Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 14 ಮಾರ್ಚ್ 2019 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಮುನ್ನಡೆಯಿರುತ್ತದೆ. ಆದರೆ ಸಹೋದ್ಯೋಗಿಗಳಿಂದ ಕಿರಿ ಕಿರಿ ತಪ್ಪದು. ದೂರ ಸಂಚಾರ ಮಾಡುವುದರಿಂದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಅಗತ್ಯವಿದೆ.

ವೃಷಭ: ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುವುದು. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯವಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು.

ಮಿಥುನ: ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ಮನಸ್ಸಿಗೆ ಬೇಸರವಾಗುವುದು. ಆದರೆ ನಿರಾಶೆ ಬೇಡ. ಮಿತ್ರರಿಂದ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ. ಆದರೆ ದಾಂಪತ್ಯದಲ್ಲಿ ಕಲಹದ ಅಪಾಯವಿದೆ.

ಕರ್ಕಟಕ: ಉದ್ಯಮಿಗಳಿಗೆ ಶುಭ ದಿನ. ಆರ್ಥಿಕವಾಗಿ ಅಭಿವೃದ್ಧಿ ಕಾಣುವಿರಿ. ಸಂತಾನ ಭಾಗ್ಯ ಬಯಸುವ ದಂಪತಿಗಳಿಗೆ ಶುಭ ಸುದ್ದಿ. ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಿ ಮನೆಯಲ್ಲಿ ಸಂತಸದ ವಾತಾವರಣವಿರುತ್ತದೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ. ಸಂಗಾತಿಯ ಆರೋಗ್ಯ ಹದಗೆಡುವುದು. ಮನೆ ನಿರ್ವಹಣೆಗಾಗಿ ಅಧಿಕ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ನೆಮ್ಮದಿಗಾಗಿ ಕುಲದೇವರ ಪ್ರಾರ್ಥಿಸಿ.

ಕನ್ಯಾ: ಮಾತಿನ ಮೇಲೆ ನಿಗಾ ಇರಲಿ. ಬಾಯ್ತಪ್ಪಿ ಆಡುವ ಮಾತಿನಿಂದ ಅಪವಾದಕ್ಕೆ ಗುರಿಯಾಗುವಿರಿ. ನಿಮ್ಮ ಪರಿಶ್ರಮ ಕಂಡು ಮೇಲಧಿಕಾರಿಗಳೇ ಅಸೂಯೆ ಪಡುವರು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ತುಲಾ: ಕಷ್ಟದ ಸಮಯದಲ್ಲಿ ಮಿತ್ರರಿಂದ ಸಹಾಯ ದೊರೆಯುವುದು. ಉದ್ಯೋಗ ಕ್ಷೇತ್ರದಲ್ಲಿ ಸಾಕಷ್ಟು ಆರ್ಥಿಕ ಲಾಭ ಗಳಿಸುವಿರಿ. ಅವಿವಾಹಿತರಿಗೆ ಕಂಕಣ ಭಾಗ್ಯ ಬರಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮ ಅಗತ್ಯ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ನೀವು ಮಾಡಿದ ಸಣ್ಣ ತಪ್ಪಿಗೆ ಮೇಲಧಿಕಾರಿಯಿಂದ ಬೈಸಿಕೊಳ್ಳಬೇಕಾಗುತ್ತದೆ. ಹಿತ ಶತ್ರುಗಳು ನಿಮ್ಮ ವಂಚಿಸಲು ಕಾಯುತ್ತಿರುವರು. ಆದರೆ ಅನಿರೀಕ್ಷಿತವಾಗಿ ಬರುವ ನೆಂಟರಿಂದ ಶುಭ ಸುದ್ದಿ.

ಧನು: ಮನೆಯಲ್ಲಿ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ಆದರೆ ವಾಹನ, ವಸ್ತ್ರ ಇತ್ಯಾದಿ ಖರೀದಿಗೆ ಇಂದು ಮುಂದಾಗಬೇಡಿ. ಅನಗತ್ಯ ಮಾತುಗಳಿಗೆ ಕಿವಿಗೊಡಬೇಡಿ.

ಮಕರ: ಹಿರಿಯರು ತೀರ್ಥ ಯಾತ್ರೆ ಕೈಗೊಳ್ಳುವರು. ಎಷ್ಟೋ ದಿನದಿಂದ ಬಾಕಿಯಿದ್ದ ಹರಕೆಗಳನ್ನು ತೀರಿಸುವಿರಿ. ಕೆಲವೊಂದು  ವಿಚಾರದಲ್ಲಿ ಸಂಗಾತಿಗಾಗಿ ಇಷ್ಟವಿಲ್ಲದ ಕೆಲಸಗಳನ್ನೂ ಮಾಡಬೇಕಾಗುತ್ತದೆ. ಪ್ರೇಮಿಗಳಿಗೆ ಶುಭ ದಿನ.

ಕುಂಭ:  ಯಾವುದೋ ಒಂದು ಬೇಸರ ಮನಸ್ಸಿಗೆ ಕಾಡಿ ಇಂದಿನ ಕೆಲಸಗಳನ್ನು ಹಾಳುಗೆಡವುದು. ವಿನಾಕಾರಣ ಅಪವಾದಕ್ಕೆ ಗುರಿಯಾಗುವಿರಿ. ವಿದ್ಯಾರ್ಥಿಗಳಿಗೆ ವಿದೇಶ ಪ್ರವಾಸದ ಭಾಗ್ಯವಿದೆ. ತಾಳ್ಮೆ ಅಗತ್ಯ.

ಮೀನ: ನಿರುದ್ಯೋಗಿಗಳಿಗೆ ವಿದ್ಯೆಗೆ ತಕ್ಕ ಉದ್ಯೋಗ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವಿರಿ. ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಆರ್ಥಿಕವಾಗಿ ಮುನ್ನಡೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments