದೇವಸ್ಥಾನಕ್ಕೆ ನೀಡಿ. ಹೀಗೆ ಮಾಡಿದ್ರೆ ಜಾತಕದಲ್ಲಿರುವ ಪಿತೃದೋಷ ಹಾಗೂ ಸರ್ಪದೋಷ ನಿವಾರಣೆಯಾಗುತ್ತದೆ.
ಶ್ರಾವಣ ಮಾಸದಲ್ಲಿ ಕೊರಳಿಗೆ ರುದ್ರಾಕ್ಷಿ ಮಾಲೆಯನ್ನು ಧರಿಸಿದರೆ ಸಮೃದ್ಧಿ, ನೆಮ್ಮದಿ ಪ್ರಾಪ್ತಿಯಾಗುತ್ತದೆ. ಹಾಗೇ ಡಮರುಗ ಶಿವನ ಪವಿತ್ರ ವಾದ್ಯ. ಶ್ರಾವಣ ಮಾಸದಲ್ಲಿ ಡಮರುಗ ಮನೆಗೆ ತಂದು ಬಾರಿಸಿದರೆ ಮನೆಯಲ್ಲಿರುವ  ನಕರಾತ್ಮಕ ಶಕ್ತಿಗಳು ನಾಶವಾಗುತ್ತವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಮುಂದಿನ ಸುದ್ದಿ
Show comments