Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 9 ಜನವರಿ 2019 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾದೀತು. ಹಣಕಾಸಿನ ಮುಗ್ಗಟ್ಟು ತೋರಿಬಂದೀತು. ಖರ್ಚು ವೆಚ್ಚಗಳು ಅಧಿಕವಾಗಲಿದೆ. ಹಣಕಾಸಿನ ವಿಚಾರದಲ್ಲಿ ಹಿಡಿತ ಅಗತ್ಯ.

ವೃಷಭ: ಕೋರ್ಟು ಕಚೇರಿ ಕೆಲಸಗಳಿಗೆ ಅಲೆದಾಡಬೇಕಾಗುತ್ತದೆ. ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆಯಿದೆ. ದೇವತಾ ಆರಾಧನೆಯಿಂದ ಅಂದುಕೊಂಡ ಕಾರ್ಯಗಳು ನೆರವೇರಲಿವೆ.

ಮಿಥುನ: ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದೂರ ಸಂಚಾರ ಯೋಗವಿದೆ. ಮಿತ್ರರಿಗೆ ತೊಂದರೆಯ ಸಮಯದಲ್ಲಿ ಸಹಾಯ ಮಾಡುವಿರಿ. ಕಾರ್ಯದೊತ್ತಡಗಳು ಇದ್ದರೂ ಜಯ ಸಿಗುತ್ತದೆ.

ಕರ್ಕಟಕ: ಧನಲಾಭವಾಗಲಿದ್ದು, ಹೊಸ ವಸ್ತು, ಆಭರಣ, ವಾಹನ ಖರೀದಿಗೆ ಮುಂದಾಗುವಿರಿ. ಉದ್ಯೋಗದಲ್ಲಿ ಕೊಂಚ ಕಿರಿ ಕಿರಿ ಇದ್ದೀತು. ಆದರೆ ವಿದ್ಯಾರ್ಥಿಗಳ ಮಟ್ಟಿಗೆ ಶುಭ ದಿನ. ಮನೆಯಲ್ಲಿ ಸಣ್ಣ ಪುಟ್ಟ ಸಮಸ್ಯೆ ಇದ್ದೇ ಇರುತ್ತದೆ.

ಸಿಂಹ: ಉದ್ಯೋಗದಲ್ಲಿ ಮುನ್ನಡೆ ಹೊಂದಿ ಆರ್ಥಿಕ ಲಾಭ ಗಳಿಸುತ್ತೀರಿ. ಮಿತ್ರರೊಡನೆ ಪ್ರವಾಸ ಕೈಗೊಳ್ಳುವಿರಿ. ಕುಲದೇವರ ದರ್ಶನ ಪಡೆಯುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನವಿಲ್ಲದೇ ಫಲ ದೊರೆಯದು.

ಕನ್ಯಾ: ಯಾವುದೇ ಕೆಲಸ ಮಾಡುವುದಿದ್ದರೂ ಸಂಗಾತಿಯ ಒಪ್ಪಿಗೆ ಪಡೆದು ಮುಂದುವರಿಯಿರಿ. ಉದ್ಯೋಗದಲ್ಲಿ ಬಡ್ತಿ ಸಿಗಲಿದ್ದು, ಧನ ಲಾಭವಾಗಲಿದೆ. ಮೇಲಧಿಕಾರಿಗಳೊಂದಿಗೆ ಕೊಂಚ ಸಹನೆಯಿಂದ ವರ್ತಿಸಿ.

ತುಲಾ: ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವರು. ಅಂದುಕೊಂಡ ಕಾರ್ಯಗಳು ನೆರವೇರಲಿವೆ. ಉದ್ಯೋಗದಲ್ಲೂ ಸಹೋದ್ಯೋಗಿಗಳಿಂದ ಸಹಕಾರ ದೊರೆಯುವುದು. ವ್ಯವಹಾರದಲ್ಲಿ ಲಾಭ ಗಳಿಸುವಿರಿ.

ವೃಶ್ಚಿಕ: ಆರ್ಥಿಕ ಲಾಭವಾಗಲಿದ್ದು, ಆಸ್ತಿ ಖರೀದಿಗೆ ಮನಸ್ಸು ಮಾಡುವಿರಿ. ಆರೋಗ್ಯ ಹದಗೆಟ್ಟು ಆಸ್ಪತ್ರೆ ಸೇರಬೇಕಾದೀತು. ಅಪವಾದದ ಭೀತಿಯೂ ಇದೆ. ಇತರರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಬೇಡದ ವಾದ ವಿವಾದಕ್ಕೆ ತಲೆ ತೂರಿಸಲು ಹೋಗಬೇಡಿ.

ಧನು: ಉದ್ಯೋಗದಲ್ಲಿ ನೀವು ಅಂದುಕೊಂಡ ಪ್ರಗತಿ ದೊರೆತು ಸಂತಸವಾಗಲಿದೆ. ಖರ್ಚು ಇದ್ದಷ್ಟೇ ಆದಾಯವೂ ಇದ್ದೀತು. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದೀತು. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಮೂಡುವುದು.

ಮಕರ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಪ್ರೇಮಿಗಳಿಗೆ ಶುಭ ದಿನ. ಮನೆಯಲ್ಲಿ ಮಂಗಲ ಕಾರ್ಯ ನೆರವೇರಿಸುವಿರಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ. ಆದರೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ.

ಕುಂಭ: ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅಡೆತಡೆಗಳು ಕಂಡುಬಂದೀತು. ಉದ್ಯೋಗದಲ್ಲಿ ಕೊಂಚ ಹಿನ್ನಡೆ ಅನುಭವಿಸಬೇಕಾದೀತು. ಮೌನವಾಗಿದ್ದಷ್ಟೂ ನಿಮಗೇ ಒಳ್ಳೆಯದು. ದುಡುಕಿನ ವರ್ತನೆಯಿಂದ ಅನಾಹುತ ತಂದುಕೊಳ್ಳಬೇಡಿ.

ಮೀನ: ಎಷ್ಟೋ ದಿನಗಳಿಂದ ಕಾಡುತ್ತಿದ್ದ ಅನಾರೋಗ್ಯ ಸಮಸ್ಯೆಗೆ ಇಂದು ಪರಿಹಾರ ಸಿಗಲಿದೆ. ಕಾರ್ಯದೊತ್ತಡ ಹೆಚ್ಚಾಗಲಿದೆ. ಆದರೆ ಕುಟುಂಬದವರ, ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಸುಲಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.        

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments