ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 20 ಫೆಬ್ರವರಿ 2019 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೈವ ಭಕ್ತಿ ಹೆಚ್ಚುವುದು. ಕಚೇರಿಯಲ್ಲಿ ಉಲ್ಲಾಸದಾಯಕ ವಾತಾವರಣವಿರಲಿದೆ. ಆದರೆ ಸಂಗಾತಿ ಜತೆಗೆ ಕಿರಿ ಕಿರಿಯಾಗುವುದು. ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಿರದು. ಹೊಸ ಉದ್ಯೋಗಾವಕಾಶಗಳಿಗಾಗಿ ಹುಡುಕಾಟ ನಡೆಸುವಿರಿ.

ವೃಷಭ: ಆದಾಯ ಹೆಚ್ಚಿದಷ್ಟೇ ಖರ್ಚು ವೆಚ್ಚಗಳೂ ಹೆಚ್ಚುವುದು. ಹೊಸ ಯೋಜನೆಗಳಿಗೆ ಕೈ ಹಾಕುವಿರಿ. ಮಹಿಳೆಯರಿಗೆ ತವರು ಮನೆಯಿಂದ ಶುಭ ಸುದ್ದಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರಕಲಿದೆ.

ಮಿಥುನ: ಕುಟುಂಬದ ಕಾರ್ಯ ನಿಮಿತ್ತ ದೂರ ಸಂಚಾರ ಕೈಗೊಳ್ಳಬೇಕಾಗುತ್ತದೆ. ಸಾಮಾಜಿಕವಾಗಿ ನೀವು ಮಾಡುವ ಕೆಲಸಗಳಿಂದ ಹೆಸರು, ಗೌರವ ಸಂಪಾದಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ತೀವ್ರ ಪ್ರಯತ್ನ ಅಗತ್ಯ.

ಕರ್ಕಟಕ: ಸಹೋದರ ಅಥವಾ ಮಕ್ಕಳ ವಿವಾಹ ಸಂಬಂಧ ಓಡಾಟ ನಡೆಸುವಿರಿ. ಕುಲದೇವರ ದರ್ಶನ ಪಡೆದರೆ ಅಂದುಕೊಂಡ ಕಾರ್ಯಗಳು ಸುಗಮವಾಗಿ ನೆರವೇರುವುದು. ವಾಸ ಸ್ಥಳ ಬದಲಾವಣೆಗೂ ಚಿಂತನೆ ಮಾಡುವಿರಿ.

ಸಿಂಹ: ಸಾಲ ಕೇಳಿಕೊಂಡು ಬಂದವರಿಗೆ ಸಾಲ ಕೊಡುವ ಮುನ್ನ ಎಚ್ಚರಿಕೆ ಅಗತ್ಯ. ಕ್ಷುಲ್ಲುಕ ಕಾರಣಕ್ಕೆ ಮನಸ್ಸಿಗೆ ಬೇಸರವುಂಟುಮಾಡಿಕೊಳ‍್ಳುವಿರಿ. ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ಚಾಡಿ ಮಾತಿಗೆ ಕಿವಿಗೊಡಬೇಡಿ.

ಕನ್ಯಾ: ಕುಟುಂಬಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಹಿರಿಯರ ಮಾರ್ಗದರ್ಶನ ಪಡೆಯಿರಿ. ಖರ್ಚು ವೆಚ್ಚಗಳು ಅಧಿಕವಾಗುವುದು. ಸಂಗಾತಿಗೆ ಅಲಂಕಾರಿಕ ವಸ್ತುಗಳ ಖರೀದಿ ಮಾಡುವಿರಿ. ಉದ್ಯೋಗದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇರುವುದು. ತಾಳ್ಮೆಯಿಂದ ನಿಭಾಯಿಸಿ.

ತುಲಾ: ಬಾಕಿ ಇದ್ದ ಹಣ ಮರು ಪಾವತಿಯಾಗಿ ಆರ್ಥಿಕವಾಗಿ ಚೇತರಿಕೆ ಕಾಣುವಿರಿ. ಕಾರ್ಯನಿಮಿತ್ತ ದೂರದ ಊರಿಗೆ ಪ್ರಯಾಣ ಮಾಡುವಿರಿ. ಅಪರಿಚಿತರಿಂದ ಸಹಾಯ ಒದಗಿ ಬರಲಿದೆ. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗುವುದು.

ವೃಶ್ಚಿಕ: ಹೊಸ ಯೋಜನೆಗಳಿಗೆ ಕೈ ಹಾಕಿದರೂ ಸಾಕಷ್ಟು ಹಣವಿಲ್ಲದೇ ಒದ್ದಾಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲೂ ಕೆಲವೊಂದು ವಿಘ್ನಗಳು, ಒತ್ತಡಗಳನ್ನು ಎದುರಿಸಬೇಕಾಗುತ್ತದೆ. ವಾಸ ಸ್ಥಳ ಬದಲಾವಣೆ ಸಾಧ್ಯತೆಯಿದೆ.

ಧನು: ಆರೋಗ್ಯ ಭಾಗ್ಯ ಸುಧಾರಿಸುವುದು. ಆರ್ಥಿಕ ಸ್ಥಿತಿಗತಿ ಉತ್ತಮವಾಗಿರುತ್ತದೆ. ಆದರೆ ಕೆಲವೊಂದು ವಿನಾಕಾರಣ ಖರ್ಚುಗಳು ಕಂಗೆಡಿಸುವುದು. ಆರೋಗ್ಯದ ದೃಷ್ಟಿಯಿಂದ ಇಂದು ಹೊರಗಡೆ ಆಹಾರ ಸೇವಿಸದೇ ಇರುವುದೇ ಉತ್ತಮ.

ಮಕರ: ಸಂಗಾತಿಯ ಮುನಿಸು ಅರ್ಥವಾಗದೇ ಮನೆಯಲ್ಲಿ ಒಂದು ರೀತಿಯ ಅಸಮಾಧಾನದ ವಾತಾವರಣವಿರುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಕ್ಕಳ ಭವಿಷ್ಯದ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಬೇಕಾಗುತ್ತದೆ. ಹಿರಿಯರ ಅಭಿಪ್ರಾಯಗಳಿಗೆ ಬೆಲೆ ಕೊಡಿ.

ಕುಂಭ: ಮನೆಯಲ್ಲಿ ಶುಭ ಕಾರ್ಯ ನೆರವೇರಿಸುವ ಮೊದಲು ಹಿರಿಯರ ಅಭಿಪ್ರಾಯಗಳಿಗೆ ಬೆಲೆ ಕೊಡಿ. ಬಹುದಿನಗಳ ಆರೋಗ್ಯ ಸಮಸ್ಯೆಗೆ ಇಂದು ಮುಕ್ತಿ. ಇದರಿಂದ ಮನಸ್ಸಿಗೂ ನೆಮ್ಮದಿ ಸಿಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ.

ಮೀನ: ಕುಟುಂಬದವರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ನೂತನ ದಂಪತಿಗಳಿಗೆ ಸಂತಾನ ಭಾಗ್ಯ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಕುಲದೇವರ ಸ್ಮರಣೆ ಮಾಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಾಸವೀ ಕನ್ನಿಕಾ ಪರಮೇಶ್ವರಿ ದೇವಿ ಸ್ತೋತ್ರ

ಗುರುವಾರ ಮಹಾವಿಷ್ಣುವಿನ ಮೂಲ ಮಂತ್ರ ಪಠಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ತಿಳಿದುಕೊಳ್ಳಿ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಮುಂದಿನ ಸುದ್ದಿ
Show comments