Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 22 ಡಿಸೆಂಬರ್ 2018 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನೆಯಲ್ಲಿ ಅಶಾಂತಿಯ ವಾತಾವರಣವಿರುತ್ತದೆ. ವೃತ್ತಿ ಜೀವನದಲ್ಲಿ ಒತ್ತಡದ ಕಾರ್ಯ ಕೆಲಗಳಿಂದ ಹೈರಾಣಾಗುತ್ತೀರಿ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಷಭ: ಕಾರ್ಯ ಕ್ಷೇತ್ರದಲ್ಲಿ ಜಯಗಳಿಸಿ ನೆಮ್ಮದಿ ಹೊಂದುವಿರಿ. ಕುಟುಂಬದವರ ಸಹಕಾರದಿಂದ ಸಂತಸದ ದಿನ ಕಳೆಯುವಿರಿ. ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.

ಮಿಥುನ: ಯಾವುದೋ ಬೇಡದ ಆಲೋಚನೆಗಳಿಂದ ಮಾನಸಿಕ ಕಿರಿ ಕಿರಿ ಅನುಭವಿಸುವಿರಿ. ಆರ್ಥಿಕವಾಗಿ ಲಾಭ ಗಳಿಸುವಿರಿ. ವೃತ್ತಿ ರಂಗದಲ್ಲಿ ಬಡ್ತಿಗೆ ಅವಕಾಶವಿದೆ.

ಕರ್ಕಟಕ: ಆದಾಯ ಗಳಿಕೆಯಿಂದ ಆರ್ಥಿಕ ಸಮಸ್ಯೆಗಳು ದೂರವಾಗುವುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ವೃತ್ತಿ ರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಹೊಂದಾಣಿಕೆ ಅಗತ್ಯ.

ಸಿಂಹ: ಕುಟುಂಬದವರ ಸಹಕಾರದಿಂದ ನೆಮ್ಮದಿಯ ವಾತಾವರಣವಿರುತ್ತದೆ. ಅವಿವಾಹಿತರಿಗೆ ಕಂಕಣ ಬಲ ಸಾಧ್ಯತೆಯಿದೆ. ಖರ್ಚು ವೆಚ್ಚದ ಬಗ್ಗೆ ಎಚ್ಚರವಿರಲಿ.

ಕನ್ಯಾ: ಕಾರ್ಯ ಸಾಧನೆಗಾಗಿ ಹೆಚ್ಚಿನ ಓಡಾಟ ನಡೆಸಬೇಕಾದೀತು. ವೃತ್ತಿ ರಂಗದಲ್ಲಿ ಸಮಸ್ಥಿತಿ ಮುಂದುವರಿಯಲಿದೆ. ದೇವರ ದರ್ಶನ ಪಡೆಯುವಿರಿ.

ತುಲಾ: ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ನಿರಾಶೆಯಾಗಬಹುದು. ಸಹೋದ್ಯೋಗಿಗಳಿಂದ ಕಿರಿ ಕಿರಿ ಅಥವಾ ವಂಚನೆ ಆಗಬಹುದು. ಕುಟುಂಬದವರೊಂದಿಗೆ ಎಚ್ಚರಿಕೆಯಿಂದ ಚರ್ಚಿಸಿ.

ವೃಶ್ಚಿಕ: ಅಂದುಕೊಂಡ ಕಾರ್ಯಗಳು ನಿಧಾನಗತಿಯಿಂದ ನಡೆದು ಕೊಂಚ ಮನಸ್ಸಿಗೆ ಕಿರಿ ಕಿರಿ ಆಗಬಹುದು. ಖರ್ಚು ವೆಚ್ಚಗಳು ಅಧಿಕವಾಗುವುದು. ಉದ್ಯೋಗ ಬದಲಾವಣೆ ಸಾಧ್ಯತೆಯಿದೆ.

ಧನು: ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಸಾಧ್ಯತೆಯಿದೆ. ಮಿತ್ರರೊಂದಿಗೆ ವಿಶ್ರಾಂತಿಯ ದಿನದ ಮಜಾ ಅನುಭವಿಸುವಿರಿ. ಮಂಗಲ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

ಮಕರ: ಬೇಡದ ಅಪವಾದದ ಭೀತಿ ಎದುರಿಸಬೇಕಾದೀತು. ಇಂಜಿನಿಯರಿಂಗ್ ವೃತ್ತಿಯವರಿಗೆ ಯಶಸ್ಸು. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲದಿಂದ ಯಶಸ್ಸು.

ಕುಂಭ: ಶತ್ರುಕಾಟವಿದ್ದರೂ ನಿಮ್ಮ ಯಶಸ್ಸಿಗೆ ತೊಂದರೆಯಿಲ್ಲ. ಮನಸ್ಸಿಗೆ ಕಿರಿ ಕಿರಿ ಇರುತ್ತದೆ. ಸಂಗಾತಿಯ ಸೂಕ್ತ ಸಲಹೆಯಿಂದ ಸಮಸ್ಯೆಗಳು ಪರಿಹಾರವಾಗಲಿದೆ.

ಮೀನ: ಅನಾರೋಗ್ಯ ಸಮಸ್ಯೆಗಳು ದೂರವಾಗಿ ಉಲ್ಲಾಸದಾಯಕ ವಾತಾವರಣ ನೆಲೆಸುವುದು. ಆದಾಯವಿದ್ದಷ್ಟೇ ಖರ್ಚುಗಳೂ ತಲೆದೋರುತ್ತವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.        

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments