ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 2 ಏಪ್ರಿಲ್ 2019 (05:29 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ:  ಅಧಿಕಾರಿ ವರ್ಗದವರು ಕಾರ್ಯದೊತ್ತಡದಲ್ಲಿರುವರು. ರಾಜಕೀಯ ಕ್ಷೇತ್ರದಲ್ಲಿರುವವರ ಸ್ಥಾನ ಮಾನ ಹೆಚ್ಚಲಿದೆ. ಆರೋಗ್ಯ ಭಾಗ್ಯ ಸುಧಾರಿಸುವುದು. ಆದಾಯಕ್ಕೆ ಏನೂ ಕೊರತೆಯಾಗದು. ಆದರೆ ಬಾಕಿ ಹಣ ಪಾವತಿ ಕೆಲಸಗಳು ಚಿಂತೆಗೀಡುಮಾಡಲಿವೆ.

ವೃಷಭ: ಆರ್ಥಿಕವಾಗಿ ಸಾಕಷ್ಟು ಲಾಭ ಗಳಿಸುವಿರಿ. ಇದರಿಂದ ಅಂದುಕೊಂಡ ಕಾರ್ಯಗಳನ್ನು ನೆರವೇರಿಸುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಓಡಾಟ ನಡೆಸುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಿಥುನ: ನಿರ್ಧಾರ ಕೈಗೊಳ್ಳುವಾಗ ಮಾನಸಿಕ ಧ್ವಂದ್ವಗಳು ಕಾಡಲಿವೆ. ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ವಾಹನ ಚಲಾಯಿಸುವಾಗ ಅಪಘಾತವಾಗದಂತೆ ಎಚ್ಚರವಹಿಸಿ. ನೆಮ್ಮದಿಗಾಗಿ ದೇವತಾ ಪ್ರಾರ್ಥನೆ ಮಾಡುವುದು ಮುಖ್ಯ.

ಕರ್ಕಟಕ: ಪಾಲು ಬಂಡವಾಳ ವ್ಯವಹಾರದಲ್ಲಿ ಹೆಚ್ಚಿನ ಲಾಭ ಗಳಿಸುವಿರಿ. ಉದ್ಯೋಗ ಕ್ಷೇತ್ರದಲ್ಲೂ ಮುನ್ನಡೆ ಸಾಧಿಸುವಿರಿ. ನೀವು ಅಂದುಕೊಂಡ ಕಾರ್ಯಗಳಿಗೆ ದೈವಾನುಗ್ರಹವಿದ್ದು, ನೆರವೇರುವುದು. ಆದರೆ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಸಿಂಹ: ಆಕಸ್ಮಿಕವಾಗಿ ಸಿಗುವ ಮಿತ್ರನಿಂದ ಬಹುದಿನಗಳ ಸಮಸ್ಯೆಗೆ ಪರಿಹಾರ ಸಿಗಲಿದೆ. ಆಸ್ತಿ ವಿವಾದಗಳ ಬಗ್ಗೆ ಕೋರ್ಟ್ ಮೆಟ್ಟಿಲೇರಿದರೆ ಜಯ ಸಿಗದು. ಹಾಗಾಗಿ ಹಿರಿಯ ಮಧ್ಯಸ್ಥಿಕೆ ಮಾಡುವುದು ಒಳ್ಳೆಯದು. ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ ಯೋಗವಿದೆ.

ಕನ್ಯಾ: ಕುಟುಂಬದಲ್ಲಿ ಯಾವುದೋ ವಿಚಾರಕ್ಕೆ ಭಿನ್ನಾಭಿಪ್ರಾಯ ಮೂಡಿ ಮನಸ್ಸಿಗೆ ಬೇಸರ ಮಾಡಿಕೊಳ್ಳುವಿರಿ. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಉದ್ಯೋಗ ಬದಲಾವಣೆಗೆ ಚಿಂತನೆ ಮಾಡುವಿರಿ. ಸ್ತ್ರೀಯರಿಂದ ಒಳ್ಳೆಯದಾಗುವುದು.

ತುಲಾ: ಶುಭ ಮಂಗಲ ಕಾರ್ಯಗಳಿಗೆ ಹೆಚ್ಚಿನ ಓಡಾಟ ನಡೆಸಬೇಕಾಗುತ್ತದೆ. ಆದಾಯವಿದ್ದಷ್ಟೇ ಖರ್ಚೂ ಹೆಚ್ಚುವುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವ ಸಾಧ‍್ಯತೆಯಿದೆ. ಅನಿರೀಕ್ಷಿತವಾಗಿ ಬರುವ ಅತಿಥಿಗಳಿಂದ ಸಂತಸವಾಗುವುದು.

ವೃಶ್ಚಿಕ: ಕುಟುಂಬದಲ್ಲಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಹಿರಿಯರ ಆರೋಗ್ಯದ ಸಂಬಂಧ ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಆರ್ಥಿಕ ಪರಿಸ್ಥಿತಿಯು ಸುಧಾರಿಸುವುದು.

ಧನು: ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ಹೊಸ ವಸ್ತ್ರಾಭರಣ ಖರೀದಿ ಯೋಗವಿದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಆರೋಗ್ಯ ಸುಧಾರಿಸುವುದು.

ಮಕರ: ಮನೆಯಲ್ಲಿ ನೆಮ್ಮದಿಯ ವಾತಾವರಣವಿರುವುದು. ಸಂಗಾತಿಯೊಂದಿಗೆ ಸುಂದರ ಸಮಯ ಕಳೆಯುವಿರಿ. ಕಿರು ಪ್ರವಾಸವನ್ನೂ ಮಾಡುವಿರಿ. ಕೈಗೊಂಡ ಕಾರ್ಯದಲ್ಲಿ ಜಯ ಸಿಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.

ಕುಂಭ: ಖರ್ಚು ವೆಚ್ಚಗಳು ಅಧಿಕವಾಗುವುದು. ನಿಮಗೆ ಸಂಬಂಧಪಡದ ವಿಚಾರಗಳಲ್ಲಿ ಮೂಗು ತೂರಿಸಿ ವಿನಾಕಾರಣ ಅಪವಾದಕ್ಕೀಡಾಗುವಿರಿ. ವೃತ್ತಿ ರಂಗದಲ್ಲಿ ಅಧಿಕಾರಿಗಳ ಪ್ರಶಂಸೆಗೊಳಗಾಗುವಿರಿ.

ಮೀನ: ಮನೋಕಾಮನೆ ಪೂರೈಕೆಗಾಗಿ ಕುಲದೇವರ ಪ್ರಾರ್ಥನೆ ಮಾಡಬೇಕಾಗುತ್ತದೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಮಹಿಳೆಯರಲ್ಲಿ ಕೆಲಸದ ಬಗ್ಗೆ ಉದಾಸೀನ ಪ್ರವೃತ್ತಿ ಕಂಡುಬರಲಿದೆ. ಮಕ್ಕಳಿಂದ ಸಂತಸ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

2026 ರಲ್ಲಿ ದ್ವಾದಶ ರಾಶಿಯವರಿಗೆ ಹಣಕಾಸಿನ ತೊಂದರೆ ಬರುತ್ತಾ, ಇಲ್ಲಿದೆ ವಿವರ

ಶುಕ್ರವಾರ ಓದಬೇಕಾದ ಲಕ್ಷ್ಮೀ ಮಂತ್ರ

ಮುಂದಿನ ಸುದ್ದಿ
Show comments