ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 23 ಡಿಸೆಂಬರ್ 2018 (09:22 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಮಕ್ಕಳ ಆರೋಗ್ಯದ ವಿಚಾರಕ್ಕೆ ತಲೆಕೆಡಿಸಿಕೊಳ್ಳುತ್ತೀರಿ. ಮನೆಯಲ್ಲಿ ಕಿರಿ ಕಿರಿಯ ವಾತಾವರಣವಿರುತ್ತದೆ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಷಭ: ಸಮಾಧಾನದಿಂದ ಕೆಲಸ ಕಾರ್ಯಗಳನ್ನು ಕೈಗೊಂಡರೆ ನಿಶ್ಚಿತ ಜಯ. ಕುಲದೇವರ ಸನ್ನಿಧಾನಕ್ಕೆ ತೆರಳಿ ಪೂಜೆ ಸಲ್ಲಿಸಿದರೆ ಶುಭ ಫಲ.

ಮಿಥುನ: ಹೊಸ ಪ್ರಯತ್ನಗಳಿಗೆ ಕೈ ಹಾಕುವಿರಿ. ಆದರೆ ಆರಂಭದಲ್ಲಿ ವಿಘ್ನಗಳಿದ್ದು, ದೇವತಾ ಪ್ರಾರ್ಥನೆಯಿಂದ ವಿಘ್ನಗಳು ದೂರವಾಗಿ ಒಳಿತಾಗುವುದು.

ಕರ್ಕಟಕ: ಹಿತ ಶತ್ರುಗಳ ಬಗ್ಗೆ ಎಚ್ಚರವಾಗಿರಿ. ಹಣಕಾಸಿನ ವಿಚಾರದಲ್ಲಿ ಗೊತ್ತಿರುವವರೇ ಮೋಸ ಮಾಡುವ ಸಾಧ್ಯತೆಯಿದೆ. ಸಂಗಾತಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಿರಿ.

ಸಿಂಹ: ಹೆತ್ತವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಸಂಗಾತಿಯೊಡನೆ ಕಿರಿ ಕಿರಿ ಮಾಡಿಕೊಳ್ಳುತ್ತೀರಿ. ಹಾಗಿದ್ದರೂ ದಿನದಂತ್ಯಕ್ಕೆ ಶುಭ ಪ್ರಾಪ್ತಿ.

ಕನ್ಯಾ: ಯಾರನ್ನೂ ನಂಬುವ ಸ್ಥಿತಿಯಲ್ಲಿ ನೀವಿರುವುದಿಲ್ಲ. ಯಾವುದೇ ಕೆಲಸಗಳಿಗೆ ಕೈ ಹಾಕುವ ಮೊದಲು ಹಿರಿಯರ ಸಲಹೆ ಕೇಳಿ ಮುನ್ನಡೆಯಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ.

ತುಲಾ: ಹೆಚ್ಚುವರಿ ಕೆಲಸಗಳಿಗಾಗಿ ದೂರ ಸಂಚಾರ ಮಾಡಬೇಕಾದೀತು. ವಾಹನ ಚಾಲಕರು ಎಚ್ಚರವಾಗಿರಿ. ಬ್ಯಾಂಕ್ ನೌಕರರಿಗೆ ಶುಭ ದಿನ.

ವೃಶ್ಚಿಕ: ಯಾರಿಗೂ ಕೇಡುಬಯಸದ ನಿಮ್ಮ ಸ್ವಭಾವ ನಿಮ್ಮನ್ನು ಕಾಪಾಡಲಿದೆ. ಶುಭ ಮಂಗಲ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ಅವಿವಾಹಿತರಿಗೆ ವಿವಾಹ ಭಾಗ್ಯ ಸಿಗಲಿದೆ.

ಧನು: ಇಂದಿನ ಮಟ್ಟಿಗೆ ದೂರ ಪ್ರಯಾಣ ಮಾಡದೇ ಇರುವುದೇ ಒಳ್ಳೆಯದು. ಖರ್ಚುಗಳು ಅಧಿಕವಾಗಿದ್ದರೂ ಅಷ್ಟೇ ಆದಾಯವೂ ಸಿಗುವುದು. ದೇವರ ದರ್ಶನ ಮಾಡಿ.

ಮಕರ: ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಲಿದೆ. ಮಕ್ಕಳಿಂದ ಯಾವುದಾದರೂ ಕಾರಣಕ್ಕೆ ಸಂತಸ ಸಿಗುತ್ತದೆ. ಸಂಗಾತಿಯ ಸಹಕಾರದಿಂದ ಕಾರ್ಯ ಸಿದ್ಧಿ.

ಕುಂಭ: ಹಿತ ಶತ್ರುಗಳ ಬಗ್ಗೆ ಎಚ್ಚರವಾಗಿರಿ. ಹೊಸಬರೊಂದಿಗೆ ವ್ಯವಹರಿಸುವ ಮುನ್ನ ಎಚ್ಚರಿಕೆ ಅಗತ್ಯ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ಅಶಕ್ತರಿಗೆ ದಾನ ಮಾಡುವುದರಿಂದ ಒಳಿತಾಗುವುದು.

ಮೀನ: ಅನಿರೀಕ್ಷಿತ ಬಂಧುಗಳು, ಆಪ್ತ ಮಿತ್ರರ ಆಗಮನದಿಂದ ಸಂತಸದ ಕ್ಷಣಗಳನ್ನು ಕಳೆಯುವಿರಿ. ಪ್ರವಾಸ ಮಾಡಲು ಯೋಜನೆ ರೂಪಿಸುವಿರಿ. ಆದರೆ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.              

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments