ರಾಹುಕಾಲದಲ್ಲಿ ಶುಭ ಕೆಲಸ ಯಾಕೆ ಮಾಡಬಾರದು

Krishnaveni K
ಗುರುವಾರ, 23 ಮೇ 2024 (12:18 IST)
ಬೆಂಗಳೂರು: ಹಿರಿಯರು ರಾಹುಕಾಲದಲ್ಲಿ ಪ್ರಯಾಣ ಮಾಡಬಾರದು, ಶುಭ ಕೆಲಸ ಮಾಡಲು ಎಂದು ಹೇಳುತ್ತಾರೆ. ಆದರೆ ರಾಹು ಕಾಲ ದಿನದಲ್ಲಿ ಎಷ್ಟು ಹೊತ್ತು ಇರುತ್ತದೆ. ಆ ಹೊತ್ತಿನಲ್ಲಿ ಶುಭ ಕೆಲಸ ಮಾಡಬಾರದೇಕೆ ಎಂದು ನೋಡೋಣ.

ರಾಹು ಎಂಬುದು ಅಶುಭದ ಸಂಕೇತವಾಗಿದ್ದು, ಇದು ದೇವಾನುದೇವತೆಗಳನ್ನೂ ಬಿಟ್ಟಿಲ್ಲ. ರಾಹುಕಾಲವನ್ನು ಪ್ರತಿಕೂಲದ ಸಮಯ ಎಂದೇ ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ. ಈ ಕಾಲದಲ್ಲಿ ಯಾವುದೇ ಮಂಗಳಕರ ಕೆಲಸವನ್ನು ಮಾಡುವುದು ನಿಷಿದ್ಧವಾಗಿದೆ. ಸೂರ್ಯೋದಯ ಮತ್ತು ಅಸ್ತಮದ ನಡುವೆ ಸುಮಾರು 90 ನಿಮಿಷಗಳ ಅವಧಿ ರಾಹುಕಾಲವಿರುತ್ತದೆ.

ಈ ಸಮಯದಲ್ಲಿ ಹೊಸ ಉದ್ಯೋಗಕ್ಕೆ ಹೋಗುವುದು, ಹೊಸ ಕೆಲಸಗಳಿಗೆ ಕೈ ಹಾಕುವುದು, ಮಂಗಳಕಾರ್ಯ ನೆರವೇರಿಸುವುದು, ಪ್ರಯಾಣ ಮಾಡುವುದು ಮಾಡಿದರೆ ಯಶಸ್ಸು ಸಿಗುವುದಿಲ್ಲ. ರಾಹುಕಾಲದಲ್ಲಿ ಪ್ರಯಾಣ ಮಾಡುವುದರಿಂದ ಅಪಘಾತ ಭಯವಿರುತ್ತದೆ. ಕೆಲಸಕ್ಕೆ ಕೈ ಹಾಕಿದರೆ ಅದು ಪೂರ್ತಿಯಾಗದೇ ಇರಬಹುದು.

ಒಂದು ವೇಳೆ ಅನಿವಾರ್ಯವಾಗಿ ರಾಹುಕಾಲದ ಸಮಯಕ್ಕೇ ಪ್ರಯಾಣ ಮಾಡಬೇಕೆಂದಾದರೆ ಹನುಮಂತನನ್ನು ಪೂಜಿಸಿ ಅಥವಾ ಆಂಜನೇಯನ ಮಂತ್ರ ಜಪಿಸಿ ಕೆಲಸ ಮುಂದುವರಿಸಿ. ರಾಹುಕಾಲದಲ್ಲಿ ಹೊರಡಲೇಬೇಕೆಂದಾದರೆ ಮೊಸರು, ಸಕ್ಕರೆಯಂತಹ ಮಂಗಳಕರ ವಸ್ತು ಸೇವಿಸಿ ಮನೆಯಿಂದ ಹೊರಟರೆ ರಾಹುವಿನ ಪ್ರಭಾವ ತಕ್ಕಮಟ್ಟಿಗೆ ಕಡಿಮೆಯಾಗಬಹುದು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments