Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 8 ಮಾರ್ಚ್ 2019 (08:41 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಕಚೇರಿ ಕೆಲಸ ನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ಕೆಲಸದೊತ್ತಡದಿಂದ ದೇಹಾಯಾಸವಾಗುವುದು. ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಲಿದೆ. ಹೊಸ ವಾಹನ ಖರೀದಿಗೆ ಮುಂದಾಗುವಿರಿ.

ವೃಷಭ: ಸಂಕಷ್ಟದ ಸಮಯದಲ್ಲಿ ಅನಿರೀಕ್ಷಿತವಾಗಿ ಬರುವ ಬಂಧು ಮಿತ್ರರಿಂದ ಸಹಾಯವಾಗುವುದು. ಆಸ್ತಿ ವಿವಾದಗಳು ಕೋರ್ಟು ಮೆಟ್ಟಿಲೇರಿದ್ದರೆ ನಿಮ್ಮ ಪರವಾಗಿ ತೀರ್ಪು ಬರುವುದು. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲದ ಅಗತ್ಯವಿದೆ.

ಮಿಥುನ: ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಹೆಚ್ಚಿ, ಮನಸ್ಸಿಗೆ ಬೇಸರ ಮೂಡುವುದು. ಕುಟುಂಬದ ಸದಸ್ಯರೊಂದಿಗೆ ತಾಳ್ಮೆ ಸಮಾಧಾನದಿಂದ ವರ್ತಿಸಬೇಕು.ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಾಗದು. ದಿನದಂತ್ಯಕ್ಕೆ ಶುಭ ಸುದ್ದಿ.

ಕರ್ಕಟಕ: ಬಹುದಿನಗಳಿಂದ ಬಾಕಿಯಿದ್ದ ಹರಕೆ ಪೂರೈಸುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು. ಹಿರಿಯರೊಂದಿಗೆ ವಾಗ್ವಾದಕ್ಕಿಳಿಯುವುದು ಬೇಡ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಸಿಂಹ: ಅಂದುಕೊಂಡ ಕಾರ್ಯಗಳಿಗೆ  ಹಿರಿಯರ ಆಶೀರ್ವಾದ ಸಿಗಲಿದೆ. ಆದರೆ ಅನಿರೀಕ್ಷಿತವಾಗಿ ಖರ್ಚು ಬರಲಿದೆ. ಬಂಧು ಮಿತ್ರರೊಂದಿಗೆ ಪ್ರವಾಸ ಕೈಗೊಳ್ಳುವಿರಿ. ಸಂಗಾತಿ ಜತೆಗೆ ಸುಂದರ ಕ್ಷಣ ಕಳೆಯುವಿರಿ.

ಕನ್ಯಾ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸುವಿರಿ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಲಭಿಸಲಿದೆ. ಸಾಂಸಾರಿಕವಾಗಿ ಕಷ್ಟದ ಸಮಯದಲ್ಲಿ ಸಹಕಾರ ಸಿಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ಮಾಡಬೇಕಾಗುತ್ತದೆ.

ತುಲಾ: ಮನೆಗೆ ಬೇಕಾದ ನೂತನ ವಸ್ತುಗಳ ಖರೀದಿಗೆ ಮುಂದಾಗುವಿರಿ. ಮನೆಯಲ್ಲಿ ಶುಭ ಕಾರ್ಯ ನೆರವೇರಿಸುವಿರಿ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನೆರೆಹೊರೆಯವರೊಂದಿಗೆ ಕಿರಿ ಕಿರಿಯಾಗಬಹುದು. ತಾಳ್ಮೆಯಿಂದ ಮುನ್ನಡೆಯಬೇಕು.

ವೃಶ್ಚಿಕ: ಕಚೇರಿ ಕೆಲಸ ನಿಮಿತ್ತ ಸಂಚಾರ ನಡೆಸಬೇಕಾಗುತ್ತದೆ. ವಾಹನ ಚಲಾವಣೆ ಮಾಡುವಾಗ ಎಚ್ಚರವಿರಲಿ, ಅಪಘಾತದ ಭಯವಿದೆ. ಹಿತಶತ್ರುಗಳು ಬೆನ್ನ ಹಿಂದೆಯೇ ಇದ್ದಾರೆ. ಹಾಗಾಗಿ ಹೊಸ ವ್ಯವಹಾರಗಳಿಗೆ ಕೈ ಹಾಕುವಾಗ ಎಚ್ಚರವಿರಲಿ.

ಧನು: ಸಂಗಾತಿಯ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. ಓಡಾಟದಿಂದ ಖರ್ಚು ವೆಚ್ಚಗಳು ಹೆಚ್ಚುವುದು. ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಗಮನ ಕಳೆದುಕೊಳ್ಳುವರು. ವಾಸ ಸ್ಥಳ ಬದಲಾವಣೆಗೆ ಚಿಂತನೆ ಮಾಡುವಿರಿ.

ಮಕರ: ಅರ್ಧಕ್ಕೆ ನಿಂತ ಕೆಲಸ ಕಾರ್ಯಗಳನ್ನು ಪುನರಾರಂಭಿಸಲು ಇದು ಸಕಾಲ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ತಕ್ಕ ಫಲ ಸಿಗುವುದು. ಆರ್ಥಿಕವಾಗಿ ಸಬಲರಾಗುತ್ತೀರಿ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಕುಂಭ: ಮಕ್ಕಳ ಭವಿಷ್ಯಕ್ಕೆ ಹಣ ಕೂಡಿಡುವ ಚಿಂತೆ ಕಾಡಲಿದೆ. ಸಹೋದರ ಅಥವಾ ಸಹೋದರಿಯ ಮದುವೆ ವಿಷಯವಾಗಿ ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮೀನ: ಇದುವರೆಗೆ ಇದ್ದ ಹಣಕಾಸಿನ ಮುಗ್ಗಟ್ಟುಗಳು ದೂರವಾಗಲಿದೆ. ಉದ್ಯಮಿಗಳು ನಷ್ಟ ಅನುಭವಿಸುವರು. ನೀರಿನ ವಿಚಾರಕ್ಕಾಗಿ ನೆರೆಹೊರೆಯವರೊಂದಿಗೆ ಕಚ್ಚಾಟ ನಡೆಯಬಹುದು. ದೇವರ ಪ್ರಾರ್ಥನೆ ಮಾಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

ಮುಂದಿನ ಸುದ್ದಿ
Show comments