Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 21 ಮಾರ್ಚ್ 2019 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಲಭಿಸುವುದು. ವಿವಾಹಾಪೇಕ್ಷಿಗಳು ಕೆಲವು ಕಾಲ ಕಾಯಬೇಕಾಗುತ್ತದೆ. ಆರ್ಥಿಕವಾಗಿ ಚೇತರಿಕೆಯಿರುತ್ತದೆ. ಆದರೆ ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ.

ವೃಷಭ: ಇದುವರೆಗೆ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಮುಕ್ತಿ ಸಿಗಲಿದೆ. ಆದರೆ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ತಲೆದೋರಲಿದ್ದು, ಮೌನವಾಗಿರುವುದೇ ಲೇಸು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ.

ಮಿಥುನ: ದಾಂಪತ್ಯದಲ್ಲಿ ಸುಖಕರ ದಿನಗಳಿವು. ಸಂಗಾತಿಯೊಂದಿಗೆ ಸುಂದರ ಕ್ಷಣಗಳನ್ನು ಕಳೆಯುವಿರಿ. ಹಿತಶತ್ರುಗಳು ಬೆಂಬಿಡದೇ ಕಾಡಲಿದ್ದಾರೆ. ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕರ್ಕಟಕ: ಕಾರ್ಯ ಕ್ಷೇತ್ರದಲ್ಲಿ ಆತ್ಮಸ್ಥೈರ್ಯದ ಕೊರತೆ ಕಾಣಲಿದೆ. ಆಂಜನೇಯ ಸ್ವಾಮಿಗೆ ವೀಳ್ಯದ ಮಾಲೆ ಅರ್ಪಿಸಿ ಹೊಸ ಕೆಲಸಗಳಿಗೆ ಕೈ ಹಾಕಿ. ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ವಿಳಂಬಗತಿಯ ಕಾರ್ಯಗಳಿಂದ ಚಿಂತೆಯಾಗುವುದು.

ಸಿಂಹ: ಆರೋಗ್ಯದ ಬಗ್ಗೆ ಅಲಕ್ಷ್ಯ ಬೇಡ. ಶತ್ರುಕಾಟ ತೋರಬರುವುದು. ಆದರೆ ದೇವರ ದರ್ಶನ, ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ, ಧೈರ್ಯ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.

ಕನ್ಯಾ: ಸಂಗಾತಿಯೊಡನೆ ಮನಸ್ತಾಪ ಮಾಡಿಕೊಳ್ಳುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಸ್ತ್ರೀಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ. ಹೊಸ ವಸ್ತ್ರಾಭರಣಗಳ ಖರೀದಿ ಮಾಡುವಿರಿ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.

ತುಲಾ: ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಕೈಗೊಂಡ ಕಾರ್ಯಗಳಲ್ಲಿ ಸಣ್ಣಪುಟ್ಟ ವಿಘ್ನಗಳು ಎದುರಾದರೂ ಅಂತಿಮವಾಗಿ ಜಯ ಸಿಗುವುದು. ಆಸ್ತಿ ಖರೀದಿಗೆ ಮನಸ್ಸು ಮಾಡುವಿರಿ. ಅಧಿಕಾರಿ ವರ್ಗಕ್ಕೆ ಬಡ್ತಿ ಯೋಗವಿದೆ.

ವೃಶ್ಚಿಕ: ವಿದ್ಯಾರ್ಥಿಗಳು ಶಿಕ್ಷಕರಿಂದ ಪ್ರಶಂಸೆಗೊಳಗಾಗುವರು. ಆರೋಗ್ಯ ಭಾಗ್ಯ ಕೈಕೊಡುವುದು. ದೇವತಾ ಪ್ರಾರ್ಥನೆಯೊಂದಿಗೆ ನಡೆದರೆ ಕಾರ್ಯಸಿದ್ಧಿ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ.

ಧನು: ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವ್ಯಾಪಾರ, ವಹಿವಾಟಿನಲ್ಲಿ ಕೊಂಚ ಮಟ್ಟಿಗಿನ ಹಿನ್ನಡೆ ಅನುಭವಿಸಬೇಕಾದೀತು. ಅನಿರೀಕ್ಷಿತ ಖರ್ಚುಗಳು ಎದುರಾಗುವುದು. ಆದರೆ ಸಾಂಸಾರಿಕವಾಗಿ ನೆಮ್ಮದಿ ಕಾಣುವಿರಿ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ತೊಂದರೆ ಎದುರಿಸಬೇಕಾಗುತ್ತದೆ. ಅನಗತ್ಯ ಅಪವಾದಗಳಿಗೆ ಗುರಿಯಾಗುವಿರಿ. ದೇವತಾ ಪ್ರಾರ್ಥನೆ ಮಾಡಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕುಂಭ:  ದಾಯಾದಿ ಕಲಹಗಳು ತೋರಿಬರುವುದು. ಆಸ್ತಿ  ವಿಚಾರಕ್ಕೆ ಕೋರ್ಟು ಮೆಟ್ಟಿಲೇರಬೇಕಾಗುತ್ತದೆ. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ವೃತ್ತಿರಂಗದಲ್ಲಿ ಮುನ್ನಡೆ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮೀನ: ಮನೆಯಲ್ಲಿ ದೇವತಾ ಕಾರ್ಯಗಳನ್ನು ನೆರವೇರಿಸುವಿರಿ. ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಯೋಗವಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಆಲಸ್ಯ ಮೂಡುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ                         

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments