ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 18 ಮಾರ್ಚ್ 2019 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಕುಟುಂಬಕ್ಕೆ ಸಂಬಂಧಿಸಿದ ಕೆಲವು ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ಕಾರ್ಯಕ್ಷೇತ್ರದಲ್ಲೂ ಒತ್ತಡ ತಪ್ಪಿದ್ದಲ್ಲ. ಬಾಕಿ ಸಾಲ ಪಾವತಿ ಬಗ್ಗೆ ಆತಂಕವಾಗುವುದು. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ವೃಷಭ: ಋಣ ಬಾಧೆಯಿಂದ ಮುಕ್ತರಾಗುವಿರಿ. ಪರರಿಗೆ ಸಹಾಯ ಮಾಡುವ ಗುಣದಿಂದ ನೆರೆಹೊರೆಯವರಿಂದ ಪ್ರಶಂಸೆಗೊಳಗಾಗುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ಮಿಥುನ: ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಅವಿವಾಹಿತರಿಗೆ ಸೂಕ್ತ ವಿವಾಹ ಪ್ರಸ್ತಾಪಗಳು ಬರವುದು.  ಕೃಷಿ ಕ್ಷೇತ್ರದಲ್ಲಿರುವವರಿಗೆ ಆದಾಯ ಹೆಚ್ಚುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಕರ್ಕಟಕ: ಅಂದುಕೊಂಡ ಕಾರ್ಯಗಳು ನೆರವೇರುವುದು. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗುವುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಹೆಚ್ಚುವುದು. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸುವುದು ಅಗತ್ಯ.

ಸಿಂಹ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುವುದು. ಆಸ್ತಿ, ಪಾಲು ಬಂಡವಾಳದಲ್ಲಿ ಕೋರ್ಟು ಕಚೇರಿ ಎಂದು ಅಲೆದಾಡಬೇಕಾಗುತ್ತದೆ. ಹಿತ ಶತ್ರುಗಳಿಂದ ವಂಚನೆಗೊಳಗಾಗದಂತೆ ಎಚ್ಚರವಹಿಸುವುದು ಅಗತ್ಯ.

ಕನ್ಯಾ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಮುಂದಾಗುವಿರಿ. ಆದರೆ ಖರ್ಚು ವೆಚ್ಚಗಳು ಹಿಡಿತದಲ್ಲಿರಲಿ. ದುಡುಕಿನ ವರ್ತನೆ, ಮಾತಿನಿಂದ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳಲಿದ್ದೀರಿ. ಎಚ್ಚರ ಅಗತ್ಯ.

ತುಲಾ: ವಿಘ್ನೇಶ್ವರನ ಪ್ರಾರ್ಥನೆಯೊಂದಿಗೆ ದಿನದ ಆರಂಭ ಮಾಡಿದರೆ ಇಂದು ಅಂದುಕೊಂಡ ಕಾರ್ಯಗಳು ಸಿದ್ಧಿಯಾಗುವುದು. ಆದರೆ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಶುಭ ಮಂಗಲ ಕಾರ್ಯ ನೆರವೇರಿಸುವುದರ ಬಗ್ಗೆ ಚಿಂತನೆ ಮಾಡುವಿರಿ.

ವೃಶ್ಚಿಕ: ಸಹೋದರರ ವಿವಾಹ ಸಂಬಂಧ ಓಡಾಟ ನಡೆಸಬೇಕಾಗುತ್ತದೆ. ಆದರೆ ಅನಗತ್ಯ ವಿಚಾರಗಳಲ್ಲಿ ಮೂಗು ತೂರಿಸಲು ಹೋದರೆ ಅಪವಾದ ತಪ್ಪದು. ವ್ಯವಹಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಿ.

ಧನು: ವಿದ್ಯಾರ್ಥಿಗಳಿಗೆ ಇದು ಸತ್ವ ಪರೀಕ್ಷೆ ಕಾಲ. ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಕೊಡಬೇಕಾಗುತ್ತದೆ. ಬೇಡದ ಆಲೋಚನೆಗಳಿಂದ ಮನಸ್ಸು ಕೆಡಿಸಿಕೊಳ್ಳುವಿರಿ. ನೆಮ್ಮದಿಗಾಗಿ ಕುಲದೇವರ ಪ್ರಾರ್ಥಿಸಿ.

ಮಕರ: ವಿವಾಹಾಕಾಂಕ್ಷಿಗಳಿಗೆ ಕೆಲವು ವಿಘ್ನಗಳು ಉಂಟಾಗುವುದು. ಸುಬ್ರಹ್ಮಣ್ಯ ಸೇವೆ ಮಾಡಿ. ಯಾವುದೇ ಕೆಲಸಕ್ಕೆ ಮೊದಲು ಹಿರಿಯರ ಸಲಹೆ ಪಡೆದು ಮುನ್ನಡೆಯಿರಿ. ಕಾರ್ಯಕ್ಷೇತ್ರದಲ್ಲಿ ಉದಾಸೀನ ಪ್ರವೃತ್ತಿ ತೋರುವಿರಿ.

ಕುಂಭ:  ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇದ್ದರೂ ಅಂತಿಮ ಜಯ ನಿಮ್ಮದಾಗುವುದು. ಆದಾಯಕ್ಕೆ ಏನೂ ಕೊರತೆಯಾಗದು. ಆದರೆ ಅನಿರೀಕ್ಷಿತ ಖರ್ಚುಗಳು ಎದುರಾಗುವುದು.

ಮೀನ: ವ್ಯಾಪಾರ, ವಾಣಿಜ್ಯೋದ್ಯಮಿಗಳು ಲಾಭ ಗಳಿಸುವರು. ಉದ್ಯೋಗದಲ್ಲಿ ಮುನ್ನಡೆ ಕಾಣುವಿರಿ. ಆದರೆ ಕೌಟುಂಬಿಕವಾಗಿ ಕೆಲವೊಂದು ಭಿನ್ನಾಭಿಪ್ರಾಯಗಳು ಮನಸ್ಸಿಗೆ ಬೇಸರವುಂಟುಮಾಡುವುದು. ತಾಳ್ಮೆಯಿಂದಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಉತ್ತಮ ಆರೋಗ್ಯಕ್ಕಾಗಿ ಹೇಳಬೇಕಾದ ಆಂಜನೇಯ ಮಂತ್ರ

ಶುಕ್ರವಾರ ನಾರಾಯಣೀ ಸ್ತುತಿಯನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments