Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 3 ಮಾರ್ಚ್ 2019 (09:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಮನೆ ರಿಪೇರಿ, ನವೀಕರಣದಲ್ಲಿ ತೊಡಗಿಸಿಕೊಳ್ಳುವಿರಿ. ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಸಂಗಾತಿ ಜತೆ ಮನಸ್ತಾಪಕ್ಕಿಂತ ಮೌನವಾಗಿರುವುದೇ ಲೇಸು.

ವೃಷಭ: ಎಂದೋ ಮಾಡಿದ ನಿಮ್ಮ ಒಳ್ಳೆಯ ಕೆಲಸಗಳು ಇಂದು ಪ್ರಯೋಜನಕ್ಕೆ ಬರಲಿವೆ. ನಿಮ್ಮ ವ್ಯಕ್ತಿತ್ವದಿಂದಲೇ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಕೊಂಚ ಅಡಚಣೆಯಾದೀತು.

ಮಿಥುನ: ಯಾವುದೇ ಕೆಲಸಕ್ಕೆ ಹೊರಡುವುದಿದ್ದರೂ ಮನೆ ದೇವರಿಗೆ ಪ್ರಾರ್ಥನೆ ಮಾಡಿ ಹೊರಡಿ. ಇದರಿಂದ ಕಾರ್ಯಸಿದ್ಧಿ. ಯೋಜಿತ ಕಾರ್ಯಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಆರ್ಥಿಕವಾಗಿ ಹೊರೆ ಬೀಳದಂತೆ ನೋಡಿಕೊಳ್ಳಿ.

ಕರ್ಕಟಕ: ಕುಟುಂಬದಲ್ಲಿ ನಿಮ್ಮ ಜವಾಬ್ಧಾರಿಗಳು ಹೆಚ್ಚುವುದು. ಆದಾಯ ಹೆಚ್ಚುವುದು. ಆರ್ಥಿಕವಾಗಿ ಸಾಕಷ್ಟು ಲಾಭ ಗಳಿಸುವುದರಿಂದ ಖರ್ಚಿನ ಬಗ್ಗೆಯೂ ಚಿಂತನೆ ಮಾಡುವಿರಿ. ಹೊಸ ವಸ್ತುಗಳ ಖರೀದಿಗೆ ಮನಸ್ಸಾಗುವುದು.

ಸಿಂಹ: ಅವಿವಾಹಿತರಿಗೆ ಹೊಸ ವಿವಾಹ ಪ್ರಸ್ತಾಪಗಳು ಬರುವುದು. ಆದರೆ ಹಿತಶತ್ರುಗಳಿಂದ ವಿವಾಹಕ್ಕೆ ಅಡ್ಡಿ ಬರುವುದು. ಮಾತಿನ ಮೇಲೆ ನಿಗಾ ಇರಲಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಕನ್ಯಾ: ಅನಿರೀಕ್ಷಿತವಾಗಿ ಬರುವ ಬಂಧು ಮಿತ್ರರೊಂದಿಗೆ ಪ್ರವಾಸ ಕೈಗೊಳ್ಳುವಿರಿ. ನೂತನ ದಂಪತಿಗಳಿಗೆ ಸಂತಾನ ಭಾಗ್ಯ ದೊರಕುವುದು. ಪ್ರೇಮಿಗಳಿಗೆ ಹಿರಿಯರಿಂದ ವಿರೋಧ ವ್ಯಕ್ತವಾಗುವುದು. ತಾಳ್ಮೆಯಿಂದ ಹೆಜ್ಜೆಯಿಡಿ.

ತುಲಾ: ಮನೆಯಲ್ಲಿ ಒಂದು ರೀತಿಯ ಬಿಗುವಿನ ವಾತಾವರಣವಿರುವುದು. ಸಂಗಾತಿ ಜತೆಗೆ ಮನಸ್ತಾಪ ಮಾಡಿಕೊಳ್ಳುತ್ತೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಆದರೆ ಉದ್ಯೋಗ ಕ್ಷೇತ್ರದ ಬಗ್ಗೆ ಚಿಂತೆಯಾಗುವುದು. ನಿರುದ್ಯೋಗಿಗಳು ಸ್ವಲ್ಪ ದಿನ ಕಾಯುವುದು ಒಳ್ಳೆಯದು.

ವೃಶ್ಚಿಕ: ಮನಸ್ಸಿಗೆ ಅಂಟಿಕೊಂಡ ಅಂಜಿಕೆಯಿಂದ ನೀವು ಉದ್ದೇಶಿಸಿದ ಕಾರ್ಯಗಳು ಸಫಲವಾಗದು. ದಾಯಾದಿಗಳು ಸದಾ ನಿಮಗೆ ತೊಂದರೆ ಕೊಡುತ್ತಿರುವವರು. ಬಹುದಿನಗಳಿಂದ ಬಾಕಿಯಿದ್ದ ಹರಕೆ ತೀರಿಸಿ. ದೈವ ಕಾರ್ಯದಿಂದ ಮನಸ್ಸಿಗೂ ನೆಮ್ಮದಿ.

ಧನು: ಬಿಡುವಿನ ವೇಳೆಯ ಖುಷಿ ಅನುಭವಿಸಲಿದ್ದೀರಿ. ಹಿರಿಯರ ಆರೋಗ್ಯದ ಬಗ್ಗೆ ಅಶುಭದ ವಾರ್ತೆ ಕೇಳಿಬಂದೀತು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿಬರುತ್ತದೆ.

ಮಕರ: ಹೊಸ ವಾಹನ ಖರೀದಿಗೆ ಮನಸ್ಸು ಮಾಡುವಿರಿ. ವಾಹನ ಚಾಲನೆ ಮಾಡುವವರಿಗೆ ಅಪಘಾತದ ಭಯವಿದೆ. ಪಾಲು ವ್ಯವಹಾರದಲ್ಲಿ ಸಾಕಷ್ಟು ಆದಾಯ ಗಳಿಸುವಿರಿ. ಸಹೋದದರಿಂದ ಸಂತಸ.

ಕುಂಭ: ಸಂವಹನ ಕೊರತೆಯಿಂದ ಕೆಲವೊಂದು ಕೆಲಸಗಳು ಅರ್ಧಕ್ಕೇ ನಿಲ್ಲುವುದು. ಸ್ವ ವೃತ್ತಿಯವರಿಗೆ ಆರ್ಥಿಕ ಮುಗ್ಗಟ್ಟು ಎದುರಾಗುವುದು. ಇದರಿಂದ ಮನಸ್ಸಿಗೆ ಬೇಸರ. ದೇವತಾ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ತಾಳ್ಮೆಯಿಂದಿದ್ದರೆ ದಿನದಂತ್ಯಕ್ಕೆ ಶುಭ ಸುದ್ದಿ.

ಮೀನ: ಸಂಗಾತಿಯೊಂದಿಗೆ ಸುಂದರ ಕ್ಷಣಗಳನ್ನು ಕಳೆಯುವಿರಿ. ಸಾಲಗಾರರು ಸಾಲ ಮರುಪಾವತಿ ಮಾಡಿ ಆರ್ಥಿಕ ಲಾಭವಾಗುವುದು. ಸಹೋದರರೊಂದಿಗೆ ಆಸ್ತಿಗೆ ಸಂಬಂಧಿಸಿದಂತೆ ವಿವಾದವಾಗಬಹುದು. ಹಿರಿಯರ ಸಲಹೆಗಳಿಗೆ ಕಿವಿಗೊಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ                   

Share this Story:

Follow Webdunia kannada

ಮುಂದಿನ ಸುದ್ದಿ

ಸರಸ್ವತಿ ದೇವಿಗೆ ಸಂಬಂಧಪಟ್ಟ ಈ ವಸ್ತುಗಳು ಮನೆಯಲ್ಲಿದ್ದರೆ ಏನಾಗುತ್ತದೆ ಗೊತ್ತಾ?