Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 31 ಜನವರಿ 2019 (09:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬಂಧು ಮಿತ್ರರ ಅಗಲುವಿಕೆ ಮನಸ್ಸಿಗೆ ಬೇಸರ ಉಂಟುಮಾಡಬಹುದು. ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಕಾರ್ಯದೊತ್ತಡ ಹೆಚ್ಚುವುದು. ಆದರೆ ಆದಾಯಕ್ಕೆ ಕೊರತೆಯಾಗದು. ದೂರ ಸಂಚಾರ ಮುಂದೂಡುವುದೇ ಒಳ್ಳೆಯದು.

ವೃಷಭ: ಕಾರ್ಯನಿಮಿತ್ತ ದೂರದ ಊರಿಗೆ ಪ್ರಯಾಣ ಬೆಳೆಸುವಿರಿ. ಆರ್ಥಿಕವಾಗಿ ಸಾಕಷ್ಟು ಆದಾಯ ಗಳಿಸುವಿರಿ. ಮನೆ ವಸ್ತುಗಳ ಖರೀದಿ ಮಾಡುವಿರಿ. ವ್ಯಾಪಾರಸ್ಥರಿಗೆ ಲಾಭವಿದೆ. ವಿದ್ಯಾರ್ಥಿಗಳಿಗೆ ಶುಭ ದಿನ.

ಮಿಥುನ: ಕಾರ್ಯಕ್ಷೇತ್ರಗಳಲ್ಲಿ ಅಡೆತಡೆಗಳು ತೋರಿಬಂದೀತು. ಮನೆ ಬದಲಾವಣೆ ಮಾಡಲಿದ್ದೀರಿ. ವಾಹನ ಚಾಲಕರು ಅಪಘಾತದ ಭಯ ಎದುರಿಸುವರು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರೀಕ್ಷಿತ ಯಶಸ್ಸು ಸಿಗಲಿದೆ.

ಕರ್ಕಟಕ: ಸ್ವ ಉದ್ಯೋಗಿಗಳಿಗೆ ಸಾಕಷ್ಟು ಆದಾಯ ಗಳಿಕೆಯಾಗುತ್ತದೆ. ಆದರೆ ಹಿತ ಶತ್ರುಗಳ ಬಗ್ಗೆ ಎಚ್ಚರವಿರುವುದು ಅಗತ್ಯ. ಕಾರ್ಯದೊತ್ತಡ ಹೆಚ್ಚಿ ದೇಹಾಯಾಸವಾದೀತು. ಮನೆಯಲ್ಲಿ ಶುಭ ಕಾರ್ಯ ನೆರವೇರಿಸುವಿರಿ.

ಸಿಂಹ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ಕುಟುಂಬದ ಸದಸ್ಯರೊಳಗೇ ಭಿನ್ನಮತ ತೋರಿಬರುವುದು. ಆರೋಗ್ಯ ಹದಗೆಡುವುದು ಎಚ್ಚರಿಕೆ ಅಗತ್ಯ. ದೇವರ ಪ್ರಾರ್ಥನೆಯಿಂದ ಮತ್ತಷ್ಟು ಶುಭವಾಗುತ್ತದೆ.

ಕನ್ಯಾ: ನಿರುದ್ಯೋಗಿಗಳಿಗೆ ಸದ್ಯದ ಮಟ್ಟಿಗೆ ತಾತ್ಕಾಲಿಕ ಹುದ್ದೆಯೊಂದು ಸಿಗಲಿದೆ. ಬಳಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ. ಅನಿರೀಕ್ಷಿತವಾಗಿ ಬರುವ ಮಿತ್ರರಿಂದ ಶುಭ ಸುದ್ದಿ. ಉದ್ಯೋಗದಲ್ಲಿ ನಿಮ್ಮೆ ಪರಿಶ್ರಮಕ್ಕೆ ಬೆಲೆ ಸಿಗುವುದು.

ತುಲಾ: ಮನೆ ಕೆಲಸಕ್ಕಾಗಿ ಸಿದ್ಧತೆ ನಡೆಸಿದರೂ ಸಾಕಷ್ಟು ಅಡಚಣೆಗಳು ಎದುರಾಗಲಿವೆ. ಹಣಕಾಸಿನ ಹರಿವಿಗೆ ಭಂಗವಿಲ್ಲ. ಉದ್ಯೋಗಿಗಳಿಗೆ ಮುನ್ನಡೆ, ಬಡ್ತಿ ಸಿಗಲಿದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾದೀತು. ದಿನದಂತ್ಯಕ್ಕೆ ಮತ್ತಷ್ಟು ಶುಭ ಫಲ.

ವೃಶ್ಚಿಕ: ಇದುವರೆಗೆ ಇದ್ದ ಹಣಕಾಸಿನ ಮುಗ್ಗಟ್ಟುಗಳು ದೂರವಾಗಿ ನಿಧಾನವಾಗಿ ಚೇತರಿಕೆ ಕಂಡುಬರವುದರಿಂದ ನೆಮ್ಮದಿ ಕಾಣುವಿರಿ. ಆರೋಗ್ಯದಲ್ಲೂ ಸುಧಾರಣೆಯಾಗಲಿದೆ. ಆದರೆ ವೃತ್ತಿರಂಗದಲ್ಲಿ ಬಿಡುವಿಲ್ಲದ ದಿನಚರಿ ನಿಮ್ಮದಾಗಲಿದೆ.

ಧನು: ದೂರ ಸಂಚಾರ ಕೈಗೊಳ್ಳುವಿರಿ. ಮಕ್ಕಳ ಬಗ್ಗೆ ಚಿಂತೆ ಮಾಡುವಿರಿ. ಆದಾಯದಷ್ಟೇ ಖರ್ಚೂ ಹೆಚ್ಚುವುದು. ಹೊಸ ವ್ಯವಹಾರಗಳಿಗೆ ಕೈ ಹಾಕಿದರೆ ಮಿಶ್ರಫಲ ಸಿಗುವುದು. ಸಂಚಾರದಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯ.

ಮಕರ: ಅಂದುಕೊಂಡ ಕಾರ್ಯಗಳು ನೆರವೇರುವುದು. ಹಣಕಾಸಿನ ಮುಗ್ಗಟ್ಟುಗಳು ಎದುರಾಗುವುದು.  ಮನೆಯಲ್ಲಿ ಶುಭ ಕಾರ್ಯ ನಡೆಸಲು ಓಡಾಟ ನಡೆಸುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ವಿದ್ಯಾರ್ಥಿಗಳಿಗೆ ತೀವ್ರ ಪ್ರಯತ್ನ ಅಗತ್ಯ.

ಕುಂಭ: ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಮಾಡಬೇಕಾಗುತ್ತದೆ. ಯಾವುದೋ ಚಿಂತೆ ಮನಸ್ಸು ಹಾಳು ಮಾಡಲಿದೆ. ದೇವತಾ ಆರಾಧನೆಯಿಂದ ಎಲ್ಲವೂ ಶುಭವಾಗುತ್ತದೆ

ಮೀನ: ತಾಳ್ಮೆ, ಧೈರ್ಯದಿಂದ ಮುನ್ನಡೆದರೆ ಎಂತಹಾ ಸವಾಲಾದರೂ ಮೆಟ್ಟಿ ನಿಲ್ಲುವಿರಿ. ಕುಟುಂಬದಲ್ಲಿ ಕೆಲವು ವಿಚಾರಗಳಿಗೆ ಭಿನ್ನಾಭಿಪ್ರಾಯಗಳು ಮೂಡುತ್ತವೆ. ಆದರೆ ತಾಳ್ಮೆ ಅಗತ್ಯ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.        

Share this Story:

Follow Webdunia kannada

ಮುಂದಿನ ಸುದ್ದಿ

ಈ ವಸ್ತುವನ್ನು ಪಶ್ಚಿಮ ದಿಕ್ಕಿಗೆ ಮುಖಮಾಡಿ ಇಟ್ಟರೆ ಕೂತು ತಿನ್ನವಷ್ಟು ಹಣವಿದ್ದರೂ ಕರಗುತ್ತೆ