Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 17 ಮಾರ್ಚ್ 2019 (08:25 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದ ಕಾರ್ಯದೊತ್ತಡ ಇಂದೂ ಬೆಂಬಿಡದು. ಹಾಗಿದ್ದರೂ ಕೆಲಸದಲ್ಲಿ ಯಶಸ್ಸಿನ ಖುಷಿ ನಿಮ್ಮದಾಗುವುದು. ಸಾಲಗಾರರಿಗೆ ಬಾಕಿ ಪಾವತಿ ಮಾಡುವುದಿದ್ದರೆ ಅದರ ಮರುಪಾವತಿ ಚಿಂತೆ ಕಾಡುವುದು.

ವೃಷಭ: ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಹಿರಿಯರಿಂದ ಅನಾದರಣೆಗೊಳಗಾಗಬೇಕಾಗುತ್ತದೆ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ಮಿಥುನ: ಅವಿವಾಹಿತರಿಗೆ ಮನಸ್ಸಿಗೆ ಒಪ್ಪುವಂತಹ ವಿವಾಹ ಪ್ರಸ್ತಾಪಗಳು ಬರುವುದು. ಆದರೆ ಅದರಲ್ಲಿ ಯಶಸ್ಸು ಕಾಣಬೇಕಾದರೆ ಸುಬ್ರಹ್ಮಣ್ಯ ಪ್ರಾರ್ಥನೆ ಅಗತ್ಯ. ನೆರೆಹೊರೆಯವರೊಂದಿಗೆ ಗಡಿ ತಂಟೆ ತಕರಾರು ಎದುರಾಗುವುದು. ತಾಳ್ಮೆ ಅಗತ್ಯ.

ಕರ್ಕಟಕ: ಸಾಮಾಜಿಕವಾಗಿ ಸ್ಥಾನ ಮಾನ ಪಡೆಯುವಿರಿ ಮತ್ತು ನಿಮ್ಮ ಕೆಲಸಗಳು ಪ್ರಶಂಸೆಗೊಳಗಾಗುವುದು. ಆದರೆ ಕುಟುಂಬದಲ್ಲಿ ಸಂಗಾತಿಯೊಂದಿಗೆ ಮನಸ್ತಾಪಗಳು ಬರುವುದು. ನೆಮ್ಮದಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ.

ಸಿಂಹ: ಹಿರಿಯರ ಅನಾರೋಗ್ಯ ಸಂಬಂಧ ಆಸ್ಪತ್ರೆ ಅಲೆದಾಟ ತಪ್ಪದು. ವೃತ್ತಿಯಲ್ಲಿ ನೀವು ಅಂದುಕೊಂಡ ಕೆಲಸಗಳು ನೆರವೇರುವುದು. ಆದಾಯಕ್ಕೆ ಯಾವುದೇ ಕೊರತೆಯಿಲ್ಲ. ಮಿತ್ರರ ಭೇಟಿಯಾಗುವಿರಿ.

ಕನ್ಯಾ: ಇಷ್ಟಾರ್ಥ ಸಿದ್ಧಿಗಾಗಿ ಭಗವಂತನ ಪ್ರಾರ್ಥನೆ ಅಗತ್ಯ. ದೈವಾನುಕೂಲ ನಿಮ್ಮ ಮೇಲಿರುವುದರಿಂದ ಆರ್ಥಿಕವಾಗಿ ಲಾಭ ಕಾಣುವಿರಿ. ನೂತನ ದಂಪತಿಗೆ ಮಧುಚಂದ್ರ ಭಾಗ್ಯವಿದೆ.

ತುಲಾ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಆದರೆ ಕೈಗೊಳ್ಳುವ ಕಾರ್ಯಗಳಲ್ಲಿ ಕೆಲವು ವಿಘ್ನಗಳು ಎದುರಾಗಲಿವೆ. ವಿಘ್ನೇಶ್ವರನ ಪ್ರಾರ್ಥನೆ ಮಾಡಿ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ವೃಶ್ಚಿಕ: ದಾಯಾದಿಗಳೊಂದಿಗೆ ಆಸ್ತಿ ಸಂಬಂಧ ಕಲಹವೇರ್ಪಡಬಹುದು. ಆದರೆ ಹಿರಿಯರ ಮಧ್ಯಸ್ಥಿಕೆಯಿಂದ ಎಲ್ಲವೂ ಸರಿಯಾಗುವುದು. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗಲಿದೆ.

ಧನು: ವಿದ್ಯಾರ್ಥಿಗಳು ಪರೀಕ್ಷೆ ತಯಾರಿ ನಡೆಸಬೇಕಾಗುವುದು. ಬಂಧು ಮಿತ್ರರ ಭೇಟಿ ಸಂತಸ ನೀಡಲಿದೆ. ಹಾಗಿದ್ದರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಕರ: ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಯೋಗವಿದೆ. ಪೂರ್ವ ದಿಕ್ಕಿನ ಪ್ರಯಾಣ ಶುಭ ಉಂಟುಮಾಡಲಿದೆ. ಇಷ್ಟಪಟ್ಟ ವಧು/ವರನೊಂದಿಗೆ ವಿವಾಹ ಭಾಗ್ಯ. ಅಂದುಕೊಂಡ ಕಾರ್ಯಗಳಿಗೆ ವಿಘ್ನಗಳು ಎದುರಾದರೂ ಅಂತಿಮವಾಗಿ ಜಯ ನಿಮ್ಮದೇ.

ಕುಂಭ:  ಗೃಹೋಪಯೋಗಿ ವಸ್ತುಗಳ ಖರೀದಿಗೆ ಮುಂದಾಗುವಿರಿ. ಶೀತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಲಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.

ಮೀನ: ವ್ಯಾಪಾರ, ವ್ಯವಹಾರದಲ್ಲಿ ಲಾಭ ಕಾಣುವಿರಿ. ಎಷ್ಟೋ ದಿನದಿಂದ ಬಾಕಿಯಿದ್ದ ಸಾಲ ಮರುಪಾವತಿಯಾಗಿ ಆದಾಯಕ್ಕೆ ಕೊರತೆಯಾಗದು. ಆದರೆ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments