Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 14 ಡಿಸೆಂಬರ್ 2018 (08:41 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸುದೀರ್ಘ ಕಾಲದಿಂದ ಕಾಡುತ್ತಿದ್ದ ಸಾಂಸಾರಿಕ ಸಮಸ್ಯೆಗೆ ಇಂದು ಪರಿಹಾರ ಸಿಕ್ಕಿ ನೆಮ್ಮದಿ ಕಾಣುವಿರಿ. ಮೇಲಧಿಕಾರಿಗಳೊಂದಿಗೆ ವರ್ತಿಸುವಾಗ ಎಚ್ಚರವಿರಲಿ. ವಿದ್ಯಾರ್ಥಿಗಳಿಗೆ ಶುಭ ದಿನ.

ವೃಷಭ: ಧನ ಲಾಭದ ಯೋಗವಿದೆ. ಆರೋಗ್ಯದ ಬಗ್ಗೆ ಎಚ್ಚರವಿರಲಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲವಿದ್ದರೆ ಯಶಸ್ಸು ಸಾಧ್ಯ.

ಮಿಥುನ: ವ್ಯಾಜ್ಯ ವಿಚಾರವಾಗಿ ನ್ಯಾಯಕ್ಕಾಗಿ ಓಡಾಡಬೇಕಾದೀತು. ಪ್ರಯತ್ನದಿಂದ ಯಶಸ್ಸು ಸಾಧ್ಯ. ಅಂದುಕೊಂಡ ಫಲ ಸಿಗದಿದ್ದರೆ ನಿರಾಸೆ ಬೇಡ.

ಕರ್ಕಟಕ: ದೇವತಾ ಕಾರ್ಯಗಳನ್ನು ಕೈಗೊಳ್ಳುವಿರಿ. ದೇವರ ಅನುಗ್ರಹದೊಂದಿಗೆ ಉದ್ದೇಶಿತ ಕಾರ್ಯ ಸಾಧುವಾಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿಯಿದೆ.

ಸಿಂಹ: ಇತಿ ಮಿತಿಯಲ್ಲಿ ಖರ್ಚು ಮಾಡಿ. ಅವಿವಾಹಿತರಿಗೆ ಕಂಕಣ ಭಾಗ್ಯವಿದೆ. ದೂರ ಸಂಚಾರ ಮಾಡಬೇಕಾಗಿ ಬರಬಹುದು, ಎಚ್ಚರವಿರಲಿ.

ಕನ್ಯಾ: ಹೊಸ ವಸ್ತುಗಳ ಖರೀದಿ ಮಾಡುವಿರಿ. ಸಾಂಸಾರಿಕವಾಗಿ ಬೆಂಬಲ ಸಿಗುವುದು. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ, ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಸಾಲ ಕೊಡುವ ಮುನ್ನ ಯೋಚಿಸಿ. ಸುತ್ತಮುತ್ತಲಿನವರಿಂದ ಮೋಸ, ವಂಚನೆಗೊಳಗಾಗುವ ಸಾಧ್ಯತೆಯಿದೆ.

ವೃಶ್ಚಿಕ: ಸ್ವಯಂ ತಪ್ಪುಗಳಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲದಿಂದ ಯಶಸ್ಸು. ವೃತ್ತಿ ಜೀವನದಲ್ಲಿ ಕಠಿಣ ಪರಿಶ್ರಮ ಅಗತ್ಯ. ದಿನದಂತ್ಯಕ್ಕೆ ಶುಭ ಸುದ್ದಿ ಕೇಳುವಿರಿ.

ಧನು: ದಾಂಪತ್ಯ ಸುಖ ಅನುಭವಿಸುವಿರಿ. ದೂರ ಸಂಚಾರ ಮಾಡುವ ಸಾಧ್ಯತೆಯಿದೆ. ಅಂದುಕೊಂಡ ಕಾರ್ಯಗಳು ನೆರವೇರಿ ಸಂತಸದ ದಿನ ನಿಮ್ಮದಾಗಲಿದೆ.

ಮಕರ: ಯಾರನ್ನೂ ಅತಿಯಾಗಿ ನಂಬಲು ಹೋಗಬೇಡಿ. ವಂಚನೆಗೊಳಗಾಗುವ ಸಾಧ್ಯತೆಯಿದೆ. ವೃತ್ತಿಯಲ್ಲಿ ಮೇಲ್ವರ್ಗದವರಿಂದ ಕಿರಿ ಕಿರಿ ಇರುತ್ತದೆ.

ಕುಂಭ: ನಿಮ್ಮ ನಾಲಿಗೆ ಇಂದು ನಿಮ್ಮ ಹಿಡಿತದಲ್ಲಿದ್ದರೆ ಒಳಿತು. ಬಾಯಿ ತಪ್ಪಿ ಆಡುವ ಮಾತಿನಿಂದ ನಿಷ್ಠುರರಾಗುವ ಸಂಭವವಿದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ.

ಮೀನ: ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಮಾಡುವಿರಿ. ಅವಿವಾಹಿತರಿಗೆ ಕಂಕಣ ಬಲ ಸಾಧ್ಯತೆಯಿದೆ. ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.        

Share this Story:

Follow Webdunia kannada

ಮುಂದಿನ ಸುದ್ದಿ

ಗೋಮೂತ್ರದಿಂದ ಹೀಗೆ ಮಾಡಿದರೆ ಆರ್ಥಿಕ ಸಮಸ್ಯೆ ದೂರವಾಗುತ್ತದೆಯಂತೆ