Webdunia - Bharat's app for daily news and videos

Install App

ಧನುರ್ಮಾಸದಲ್ಲಿ ವಿಷ್ಣುವಿನ ಆರಾಧನೆಯಿಂದ ಸಿಗುತ್ತದೆ ಭಾರೀ ಪ್ರತಿಫಲ

Sampriya
ಬುಧವಾರ, 8 ಜನವರಿ 2025 (18:23 IST)
Photo Courtesy X
ಹಿಂದೂ ಧರ್ಮಗಳ ಪವಿತ್ರ ಆಚರಣೆಗಳಲ್ಲಿ ಧನುರ್ಮಾಸ ಒಂದು. ಈ ಮಾಸದಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ವಿಷ್ಣುವಿನ ಪೂಜೆ ಮಾಡುವುದು ಶ್ರೇಷ್ಠ ಎನ್ನುತ್ತಾರೆ.

ಸೌರ ಮಂಡಲದ ರಾಜನಾದ ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಂಚರಿಸುತ್ತಾನೆ. ಈ ಸಂಚಾರಕ್ಕೆ ತೆಗೆದುಕೊಳ್ಳುವ ಅವಧಿ 30 ದಿನಗಳು. ಅಂದರೆ ಡಿಸೆಂಬರ್‌ 16ರಂದು ಸೂರ್ಯನು ಧನುರಾಶಿಯನ್ನು ಪ್ರವೇಶಿಸಿದ್ದು ಮಕರ ರಾಶಿಯನ್ನು ಪ್ರವೇಶಿಸಲು ಒಂದು ತಿಂಗಳ ಕಾಲಾವಕಾಶವನ್ನು ಪಡೆಯುತ್ತಾನೆ. ಈ ಅವಧಿಯನ್ನೇ 'ಧನುರ್ಮಾಸ' ಎಂದು ಕರೆಯುತ್ತಾರೆ.

ಯೋಗ ನಿದ್ರೆಯಿಂದ ಏಳುವ ಮಹಾವಿಷ್ಣುವಿಗೆ ಧನುರ್ಮಾಸವು ಅರುಣೋದಯದ ಸಮಯವಾಗಿರುತ್ತದೆ. ಈ ಸಂದರ್ಭದಲ್ಲಿ ಮಡಿಯಿಂದ ಪೂಜೆ, ಧ್ಯಾನ, ಉಪವಾಸ ಹಾಗೂ ದಾನದಂತಹ  ಮಹಾನ್ ಕಾರ್ಯಗಳನ್ನು ಮಾಡುವುದರಿಂದ ಭಾರೀ ಪ್ರತಿಫಲ ಸಿಗುತ್ತದೆ ಎಂಬ ನಂಬಿಕೆಯಿದೆ.

ಈ ಮಾಸದಲ್ಲಿ ಮದುವೆ, ಗೃಹಪ್ರವೇಶ ಸೇರಿದಂತೆ ಹೊಸ ಆರಂಭಗಳನ್ನು ಮಾಡಿದರೆ ಕೇಡಾಗುತ್ತದೆ ಎಂಬ ನಂಬಿಕೆಯಿದೆ.

ಈ ಮಾಸದಲ್ಲಿ ಮೈಕೊರೆಯುವ ಚಳಿಯಿರುತ್ತದೆ. ಆದರೂ ಭಕ್ತರೂ ಭಕ್ತಿಯಿಂದ ಪೂಜೆಯಲ್ಲಿ ದೇಶದಾದ್ಯಂತ ಪಾಲ್ಗೊಳ್ಳುತ್ತಾರೆ. ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಧನುರ್ಮಾಸವನ್ನು ವಿಶೇಷವಾಗಿ ಆಚರಿಸುತ್ತಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ಕೃಪಾಕಟಾಕ್ಷಕ್ಕಾಗಿ ಇಂದು ತಪ್ಪದೇ ಈ ಮಂತ್ರವನ್ನು ಜಪಿಸಿ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಮುಂದಿನ ಸುದ್ದಿ
Show comments