Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 30 ಡಿಸೆಂಬರ್ 2018 (06:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಶುಭ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಹೊಸ ವಿಚಾರಗಳನ್ನು ತಿಳಿದುಕೊಳ್ಳುವಿರಿ. ಹೊಸ ಜನರೊಂದಿಗಿನ ಓಡಾಟ ಇಂದು ನಿಮ್ಮನ್ನು ಉಲ್ಲಾಸದಾಯಕವಾಗಿಡುತ್ತದೆ.

ವೃಷಭ: ಭೋಜನ ಪ್ರಿಯರಾಗಿದ್ದರೆ ಇಂದು ಉತ್ತಮ ಭೋಜನ ಸವಿಯುವಿರಿ. ಬಂಧು ಮಿತ್ರರ ಆಗಮನದಿಂದ ಸಂತೋಷ ಕಾಣುವಿರಿ. ಖರ್ಚು ವೆಚ್ಚಗಳೂ ಅಧಿಕವಾಗಲಿದೆ.

ಮಿಥುನ: ಮಿತ್ರರ ಅನಾರೋಗ್ಯ ಸುದ್ದಿ ಕೇಳಿಬಂದೀತು. ಇನ್ನೊಬ್ಬರಿಗೆ ಸಹಾಯ ಮಾಡುವ ಮೊದಲು ಯೋಚಿಸಿ ಹೆಜ್ಜೆಯಿಡಿ. ಕುಟುಂಬದವರೊಂದಿಗೆ ಕಿರಿ ಕಿರಿ ಮಾಡಿಕೊಳ್ಳುವ ಸಾಧ್ಯತೆಯಿದೆ.

ಕರ್ಕಟಕ: ಯಾವುದೇ ಕೆಲಸ ಮಾಡುವುದಿದ್ದರೂ ಕುಟುಂಬದ ಹಿರಿಯರೊಡನೆ ಸಮಾಲೋಚನೆ ನಡೆಸಿ. ದಾಯಾದಿಗಳಿಂದ ತೊಂದರೆ ಉಂಟಾಗುವ ಸಂಭವವಿದೆ. ಆರ್ಥಿಕ ಲಾಭಗಳಿದ್ದರೂ ಅಷ್ಟೇ ಖರ್ಚು ವೆಚ್ಚಗಳಿರಲಿವೆ.

ಸಿಂಹ: ಸಮಾಜದಲ್ಲಿ ನಿಮ್ಮ ಸ್ಥಾನ ಮಾನ ಹೆಚ್ಚಾಗಿ ಗೌರವ ಸಂಪಾದಿಸುವಿರಿ. ಆರ್ಥಿಕ ಲಾಭವಾಗಲಿದೆ. ಧರ್ಮ ಕಾರ್ಯಗಳಿಗಾಗಿ ಧನ ವಿನಿಯೋಗ ಮಾಡಿಕೊಳ್ಳಬೇಕಾದೀತು. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಕನ್ಯಾ: ಹೊಸ ವಾಹನ ಖರೀದಿಗೆ ಮುಂದಾಗುವಿರಿ. ಆದರೆ ಖರ್ಚುಗಳ ಬಗ್ಗೆ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಇಂದು ಅತೀವ ಪ್ರಯತ್ನ ನಡೆಸಬೇಕಾದೀತು. ಹೊಸ ಜನರೊಂದಿಗೆ ವಿಶ್ವಾಸ ಬೆಳೆಸುವ ಮೊದಲು ಯೋಚಿಸಿ ಹೆಜ್ಜೆಯಿಡಿ.

ತುಲಾ: ವ್ಯವಹಾರಸ್ಥರಿಗೆ ಕೊಂಚ ಹಿನ್ನಡೆಯಾದೀತು. ಕುಲದೇವರಿಗೆ ಪ್ರಾರ್ಥನೆ ಮಾಡಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ. ಖರ್ಚು ವೆಚ್ಚಗಳು ಅಧಿಕವಾದೀತು. ಆದರೆ ಕುಟುಂಬದವರೊಂದಿಗೆ ನೆಮ್ಮದಿಯ ವಾತಾವರಣ ಅನುಭವಿಸುವಿರಿ.

ವೃಶ್ಚಿಕ: ಪ್ರೇಮಿಗಳಿಗೆ ಶುಭ ದಿನ. ದಂಪತಿಗಳು ಸರಸದ ಸಮಯ ಕಳೆಯುವರು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ಹೊಸ ಮನೆ ಖರೀದಿ ಬಗ್ಗೆ ಯೋಚನೆ ಮಾಡುವಿರಿ. ಹಣಕಾಸಿನ ವ್ಯವಹಾರದ ಬಗ್ಗೆ ಎಚ್ಚರವಿರಲಿ.

ಧನು: ಕುಟುಂಬದವರೊಂದಿಗೆ ಪ್ರವಾಸ ಹೋಗುವಿರಿ. ಪ್ರಯಾಣದಲ್ಲಿ ಎಚ್ಚರ. ಆದಷ್ಟೂ ವಾಹನ ಚಾಲನೆ ಮಾಡದೇ ಇದ್ದರೆ ಒಳ್ಳೆಯದು. ಆರ್ಥಿಕ ಲಾಭವಾಗಿ ನೆಮ್ಮದಿ ಕಾಣುವಿರಿ.

ಮಕರ: ಬೇರೆ ಬೇರೆ ಮೂಲಗಳಿಂದ ಧನಾಗಮನವಾಗಿ ಸಂತಸ ಕಾಣುವಿರಿ. ಬರಬೇಕಿದ್ದ ಬಾಕಿ ಹಣ ಸಂದಾಯವಾಗುವುದು. ಮಕ್ಕಳ ಆರೋಗ್ಯದ ಬಗ್ಗೆ  ಚಿಂತೆ ಮಾಡಬೇಕಾಗಿ ಬರಬಹುದು. ಸಂಗಾತಿಯೊಂದಿಗೆ ಉಪಯುಕ್ತ ಸಮಯ ಕಳೆಯುವಿರಿ.

ಕುಂಭ: ಯಾವುದೇ ಹೆಜ್ಜೆಯಿಡಬೇಕಾದರೂ ಏಕಾಂಗಿ ನಿರ್ಧಾರ ಕೈಗೊಂಡರೆ ಕೈ ಸುಟ್ಟುಕೊಳ್ಳಬೇಕಾದ ಪರಿಸ್ಥಿತಿ ಬಂದೀತು. ಸಂಗಾತಿಯೊಡನೆ ಕಿರಿಕ್ ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರೆಯಲಿದೆ.

ಮೀನ: ಸ್ನೇಹಿತರಿಂದ ವಂಚನೆಗೊಳಗಾಗುವ ಸಂಭವವಿದೆ. ಹಣಕಾಸಿನ ವಿಚಾರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಯಾರಿಗೂ ಸಾಲ ಕೊಡಲು ಹೋಗಬೇಡಿ. ನೆಮ್ಮದಿಗಾಗಿ ಇಷ್ಟದೇವರ ಸನ್ನಿಧಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.              

Share this Story:

Follow Webdunia kannada

ಮುಂದಿನ ಸುದ್ದಿ

ಆಯಾ ರಾಶಿಗನುಗುಣವಾಗಿ ಈ ವರ್ಷ ನಿಮ್ಮ ಉದ್ಯೋಗ ಭವಿಷ್ಯ ಹೇಗಿದೆ? ಉದ್ಯೋಗ ಭವಿಷ್ಯಕ್ಕಾಗಿ ಇಲ್ಲಿ ನೋಡಿ