Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 15 ಫೆಬ್ರವರಿ 2019 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ದೇವತಾ ಆರಾಧನೆಯಲ್ಲಿ ಪಾಲ್ಗೊಳ್ಳುವಿರಿ. ಮನೆಯಲ್ಲಿ ಶಾಂತಿ ಸಮಾಧಾನವಿರುವುದು. ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಾಗದು. ಉದ್ಯೋಗದಲ್ಲಿ ಮುನ್ನಡೆ ಕಾಣುವಿರಿ.

ವೃಷಭ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರಬಹುದು. ದೇಹಾಯಾಸ ಅಥವಾ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಖರ್ಚು  ವೆಚ್ಚಗಳು ಅಧಿಕವಾಗಲಿದೆ. ಮನೆಯಲ್ಲಿ ಶುಭ ಕಾರ್ಯಗಳಿಗೆ ಸಿದ್ಧತೆ ಮಾಡುವಿರಿ.

ಮಿಥುನ: ಅವಿವಾಹಿತ ಮಕ್ಕಳ ವಿವಾಹ ಪ್ರಸ್ತಾಪಗಳಿಗೆ ಓಡಾಟ ನಡೆಸಲಿದ್ದೀರಿ. ಖರ್ಚು ವೆಚ್ಚಗಳು ಮಿತಿಯಲ್ಲಿದ್ದರೆ ಒಳಿತು. ಉದ್ಯೋಗದಲ್ಲಿ ವರ್ಗಾವಣೆಯಾಗಲಿದೆ. ಆದಷ್ಟು ಮಾತಿಗೆ ಕಡಿವಾಣ ಹಾಕಿ. ಬಂಧು ಮಿತ್ರ ಸಹಕಾರ ದೊರಕಲಿದೆ.

ಕರ್ಕಟಕ: ಮನೆಗೆ ಬೇಕಾದ ಹೊಸ ವಸ್ತುಗಳ ಖರೀದಿ ಮಾಡುವಿರಿ. ಆರ್ಥಿಕವಾಗಿ ಲಾಭವಿದ್ದಷ್ಟೇ ಖರ್ಚು ವೆಚ್ಚಗಳೂ ಅಧಿಕವಾದೀತು. ಸಾಮಾಜಿಕವಾಗಿ ನೀವು ಮಾಡುವ ಕೆಲಸಗಳಿಗೆ ಮನ್ನಣೆ ದೊರಕಲಿದೆ.

ಸಿಂಹ: ಮನೆಯಲ್ಲಿ ಹಿರಿಯರಿದ್ದರೆ ಅವರ ಆರೋಗ್ಯದ ಬಗ್ಗೆ ಅಲಕ್ಷ್ಯ ಬೇಡ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದಿದ್ದರೂ ತಾತ್ಕಾಲಿಕವಾಗಿ ಸಮಸ್ಯೆಗೆ ಪರಿಹಾರ ದೊರಕಲಿದೆ. ಹಿತಶತ್ರುಗಳ ಬಗ್ಗೆ ಎಚ್ಚರ ಅಗತ್ಯ.

ಕನ್ಯಾ: ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಯೋಗವಿದೆ. ವೃತ್ತಿ ರಂಗದಲ್ಲಿ ನಿಮ್ಮ ಸ್ಥಾನದಲ್ಲಿ ಬದಲಾವಣೆಯಾಗಲಿದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ಆದರೆ ಸಂಗಾತಿಯೊಡನೆ ಸಮಯ ಕಳೆಯಲು ಅವಕಾಶ ಸಿಗದೇ ಬೇಸರಗೊಳ್ಳುವಿರಿ.

ತುಲಾ: ಮಕ್ಕಳಿಂದ ಶುಭವಾರ್ತೆ ಸಿಗಲಿದೆ. ಸಂಸಾರದಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ಇಂಜಿನಿಯರಿಂಗ್ ವೃತ್ತಿಯವರಿಗೆ ಮುನ್ನಡೆ, ಬಡ್ತಿ ಯೋಗವಿದೆ. ಪ್ರೇಮಿಗಳಿಗೆ ಶುಭ ದಿನ. ಆದರೆ ಆರೋಗ್ಯದ ಬಗ್ಗೆ ಎಚ್ಚರ ಅಗತ್ಯ.

ವೃಶ್ಚಿಕ: ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಹೊಸ ವ್ಯವಹಾರಗಳು, ಕೋರ್ಟು, ಕಚೇರಿ ವ್ಯಾಜ್ಯಗಳನ್ನು ಸ್ವಲ್ಪ ದಿನ ಮುಂದೂಡುವುದು ಒಳ್ಳೆಯದು. ಕಾರ್ಯಗಳಲ್ಲಿ ವಿಘ್ನ ಎದುರಾದೀತು. ನೆಮ್ಮದಿಗಾಗಿ ದೇವರ ಆರಾಧನೆ ಮಾಡಿ.

ಧನು: ಮಕ್ಕಳ ಉಪೇಕ್ಷೆ ಮನಸ್ಸಿಗೆ ಬೇಸರವುಂಟು ಮಾಡೀತು. ಆದರೆ ನಿಮ್ಮ ಹಠದ ಸ್ವಭಾವ ಬಿಟ್ಟರೆ, ಎಲ್ಲವೂ ನೀವಂದುಕೊಳ್ಳುವಂತೆ ನಡೆಯಲಿದೆ. ಸ್ವ ಉದ್ಯೋಗಿಗಳು ಉತ್ತಮ ಆದಾಯ ಗಳಿಸುವರು.

ಮಕರ: ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಹಿರಿಯರಿಂದ ಸಲಹೆ, ಸೂಚನೆ ಸಿಕ್ಕಿ ಸಂಭಾವ್ಯ ಅಪಾಯಗಳು ತಪ್ಪಲಿವೆ. ಉದ್ಯೋಗದಲ್ಲಿ ನಿಮ್ಮ ಮೇಲೆ ಗುರುತರ ಜವಾಬ್ಧಾರಿ ಬೀಳಲಿದೆ. ಆದರೆ ಸಹೋದ್ಯೋಗಿಗಳ ಸಹಕಾರ ನಿಮಗೆ ಜಯ ತಂದುಕೊಡುವುದು.

ಕುಂಭ: ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚುಗಳೂ ಅಧಿಕವಾಗುವುದು. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಮನೆಯಲ್ಲಿ ಶುಭ ಕಾರ್ಯಗಳನ್ನು ನಡೆಸಲು ಚಿಂತನೆ ನಡೆಸುವಿರಿ. ವಿವೇಚನೆಯಿಂದ ಹೆಜ್ಜೆಯಿಡಿ.

 
ಮೀನ: ಆರ್ಥಿಕವಾಗಿ ಧನಾಗಮನವಾಗಿ ಚೇತರಿಕೆ ಕಾಣುವಿರಿ. ಆದರೆ ಪುಕ್ಸಟೆ ಸಲಹೆ ನೀಡುವವರ ಬಗ್ಗೆ ಉಪೇಕ್ಷೆ ಬೇಡ. ಸಂಗಾತಿಯ ಮಾತಿಗೆ ಕಿವಿಗೊಡದಿದ್ದರೆ ತಕ್ಕ ಬೆಲೆ ತೆರಬೇಕಾದೀತು. ತಾಳ್ಮೆಯಿಂದ ವ್ಯವಹರಿಸಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments