Select Your Language

Notifications

webdunia
webdunia
webdunia
webdunia

ದೇವಸ್ಥಾನದಲ್ಲಿ ಚಪ್ಪಲಿ ಕಳುವಾದರೆ ಅದೃಷ್ಟವೋ ಅಥವಾ ದುರಾದೃಷ್ಟವೊ ಎಂದು ತಿಳಿಬೇಕಾ…?

ದೇವಸ್ಥಾನದಲ್ಲಿ ಚಪ್ಪಲಿ ಕಳುವಾದರೆ ಅದೃಷ್ಟವೋ ಅಥವಾ ದುರಾದೃಷ್ಟವೊ ಎಂದು ತಿಳಿಬೇಕಾ…?
ಬೆಂಗಳೂರು , ಶುಕ್ರವಾರ, 19 ಜನವರಿ 2018 (07:50 IST)
ಬೆಂಗಳೂರು : ದೇವಸ್ಥಾನಗಳಲ್ಲಿ ಚಪ್ಪಲಿ ಕಳ್ಳತನವಾಗುವುದು ಒಂದು ಸಾಮಾನ್ಯ ಸಂಗತಿ. ಚಪ್ಪಲಿ ಕಳ್ಳತನವಾದರೆ ಅದರಿಂದ ನಮಗೆ ಆಗುವುದು ನಷ್ಟವೇ. ಆದರೆ ಜ್ಯೋತಿಷ್ಯ ಶಾಸ್ತ್ರಪ್ರಕಾರ ಅದು ನಮಗಾಗುವ ಲಾಭದ ಸಂಕೇತವಂತೆ.

 
ಜ್ಯೋತಿಷ್ಯ ಶಾಸ್ತ್ರಪ್ರಕಾರ ದೇವಸ್ಥಾನದಲ್ಲಿ ಚಪ್ಪಲಿ ಕಳ್ಳತನವಾಗುವುದು ಶುಭ ಸಂಕೇತವೆನ್ನುತ್ತಾರೆ. ಅದರಲ್ಲೂ ಶನಿವಾರ ಚಪ್ಪಲಿ ಕಳುವಾದರೆ ತುಂಬಾ ಒಳ್ಳೆಯದು ಎನ್ನುತ್ತಾರೆ. ಇದರ ಅರ್ಥ ಶೀಘ್ರದಲ್ಲಿಯೇ ಕೆಟ್ಟಸಮಯ ಕಳೆಯಲಿದೆ ಎಂದು. ಶನಿದೋಷ ಕಳೆದು ಒಳ್ಳೆದಾಗಲಿದೆ ಎನ್ನುವುದರ ಸಂಕೇತವಿದು.

 
ದೇಹದ ಪ್ರತಿಯೊಂದು ಅಂಗಕ್ಕೂ ಗ್ರಹಗಳಿಗೂ ಸಂಬಂಧವಿದೆಯಂತೆ. ಪಾದಗಳನ್ನನು ಶನಿ ಗ್ರಹಕ್ಕೆ ಹೋಲಿಸಲಾಗಿದೆ. ಹಾಗೆ ಚಪ್ಪಲಿಗಳು ಕಳುವಾದರೆ ಅದಕ್ಕೆ ಶನಿಯೇ ಕಾರಣ. ಹಾಗಾಗಿ ಶನಿವಾರ ಚಪ್ಪಲಿ ದಾನ ಮಾಡಿದರೆ ಶನಿ ಪ್ರಸನ್ನನಾಗುತ್ತಾನೆ. ಶೀಘ್ರದಲ್ಲಿಯೆ ಅದೃಷ್ಟದ ದಾರಿ ತೋರಿಸುತ್ತಾನೆ. ಆದ್ದರಿಂದ  ಯಾವುದೇ ಕೆಲಸ ಕೈಗೂಡದೆ ತೊಂದರೆಯಲ್ಲಿದ್ದ ವೇಳೆ ಚಪ್ಪಲಿ ಕಳುವಾದ್ರೆ ದುಃಖ ಪಡುವ ಬದಲು ಖುಷಿಯಾಗಿರಿ. ಇದು ಶನಿ ದೋಷ ನಿವಾರಣೆಯಾಗುತ್ತಿದೆ ಎಂಬುದರ ಮುನ್ಸೂಚನೆ ಎಂಬುದನ್ನು ಮರೆಯಬೇಡಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿ ವಾಸ್ತು ಪ್ರಕಾರ ಕೋಣೆಗಳು ಯಾವ ಯಾವ ದಿಕ್ಕಿಗೆ ಇರಬೇಕು ಎಂದು ತಿಳಿಬೇಕಾ...?