Webdunia - Bharat's app for daily news and videos

Install App

ಗರುಡ ಪುರಾಣದ ಪ್ರಕಾರ ಸಾವು ಸಮೀಪಿಸಿದ ವ್ಯಕ್ತಿಗೆ ಏನೆಲ್ಲಾ ಅನುಭವವಾಗುತ್ತದೆ

Krishnaveni K
ಬುಧವಾರ, 22 ಮೇ 2024 (09:32 IST)
Photo Courtesy: Twitter
ಬೆಂಗಳೂರು: ಗರುಡ ಪುರಾಣದಲ್ಲಿ ಸಾವು ಸಂಭವಿಸುವ ಕೆಲವೇ ಕ್ಷಣಗಳ ಮೊದಲು ಮತ್ತ ಸಾವಿನ ನಂತರ ಏನೆಲ್ಲಾ ಆಗುತ್ತದೆ ಎಂದು ವಿವರವಾಗಿ ಹೇಳಲಾಗಿದೆ. ಅದರಲ್ಲಿ ಪ್ರಮುಖ ಅಂಶಗಳನ್ನು ಇಲ್ಲಿ ನೀಡಿದ್ದೇವೆ ನೋಡಿ.

ಗರುಡ ಪುರಾಣದ ಪ್ರಕಾರ ಸಾವು ಸಮೀಪಿಸುವಾಗ ಆ ವ್ಯಕ್ತಿಗೆ ಅದರ ಸೂಚನೆ ಲಭಿಸುತ್ತದೆ. ಸಾವಿನ ಕೆಲವೇ ಸಮಯದ ಮೊದಲು ಆತ ತನ್ನ ಜೀವನದಲ್ಲಿ ಮಾಡಿದ ತಪ್ಪುಗಳು ಮತ್ತು ತನ್ನ ಬಾಲ್ಯದಿಂದ ಹಿಡಿದು ಇಲ್ಲಿಯವರೆಗಿನ ಬದುಕಿನ ಬಗ್ಗೆ ಮೆಲುಕು ಹಾಕಲು ಪ್ರಯತ್ನಿಸುತ್ತಾನೆ.

ಸಾವಿನ ಕೆಲವೇ ಕ್ಷಣಗಳ ಮೊದಲು ಒಬ್ಬ ವ್ಯಕ್ತಿ ಕೆಲವೊಂದು ಅರ್ಥವೇ ಆಗದಂತಹ ಮಾತುಗಳನ್ನು ಆಡುತ್ತಾನೆ. ಕೆಲವರು ತಮ್ಮ ತಪ್ಪುಗಳ ಬಗ್ಗೆ ಪಶ್ಚಾತ್ತಾಪ ಪಟ್ಟುಕೊಂಡರೆ ಮತ್ತೆ ಕೆಲವರು ತಾವು ಮಾಡಿದ ಕರ್ಮಗಳನ್ನು ನೆನೆಸಿಕೊಳ‍್ಳುತ್ತಾರೆ. ಸಾವು ಸಮೀಪಿಸುವ ಸಂದರ್ಭದಲ್ಲಿ ಒಬ್ಬ ವ್ಯಕ್ತಿಗೆ ಪೂರ್ವಜರು ಕನಸಿನಲ್ಲಿ ಬರುತ್ತಾರೆ. ಕೆಲವೊಮ್ಮೆ ಪೂರ್ವಜರು ನಗುತ್ತಿರುವಂತೆ ಮತ್ತೆ ಕೆಲವರಿಗೆ ರೋಧಿಸುತ್ತಿರುವಂತೆ ಕಂಡುಬರುತ್ತದೆ.

ಸಾವು ಸಮೀಪ ಬಂದಾಗ ವ್ಯಕ್ತಿಯು ಯಮದೂತರನ್ನು ನೋಡುತ್ತಾನೆ. ಕೆಲವರು ಆತನನ್ನು ನೋಡಿ ನಕ್ಕರೆ ಮತ್ತೆ ಕೆಲವರು ಬೇಸರಗೊಳ್ಳುತ್ತಾರೆ. ಸಾವು ಬಂದ ತಕ್ಷಣ ಒಂದು ಬಾಗಿಲು ತೆರೆಯುತ್ತದೆ. ಅಲ್ಲಿ ಕೆಲವರಿಗೆ ಜ್ವಾಲೆ ಕಂಡರೆ ಮತ್ತೆ ಕೆಲವರಿಗೆ ಪ್ರಕಾಶಮಾನವಾದ ಬೆಳಕು ಕಂಡುಬರುತ್ತದೆ. ಅವರವರ ಕರ್ಮಗಳಿಗೆ ಅನುಸಾರವಾಗಿ ಹೀಗೆ ಕಂಡುಬರುತ್ತದೆ ಎಂದು ಗರುಡಪುರಾಣದಲ್ಲಿ ಹೇಳಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

Shiva Chalisa: ಸೋಮವಾರ ಭಕ್ತಿಯಿಂದ ಶಿವ ಚಾಲೀಸಾ ಓದಿ

Hanuman Mantra: ಹನುಮಂತನ ಅನುಗ್ರಹಕ್ಕಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಓದಿ

Saraswathi Mantra: ವಿದ್ಯೆಯಲ್ಲಿ ಯಶಸ್ಸು ಸಿಗಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments