Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 4 ಮಾರ್ಚ್ 2019 (08:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಕೌಟುಂಬಿಕವಾಗಿ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಕುಲದೇವರ ದರ್ಶನ ಪಡೆಯುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಲಭಿಸುವುದು. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು.

ವೃಷಭ: ಉದ್ಯೋಗ ಬದಲಾವಣೆ ಮಾಡುವಿರಿ. ಅಂದುಕೊಂಡ ಕಾರ್ಯಗಳು ನಿರ್ವಿಘ್ನವಾಗಿ ನೆರವೇರುವುದು. ಸಾಲ ಪಡೆದಿದ್ದರೆ ತೀರಿಸಿ. ಹೊಸ ವ್ಯವಹಾರಕ್ಕೆ ಕೈ ಹಾಕಿದರೆ ನಷ್ಟ ಅನುಭವಿಸಬೇಕಾಗುತ್ತದೆ.

ಮಿಥುನ: ಕಾರ್ಯನಿಮಿತ್ತ ದೂರ ಸಂಚಾರ ಕೈಗೊಳ್ಳಲಿದ್ದೀರಿ. ಆದರೆ ಅಡೆತಡೆಗಳು ತೋರಿಬಂದಾವು. ಮಕ್ಕಳ ವಿಚಾರದಲ್ಲಿ ಚಿಂತೆ ಮಾಡಬೇಕಾಗಬಹುದು. ಉದ್ಯೋಗದಲ್ಲಿ ಕಿರಿ ಕಿರಿ ಮತ್ತು ಆರ್ಥಿಕ ಮುಗ್ಗಟ್ಟುಗಳು ತೋರಿಬರುತ್ತವೆ.

ಕರ್ಕಟಕ: ಕುಟುಂಬದಲ್ಲಿ ನಿಮ್ಮ ಇಷ್ಟಪ್ರಕಾರವೇ ಕೆಲಸ ಕಾರ್ಯಗಳು ನಡೆಯಲಿವೆ. ಉದ್ಯೋಗದಲ್ಲಿ ಜವಾಬ್ಧಾರಿ ಹೆಚ್ಚಾಗಲಿದೆ. ಆದರೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ವಾದ ವಿವಾದಗಳಿಂದ ದೂರವಿರಿ.

ಸಿಂಹ: ಆದಾಯವಿದ್ದಷ್ಟೇ ಖರ್ಚುಗಳೂ ತಲೆದೋರಲಿವೆ. ಯಾವುದೋ ಬೇಡದ ವಿಚಾರಕ್ಕೆ ತಲೆಕೆಡಿಸಿಕೊಳ್ಳುವಿರಿ. ಅಧಿಕಾರಿ ವರ್ಗದವರಿಗೆ ಅಪವಾದದ ಭೀತಿ. ಅವಿವಾಹಿತರಿಗೆ ಕಂಕಣ ಭಾಗ್ಯ ಒದಗಿಬರಲಿದೆ.

ಕನ್ಯಾ: ಸಮಾಜದಲ್ಲಿ ನಿಮ್ಮ ಸ್ಥಾನ ಮಾನಕ್ಕೆ ಕುಂದು ತರುವಂತಹ ಘಟನೆಗಳು ನಡೆಯಲಿವೆ. ತಾಳ್ಮೆಯಿಂದ ಹೆಜ್ಜೆಯಿಡಬೇಕು. ಅನವಶ್ಯಕ ಕಲಹದಿಂದ ದೂರವಿರಿ. ಆರೋಗ್ಯದಲ್ಲಿ ಏರುಪೇರಾಗಬಹುದು.

ತುಲಾ: ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ. ನೂತನ ದಂಪತಿಗಳಿಗೆ ಸಂತಾನ ಭಾಗ್ಯದ ಸೂಚನೆಗಳಿರುತ್ತವೆ. ಹೊಸ ಉದ್ಯೋಗಕ್ಕಾಗಿ ಹುಡುಕಾಟ ನಡೆಸಿ ಯಶಸ್ವಿಯಾಗುವಿರಿ.

ವೃಶ್ಚಿಕ: ಆರ್ಥಿಕ ಮುಗ್ಗಟ್ಟು ಎದುರಾಗಿ ಹಣ ಸಂಪಾದನೆಗೆ ಕೆಟ್ಟ ಮಾರ್ಗದ ಬಗ್ಗೆ ಮನಸ್ಸು ಚಿಂತನೆ ನಡೆಸೀತು. ಆದರೆ ನಿಮ್ಮ ಮೇಲೆ ನಿಮಗೆ ಹಿಡಿತ ಅಗತ್ಯ. ಹಿರಿಯರೊಂದಿಗೆ ಅಭಿಪ್ರಾಯಬೇಧ ಬರುತ್ತದೆ. ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಿ.

ಧನು: ಕುಟುಂಬದಲ್ಲಿ ಶಾಂತಿ, ಸಮಾಧಾನ ನೆಲೆಸಲಿದೆ. ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡುವಿರಿ. ಕಷ್ಟ ಬಂದಾಗ ಮಿತ್ರರ ಸಹಾಯ ಒದಗಿಬರಲಿದೆ. ಸಂಚಾರ ಮಾಡುವಿರಿ.

ಮಕರ: ಆರೋಗ್ಯ ಸಮಸ್ಯೆಗಳು ಇದ್ದಲ್ಲಿ ನಿಧಾನವಾಗಿ ಚೇತರಿಕೆ ಕಾಣುವಿರಿ. ಹಿತಶತ್ರುಗಳಿಂದ ವಂಚನೆಗೊಳಗಾದಂತೆ ಎಚ್ಚರವಹಿಸಿ. ಕಾರ್ಯಾನುಕೂಲಕ್ಕಾಗಿ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ.

ಕುಂಭ: ಇಂದು ನಿಮ್ಮ ಕೆಲಸಗಳಿಗೆ ಅಡ್ಡಿ, ಶತ್ರುಭಯ ಕಂಡುಬರುತ್ತದೆ. ತೊಂದರೆಗಳು ಬಂದಾಗ ತಾಳ್ಮೆಯಿಂದ ನಿಭಾಯಿಸಿ. ವೃತ್ತಿರಂಗದಲ್ಲಿ ಕಾರ್ಯದೊತ್ತಡದಿಂದ ಹೈರಾಣಾಗುವಿರಿ. ನೆಮ್ಮದಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಆರ್ಥಿಕ ಮುಗ್ಗಟ್ಟಿನಿಂದಾಗಿ ಕುಟುಂಬದಲ್ಲಿ ನೆರವೇರಿಸಬೇಕಿದ್ದ ಕಾರ್ಯಗಳು ಅರ್ಧಕ್ಕೆ ಮೊಟಕುಗೊಳಿಸುವಿರಿ. ಮಾತು, ಕೃತಿಯಲ್ಲಿ ದುಡುಕಿನ ವರ್ತನೆ ಬೇಡ. ಬಂಧು ಮಿತ್ರರ ಸಹಾಯ ಸಿಗಲಿದೆ. ಎಚ್ಚರ ಅಗತ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?