Webdunia - Bharat's app for daily news and videos

Install App

ಜಾತಕದಲ್ಲಿರುವ ನವಗ್ರಹ ದೋಷಕ್ಕೆ ಈ ನವಧಾನ್ಯಗಳ ದಾನವೇ ಪರಿಹಾರ

Webdunia
ಭಾನುವಾರ, 10 ಜೂನ್ 2018 (13:56 IST)
ಬೆಂಗಳೂರು : ಹೆಚ್ಚಿನವರ ಜಾತಕದಲ್ಲಿ ಗ್ರಹದೋಷಗಳು ಕಂಡುಬರುತ್ತದೆ. ಇದರಿಂದ ಅವರು ಅನೇಕ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ. ಈ ದೋಷಗಳನ್ನು ನಿವಾರಿಸಲು ನವಧಾನ್ಯಗಳ ದಾನ ನೀಡಬೇಕಾಗುತ್ತದೆ. ನವಧಾನ್ಯಗಳ ಸೇವನೆಯಿಂದ ಆರೋಗ್ಯ ಸುಧಾರಿಸುವುದು ಮಾತ್ರವಲ್ಲ ಇದರಿಂದ ಗ್ರಹದೋಷಗಳನ್ನು ಪರಿಹರಿಸಿಕೊಳ್ಳಬಹುದು. ಯಾವ ಗ್ರಹದೋಷಕ್ಕೆ ಯಾವ ಧಾನ್ಯ ದಾನ ಮಾಡಬೇಕು ಎಂಬುದು ಇಲ್ಲಿದೆ ನೋಡಿ.


*ಸೂರ್ಯ ಗ್ರಹದಿಂದ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ  ಪ್ರತಿ ಭಾನುವಾರ ನವಗ್ರಹಗಳಿಗೆ 2 ಪ್ರದಕ್ಷಿಣೆ ಹಾಕಿ ¼ ಕೆಜಿ ಗೋಧಿಯನ್ನು ದಕ್ಷಿಣೆ ಸಹಿತ ಧಾನ ಮಾಡಬೇಕು.

*ಚಂದ್ರ ಗ್ರಹದಿಂದ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ  ಪ್ರತಿ ಸೋಮವಾರ ನವಗ್ರಹಗಳಿಗೆ 5 ಪ್ರದಕ್ಷಿಣೆ ಹಾಕಿ 1/4 ಕೆಜಿ ಅಕ್ಕಿ ದಕ್ಷಿಣೆ ಸಹಿತ ದಾನ ಮಾಡಬೇಕು.

*ಕುಜ ಗ್ರಹ ದೋಷಕ್ಕೆ ಪ್ರತಿ ಮಂಗಳವಾರ ನವಗ್ರಹಗಳಿಗೆ 9 ಪ್ರದಕ್ಷಿಣೆ ಹಾಕಿ 100ಗ್ರಾಂ ತೊಗರಿಬೇಳೆ ದಕ್ಷಿಣೆ ಸಹಿತ ದಾನ ಮಾಡಬೇಕು.

* ಬುಧ ಗ್ರಹದಿಂದ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ  ಪ್ರತಿ ಬುಧವಾರ ನವಗ್ರಹಗಳಿಗೆ 4ಪ್ರದಕ್ಷಣೆ ಹಾಕಿ 100 ಗ್ರಾಂ ಹೆಸರುಕಾಳು ದಾನ ಮಾಡಬೇಕು.

* ಗುರು ಗ್ರಹ ದೋಷ ನಿವಾರಣೆಗೆ ಪ್ರತಿ ಗುರುವಾರ ನವಗ್ರಹಗಳಿಗೆ 5 ಪ್ರದಕ್ಷಿಣೆ ಹಾಕಿ 100ಗ್ರಾಂ ಕಡಲೆಕಾಳು ಸಹಿತ ದಾನ ಮಾಡಬೇಕು.

* ಶುಕ್ರ ಗ್ರಹ ದೋಷ ನಿವಾರಣೆಗೆ ಪ್ರತಿ ಶುಕ್ರವಾರ ನವಗ್ರಹಗಳಿಗೆ 6 ಪ್ರದಕ್ಷಿಣೆ ಹಾಕಿ 100 ಗ್ರಾಂ ಅವರೆಕಾಳು ದಕ್ಷಿಣೆ ಸಹಿತ ದಾನ ಮಾಡಬೇಕು.
*  ಶನಿ ಗ್ರಹ ದೋಷಕ್ಕೆ ಪ್ರತಿ ಶನಿವಾರ ನವಗ್ರಹಗಳಿಗೆ 7 ಪ್ರದಕ್ಷಿಣೆ ಹಾಕಿ 50ಗ್ರಾಂ ಕಪ್ಪು ಎಳ್ಳು ದಕ್ಷಿಣೆ ಸಹಿತ ದಾನ ಮಾಡಬೇಕು.

*ರಾಹು ಗ್ರಹ ದೋಷಕ್ಕೆ ಪ್ರತಿ ಶನಿವಾರ ನವಗ್ರಹಗಳಿಗೆ 9 ಪ್ರದಕ್ಷಿಣೆ ಹಾಕಿ 100 ಗ್ರಾಂ ಉದ್ದಿನಬೇಳೆ ಸಹಿತ ದಾನ ಮಾಡಬೇಕು.

* ಕೇತು ಗ್ರಹ ದೋಷಕ್ಕೆ ಪ್ರತಿ ಮಂಗಳವಾರ ನವಗ್ರಹಗಳಿಗೆ 9 ಪ್ರದಕ್ಷಿಣೆ ಹಾಕಿ 100 ಗ್ರಾಂ ಹುರುಳಿಕಾಳು ದಕ್ಷಿಣೆ ಸಹಿತ ದಾನ ಮಾಡಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments