Webdunia - Bharat's app for daily news and videos

Install App

ಹಾಲಿನ ದರ ಏರಿಕೆಗೆ ಸಾರ್ವನಿಕರ ಆಕ್ರೋಶ: ಮೊದಲು ಉಚಿತ ಯೋಜನೆ ನಿಲ್ಲಿಸಿ ಎಂದ ನೆಟ್ಟಿಗರು

Krishnaveni K
ಸೋಮವಾರ, 2 ಡಿಸೆಂಬರ್ 2024 (08:46 IST)
ಬೆಂಗಳೂರು: ನಂದಿನಿ ಹಾಲಿನ ದರ ಮತ್ತೆ ಏರಿಕೆಯಾಗುವ ಸುದ್ದಿ ಬಂದಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ಅಡುಗೆ ಎಣ್ಣೆ, ಬೇಳೆ, ಕಾಳುಗಳ ಬೆಲೆ ಗಗನಕ್ಕೇರಿದ್ದು, ಈಗ ಹಾಲಿನ ದರವನ್ನು ಮತ್ತೊಮ್ಮೆ ಏರಿಕೆ ಮಾಡಲು ಹೊರಟಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
 

ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಹಾಲಿನ ದರ ಏರಿಕೆ ಮಾಡುವ ಸುಳಿವು ನೀಡಿದ್ದರು. ನಂದಿನಿ ಹಾಲಿನ ದರ ಏರಿಕೆ ಮಾಡಿ ಆ ಹಣವನ್ನು ರೈತರಿಗೆ ನೀಡುವುದಾಗಿ ಹೇಳಿದ್ದರು. ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಒಮ್ಮೆ ನಂದಿನಿ ಹಾಲಿನ ದರ ಏರಿಕೆ ಮಾಡಲಾಗಿತ್ತು. ಇದಾದ ಬಳಿಕ ಈಗ ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ದರ ಏರಿಕೆ ಮಾಡಲು ಸರ್ಕಾರ ಮುಂದಾಗಿದೆ.

ಈ ಬಾರಿ ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ, ಶಾಸಕ ಕೆ.ವೈ. ನಂಜೇಗೌಡ ಈ ಬಗ್ಗೆ ಸುಳಿವು ನೀಡಿದ್ದಾರೆ. ನಂದಿನಿ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿದ್ದು ಆ ಹಣವನ್ನು ರೈತರಿಗೆ ನೀಡಲಾಗುವುದು ಎಂದಿದ್ದಾರೆ. ಈ ಬಾರಿ 5 ರೂ.ವರೆಗೆ ದರ ಏರಿಕೆ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ.

ಆದರೆ ಬೆಲೆ ಏರಿಕೆ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೇ ಸಾರ್ವಜನಿಕರಿಂದ ತೀವ್ರ ಆಕ್ರೋಶ ಕೇಳಿಬಂದಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಮೊದಲು ಉಚಿತ ಗ್ಯಾರಂಟಿಗಳನ್ನು ನಿಲ್ಲಿಸಿ. ರೈತರಿಗೆ ನೀಡುತ್ತೇವೆ ಎನ್ನುವುದು ಒಂದು ನೆಪ. ಇದೆಲ್ಲಾ ಉಚಿತ ಗ್ಯಾರಂಟಿ ಯೋಜನೆಗಳ ಫಲ ಎಂದು ಆಕ್ರೋಶ ವಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments