Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 19 ಜನವರಿ 2019 (09:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ನಿಮ್ಮ ದುಡುಕು ವರ್ತನೆಯಿಂದ ಸಂಬಂಧ ಹಾಳಾಗುವುದು. ಸಂಗಾತಿಯ ಮನಸ್ಸಿಗೆ ಬೇಸರ ಮಾಡುವಿರಿ. ಆರೋಗ್ಯ ಹಾಳಾಗುವ ಸಾಧ್ಯತೆಯಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬಂದರೂ ಮನಸ್ಸಿಗೆ ಒಪ್ಪಿಗೆಯಾಗದು.

ವೃಷಭ: ಮನೆಗೆ ನೆಂಟರ ಆಗಮನವಾಗಲಿದ್ದು, ಖರ್ಚು ವೆಚ್ಚಗಳು ಹೆಚ್ಚಾಗುವುದು. ಉದ್ಯೋಗದಲ್ಲಿ ಮುನ್ನಡೆ ತೋರಿಬಂದೀತು. ವ್ಯವಹಾರಗಳಲ್ಲಿ ಜಯ ನಿಮ್ಮದಾಗುವುದು.

ಮಿಥುನ: ಹಿರಿಯರ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಬೇಕಾಗಿದೆ. ಹಣಕಾಸಿನ ವ್ಯವಹಾಗಳಲ್ಲಿ ಜಯ ಸಿಗುವುದು. ಆರ್ಥಿಕ ಲಾಭ ಗಳಿಸುವಿರಿ. ಮಂಗಲ ಕಾರ್ಯಗಳು ನಿರೀಕ್ಷಿತವಾಗಿ ನೆರವೇರದು. ಹೀಗಾಗಿ ಮನಸ್ಸಿಗೆ ಕೊಂಚ ಕಿರಿ ಕಿರಿ ಆಗುವುದು.

ಕರ್ಕಟಕ: ಹಳೆಯ ಮಿತ್ರರನ್ನು ಭೇಟಿಯಾಗಿ ಮನಸ್ಸಿಗೆ ಸಂತಸವಾಗುವುದು. ಕೆಲಸ ಕಾರ್ಯಗಳಲ್ಲಿ ಮಿತ್ರರ ಸಹಕಾರ ದೊರೆಯುವುದು. ಆದರೆ ವಾದ ವಿವಾದಗಳಿಂದ ದೂರವಿರುವುದೇ ಒಳ್ಳೆಯದು.

ಸಿಂಹ: ನಿಮ್ಮ ಕೆಲಸ ಕಾರ್ಯಗಳಿಗೆ ಹಿರಿಯರ ಆಶೀರ್ವಾದ, ಒಪ್ಪಿಗೆ ಸಿಗಲಿದೆ. ಹೀಗಾಗಿ ಕೆಲಸ ಕಾರ್ಯಗಳಲ್ಲಿ ಜಯ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲದ ಅಗತ್ಯವಿದೆ.

ಕನ್ಯಾ: ಬೇಡದ ವಿಚಾರಕ್ಕೆ ಮೂಗು ತೂರಿಸಿ ತೊಂದರೆ ಮೈ ಮೇಲೆಳೆದುಕೊಳ್ಳುವಿರಿ. ಕೆಲವು ಅನಿರೀಕ್ಷಿತ ಘಟನೆಗಳು ನಿಮ್ಮ ಜೀವನದ ದಿಕ್ಕು ಬದಲಾಯಿಸಲಿದೆ. ಧನಾಗಮನವಿದ್ದರೂ ಅಷ್ಟೇ ಖರ್ಚು ವೆಚ್ಚಗಳು ತಲೆದೋರುವವು.

ತುಲಾ: ವಿದ್ಯಾರ್ಥಿಗಳಿಗೆ ಅಭ್ಯಾಸ ಬಲದಿಂದ ಯಶಸ್ಸು. ದೂರ ಸಂಚಾರ ನಡೆಸುವ ಸಾಧ್ಯತೆಯಿದೆ. ವಾಹನ ಚಾಲನೆ ಮಾಡುವುದಿದ್ದರೆ ಎಚ್ಚರಿಕೆ ಅಗತ್ಯ. ವೃತ್ತಿರಂಗದಲ್ಲಿ ನೀವು ಬಯಸಿದ ವಾತಾವರಣವಿರಲಿದೆ.

ವೃಶ್ಚಿಕ: ಉದ್ಯೋಗದಲ್ಲಿ ಅಧಿಕಾರಿಗಳ ಕಿರಿ ಕಿರಿ ಇರಲಿದೆ. ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಕಾರ್ಯಕ್ಷೇತ್ರದಲ್ಲಿ ನಿರೀಕ್ಷಿತ ಮುನ್ನಡೆ ಸಿಗದು. ದೇವತಾ ಆರಾಧನೆಯಿಂದ ದಿನದಂತ್ಯಕ್ಕೆ ಶುಭವಾಗಲಿದೆ.

ಧನು: ಅನವಶ್ಯಕ ಖರ್ಚುಗಳ ತಲೆದೋರುತ್ತವೆ. ಕುಟುಂಬದಲ್ಲಿ ಸಂಗಾತಿಯ ಸಹಕಾರ ಸಿಗಲಿದೆ. ಹೀಗಾಗಿ ಎಷ್ಟೇ ಕಾರ್ಯದೊತ್ತಡವಿದ್ದರೂ ಕುಟುಂಬದವರ ಬಲದಿಂದ ಆತ್ಮವಿಶ್ವಾಸದಿಂದ ಮುನ್ನುಗ್ಗುವಿರಿ.

ಮಕರ: ಅಪಘಾತವಾಗುವ ಭಯವಿದ್ದು, ವಾಹನ ಚಾಲನೆ ಮಾಡದೇ ಇರುವುದೇ ಒಳ್ಳೆಯದು. ಹಿರಿಯರು ಸೂಕ್ತ ಸಮಯದಲ್ಲಿ ಸಲಹೆ ನೀಡುವುದರಿಂದ ಸಂಭಾವ್ಯ ಸಂಕಷ್ಟದಿಂದ ಪಾರಾಗುವಿರಿ. ಅವಿವಾಹತರಿಗೆ ಕಂಕಣ ಬಲ ಕೂಡಿಬರುವುದು.

ಕುಂಭ: ವ್ಯಾಪಾರ ವ್ಯವಹಾರಗಳಲ್ಲಿ ಸಾಕಷ್ಟು ಲಾಭ ಕಂಡುಬಂದು ಆರ್ಥಿಕ ಮುಗ್ಗಟ್ಟುಗಳು ದೂರವಾಗುವುದು. ಆದಾಯ ಹೆಚ್ಚಿದಂತೇ ಖರ್ಚುಗಳೂ ಅಧಿಕವಾಗುವುದು. ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ.

ಮೀನ: ಕಠಿಣ ಪರಿಸ್ಥಿತಿಯಲ್ಲಿ ಮಿತ್ರರ ಸಹಕಾರ ಸಿಕ್ಕಿ ಪರಿಸ್ಥಿತಿ ನಿಭಾಯಿಸಲು ಅನುಕೂಲವಾದೀತು. ಕುಟುಂಬದಲ್ಲಿ ನೆಮ್ಮದಿಗೆ ಭಂಗವಾಗುವ ಘಟನೆ ನಡೆಯಲಿದೆ. ತಾಳ್ಮೆಯಿಂದ ನಿಭಾಯಿಸಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.                          

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments