Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 29 ಮಾರ್ಚ್ 2019 (08:14 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಕಾರ್ಯಕ್ಷೇತ್ರದಲ್ಲಿ ಹಲವು ಅಡ್ಡಿ ಆತಂಕಗಳು ಎದುರಾಗಲಿವೆ. ಮಿತ್ರರ ಸಹಕಾರ ದೊರೆಯುವುದು. ಶುಭ ಮಂಗಲ ಕಾರ್ಯಗಳಿಗೆ ಚಿಂತನೆ ನಡೆಸುವಿರಿ. ಕಷ್ಟಕಾಲದಲ್ಲಿ ಹಿರಿಯರ ಸಲಹೆಗೆ ಕಿವಿಗೊಡಿ.

ವೃಷಭ: ಆರೋಗ್ಯ ಕೈಕೊಟ್ಟು ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಬಹುದು. ಮೈ ಕೈ ನೋವಿನಂತಹ ಸಮಸ್ಯೆ ಬರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು.

ಮಿಥುನ: ಅಧಿಕಾರಿ ವರ್ಗದವರಿಗೆ ಉದ್ಯೋಗದಲ್ಲಿ ಹಿನ್ನಡೆ ಭೀತಿಯಿದೆ. ವಿನಾಕಾರಣ ಅಪವಾದಕ್ಕೆ ಗುರಿಯಾಗಬೇಕಾಗಬಹುದು. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ.

ಕರ್ಕಟಕ: ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವರು, ಶಿಕ್ಷಕರು, ಪೋಷಕರಿಂದ ಪ್ರಶಂಸೆಗೊಳಗಾಗುವರು. ಮಿತ್ರರ ಸಹಕಾರದಿಂದ ಬರಬಹುದಾದ ಕಷ್ಟದಿಂದ ಪಾರಾಗುವಿರಿ. ಪ್ರವಾಸ, ದೂರಸಂಚಾರ ಕೈಗೊಳ್ಳುವ ಸಂಭವವಿದೆ.

ಸಿಂಹ: ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚುವುದು. ಸಹೋದರಿಯ ಮದುವೆ ಜವಾಬ್ಧಾರಿ ನಿಭಾಯಿಸಬೇಕಾಗುತ್ತದೆ. ಆರ್ಥಿಕವಾಗಿ ನಾನಾ ಖರ್ಚುಗಳು ಕಂಡುಬರುವುದು. ಆದರೆ ಆದಾಯಕ್ಕೂ ಕೊರತೆಯಿರದು. ದಿನದಂತ್ಯಕ್ಕೆ ಶುಭ ಸುದ್ದಿ.

ಕನ್ಯಾ: ಸಾಲ ಮಾಡಿದ್ದರೆ, ಸಾಲಗಾರರು ಮನೆ ಬಾಗಿಲಿಗೆ ಬರುವರು. ಆರ್ಥಿಕ ಸಂಕಷ್ಟ ನಿಮ್ಮನ್ನು ಹೈರಾಣಾಗಿಸಲಿದೆ. ಆರೋಗ್ಯ ಕೈಕೊಡದಂತೆ ಎಚ್ಚರವಹಿಸಿ. ಕೃಷಿಕರು ಹೆಚ್ಚಿನ ಪರಿಶ್ರಮ ಪಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಮುನ್ನಡೆ ಇದೆ.

ತುಲಾ: ದೈವಾನುಕೂಲದಿಂದ ಆದಾಯ ಹೆಚ್ಚಿ, ವಾಹನ, ಆಸ್ತಿ ಖರೀದಿಗೆ ಮನಸ್ಸು ಮಾಡುವಿರಿ. ಯೋಗ್ಯ ವಯಸ್ಕರು ಸಂಗಾತಿಯ ಹುಡುಕಾಟಕ್ಕೆ ತೊಡಗುವರು. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ.

ವೃಶ್ಚಿಕ: ಉದ್ಯೋಗದಲ್ಲಿ ಬದಲಾವಣೆ, ವಾಸ ಸ್ಥಳ ಬದಲಾವಣೆ ಯೋಗವಿದೆ. ಮನೆಗೆ ಬೇಕಾದ ವಸ್ತುಗಳಿಗೆ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಮಹಿಳೆಯರಿಂದ ಶುಭವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಪ್ರತಿಸ್ಪರ್ಧಿಗಳು ಹುಟ್ಟಿಕೊಳ್ಳುವರು. ಎಚ್ಚರ ಅಗತ್ಯ.

ಧನು: ಅನಿರೀಕ್ಷಿತವಾಗಿ ಬರುವ ಬಂಧು ಮಿತ್ರರಿಂದ ಶುಭ ಸುದ್ದಿ ಸಿಗಲಿದೆ. ನೀವು ಅಂದುಕೊಂಡ ಕಾರ್ಯ ನೆರವೇರುವುದು. ಆದರೆ ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕಿ. ವಿದ್ಯಾರ್ಥಿಗಳು ಪ್ರಯತ್ನ ಬಲ ಮುಂದುವರಿಸಬೇಕು.

ಮಕರ: ಇಂದಿನ ದಿನ ನೀವು ಅಂದುಕೊಂಡಂತೆ ಕಾರ್ಯಗಳು ನೆರವೇರುವುದು. ಆರ್ಥಿಕವಾಗಿಯೂ ಚೇತರಿಕೆ ಕಾಣುವಿರಿ. ಹೀಗಾಗಿ ಒಂದು ರೀತಿಯ ಶುಭ ದಿನವೇ ಸರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸುವಿರಿ. ಅತಿಥಿಗಳ ಆಗಮನವಾಗಲಿದೆ.

ಕುಂಭ: ಉದ್ಯೋಗಿಗಳಿಗೆ ವೇತನ ಸಮಸ್ಯೆ ಕಾಡಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉದಾಸೀನ ಪ್ರವೃತ್ತಿ ಪೋಷಕರನ್ನು ಚಿಂತೆಗೀಡುಮಾಡಲಿದೆ. ಧಾರ್ಮಿಕ ಕಾರ್ಯಗಳಿಗೆ ಧನ ವಿನಿಯೋಗ ಮಾಡಬೇಕಾಗುತ್ತದೆ.

ಮೀನ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಆದರೆ ಬೇಡದ ಚಿಂತೆಗಳಿಂದ ಮನಸ್ಸಿಗೆ ಬೇಸರ ಮಾಡಿಕೊಳ್ಳುವಿರಿ. ಅನಗತ್ಯ ಮಾತುಗಳಿಂದ ದೂರವಿರಿ. ವ್ಯಾಪಾರಿಗಳಿಗೆ ನಿವ್ವಳ ಲಾಭ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ             

Share this Story:

Follow Webdunia kannada

ಮುಂದಿನ ಸುದ್ದಿ

ಈ ರಾಶಿಯವರು ಈ ರತ್ನ ಧರಿಸಿದರೆ ತಲೆನೋವು, ಮೂಳೆಗಳ ಸಮಸ್ಯೆಗಳನ್ನು ಎದುರಿಸುತ್ತಾರಂತೆ