Webdunia - Bharat's app for daily news and videos

Install App

ಧನುರ್ಮಾಸದಲ್ಲಿ ವಿಷ್ಣುವಿನ ಆರಾಧನೆಯಿಂದ ಸಿಗುತ್ತದೆ ಭಾರೀ ಪ್ರತಿಫಲ

Sampriya
ಬುಧವಾರ, 8 ಜನವರಿ 2025 (18:23 IST)
Photo Courtesy X
ಹಿಂದೂ ಧರ್ಮಗಳ ಪವಿತ್ರ ಆಚರಣೆಗಳಲ್ಲಿ ಧನುರ್ಮಾಸ ಒಂದು. ಈ ಮಾಸದಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ವಿಷ್ಣುವಿನ ಪೂಜೆ ಮಾಡುವುದು ಶ್ರೇಷ್ಠ ಎನ್ನುತ್ತಾರೆ.

ಸೌರ ಮಂಡಲದ ರಾಜನಾದ ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಂಚರಿಸುತ್ತಾನೆ. ಈ ಸಂಚಾರಕ್ಕೆ ತೆಗೆದುಕೊಳ್ಳುವ ಅವಧಿ 30 ದಿನಗಳು. ಅಂದರೆ ಡಿಸೆಂಬರ್‌ 16ರಂದು ಸೂರ್ಯನು ಧನುರಾಶಿಯನ್ನು ಪ್ರವೇಶಿಸಿದ್ದು ಮಕರ ರಾಶಿಯನ್ನು ಪ್ರವೇಶಿಸಲು ಒಂದು ತಿಂಗಳ ಕಾಲಾವಕಾಶವನ್ನು ಪಡೆಯುತ್ತಾನೆ. ಈ ಅವಧಿಯನ್ನೇ 'ಧನುರ್ಮಾಸ' ಎಂದು ಕರೆಯುತ್ತಾರೆ.

ಯೋಗ ನಿದ್ರೆಯಿಂದ ಏಳುವ ಮಹಾವಿಷ್ಣುವಿಗೆ ಧನುರ್ಮಾಸವು ಅರುಣೋದಯದ ಸಮಯವಾಗಿರುತ್ತದೆ. ಈ ಸಂದರ್ಭದಲ್ಲಿ ಮಡಿಯಿಂದ ಪೂಜೆ, ಧ್ಯಾನ, ಉಪವಾಸ ಹಾಗೂ ದಾನದಂತಹ  ಮಹಾನ್ ಕಾರ್ಯಗಳನ್ನು ಮಾಡುವುದರಿಂದ ಭಾರೀ ಪ್ರತಿಫಲ ಸಿಗುತ್ತದೆ ಎಂಬ ನಂಬಿಕೆಯಿದೆ.

ಈ ಮಾಸದಲ್ಲಿ ಮದುವೆ, ಗೃಹಪ್ರವೇಶ ಸೇರಿದಂತೆ ಹೊಸ ಆರಂಭಗಳನ್ನು ಮಾಡಿದರೆ ಕೇಡಾಗುತ್ತದೆ ಎಂಬ ನಂಬಿಕೆಯಿದೆ.

ಈ ಮಾಸದಲ್ಲಿ ಮೈಕೊರೆಯುವ ಚಳಿಯಿರುತ್ತದೆ. ಆದರೂ ಭಕ್ತರೂ ಭಕ್ತಿಯಿಂದ ಪೂಜೆಯಲ್ಲಿ ದೇಶದಾದ್ಯಂತ ಪಾಲ್ಗೊಳ್ಳುತ್ತಾರೆ. ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಧನುರ್ಮಾಸವನ್ನು ವಿಶೇಷವಾಗಿ ಆಚರಿಸುತ್ತಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments