ಲಕ್ಷ್ಮೀ ದೇವಿಗೆ ಹಾಲಿನ ನೈವೇದ್ಯ ಮಾಡಬೇಕು ಯಾಕೆ

Krishnaveni K
ಶುಕ್ರವಾರ, 3 ಏಪ್ರಿಲ್ 2026 (08:38 IST)
ಶುಕ್ರವಾರವೆಂದರೆ ಲಕ್ಷ್ಮೀ ದೇವಿಗೆ ವಿಶೇಷವಾದ ದಿನವಾಗಿದೆ. ಲಕ್ಷ್ಮೀ ದೇವಿಯ ಪೂಜೆ ಮಾಡುವಾಗ ಹಾಲಿನ ನೈವೇದ್ಯ ಮಾಡಲಾಗುತ್ತದೆ. ಲಕ್ಷ್ಮೀ ದೇವಿಗೆ ಹಾಲಿನ ನೈವೇದ್ಯ ವಿಶೇಷ ಯಾಕೆ?

ಹಾಲು ಸಾತ್ವಿಕ ಆಹಾರ ವಸ್ತು. ಇದು ಪರಿಶುದ್ಧತೆಯ ಸಂಕೇತ. ದೇವಿಗೆ ನೈವೇದ್ಯ ನೀಡುವಾಗ ಪರಿಶುದ್ಧ ಮನಸ್ಸಿನಿಂದ ಹಾಲಿನಷ್ಟೇ ಶುದ್ಧ ಮನಸ್ಸಿನಿಂದ ನೀಡಬೇಕು. ಲಕ್ಷ್ಮೀ ದೇವಿಗೆ ಹಾಲು ವಿಶೇಷವಾಗಿರುವುದಕ್ಕೆ ಕಾರಣವೂ ಇದೆ.

ಪೌರಾಣಿಕ ಹಿನ್ನಲೆ ಪ್ರಕಾರ ಸಮುದ್ರ ಮಥನ ಸಂದರ್ಭದಲ್ಲಿ ಲಕ್ಷ್ಮೀ ದೇವಿಯು ಕ್ಷೀರ ಸಾಗರದಿಂದ ಉದ್ಭವವಾಗುತ್ತಾಳೆ. ಸಂಸ್ಕೃತದಲ್ಲಿ ಕ್ಷೀರ ಎಂದರೆ ಹಾಲು ಎಂದರ್ಥ. ಹಾಲಿನ ಕಡಲು ಲಕ್ಷ್ಮೀ ದೇವಿಯ ಉಗಮ ಸ್ಥಾನ ಎನ್ನಲಾಗುತ್ತದೆ. ಹೀಗಾಗಿ ಹಾಲಿನ ನೈವೇದ್ಯವಿಡುವುದು ವಿಶೇಷವಾಗಿದೆ.

ಹಾಲಿನ ಅರ್ಪಣೆ ಲಕ್ಷ್ಮೀ ದೇವಿಯನ್ನು ಶಾಂತವಾಗಿಡುತ್ತದಂತೆ. ಹಾಲನ್ನು ನೈವೇದ್ಯ ಮಾಡುವುದರಿಂದ ಮನೆಯಲ್ಲೂ ಶಾಂತಿ, ನೆಮ್ಮದಿ ನೆಲೆಸುವುದು ಎಂಬ ನಂಬಿಕೆಯಿದೆ. ಈ ಕಾರಣಕ್ಕೆ ಲಕ್ಷ್ಮೀ ದೇವಿಗೆ ಹಾಲಿನ ನೈವೇದ್ಯ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಅಕಾಲ ಮೃತ್ಯು ಭಯ ನಿವಾರಣೆಗೆ ಮಹಾಮೃತ್ಯುಂಜಯ ಸ್ತೋತ್ರ ಓದಿ

ಸೂರ್ಯಗ್ರಹ ಅನುಗ್ರಹಕ್ಕಾಗಿ ಈ ಮಂತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತುತಿ ಪಠಿಸಿ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಮುಂದಿನ ಸುದ್ದಿ
Show comments