Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 9 ಏಪ್ರಿಲ್ 2019 (09:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಮನೆಯಲ್ಲಿ ಶುಭಮಂಗಲ ಕಾರ್ಯಗಳು ನೆರವೇರುವುದು. ಆದರೆ ಆರೋಗ್ಯ ಕೈಕೊಡುವುದು. ಆರ್ಥಿಕವಾಗಿ ಸಾಲ ಕೊಂಡು ಹೋದವರಿಂದ ಹಣ ಪಡೆಯುವ ಬಗ್ಗೆ ಚಿಂತೆಯಾಗಲಿದೆ.

ವೃಷಭ: ಪತಿ-ಪತ್ನಿಯರಲ್ಲಿ ಕಲಹ ಸಂಭವವಿದೆ. ಮಾನಸಿಕ ನೆಮ್ಮದಿಗೆ ಭಂಗವಾಗುವುದು. ಆದರೆ ಆದಾಯಕ್ಕೆ ಯಾವುದೇ ಕೊರತೆಯಿಲ್ಲ. ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ, ಮುನ್ನಡೆ ಸಾಧ್ಯತೆಯಿದೆ. ನೆನೆಗುದಿಗೆ ಬಿದ್ದಿದ್ದ ಕಾರ್ಯಗಳಿಗೆ ಚಾಲನೆ ದೊರೆಯಲಿದೆ.

ಮಿಥುನ: ಕಾರ್ಯದೊತ್ತಡಗಳು ಅಧಿಕವಾಗಲಿದ್ದು, ನಿರೀಕ್ಷಿತ ಜಯ ಸಿಗದೇ ನಿರಾಶೆಯಾಗುವುದು. ಹಿತ ಶತ್ರುಗಳಿಂದ ವಂಚನೆಯ ಭೀತಿಯಿದೆ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ.

ಕರ್ಕಟಕ: ಹಠವಾದಿ ಮಕ್ಕಳು ಮಾತು ಕೇಳದೇ ಚಿಂತೆಯಾಗುವುದು. ಸನ್ಮಿತ್ರರ ಸಹಕಾರದಿಂದ ಕಷ್ಟಗಳು ದೂರವಾಗುವುದು. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ನಿರುದ್ಯೋಗಿಗಳಿಗೆ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ.

ಸಿಂಹ: ಸಾಮಾಜಿಕ ಕೆಲಸಗಳಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದು. ಜನರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಆರ್ಥಿಕವಾಗಿಯೂ ಚೇತರಿಕೆ ಕಾಣುವಿರಿ. ಪ್ರತಿಭೆಗೆ ತಕ್ಕ ಫಲ ದೊರೆಯುವುದು. ಹಾಗಿದ್ದರೂ ಯಾವುದೋ ಮಾನಸಿಕ ಕೊರಗು ಕಾಡಲಿದೆ.

ಕನ್ಯಾ: ಉದ್ದೇಶಿತ ಕೆಲಸಗಳು ನಿಧಾನವಾಗಿ ಸಾಗಿದರೂ, ನೀವಂದುಕೊಂಡಂತೆ ನಡೆದು ಮನಸ್ಸಿಗೆ ನೆಮ್ಮದಿಯಾಗುವುದು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪ್ರಗತಿ ಕಂಡು ಸಹೋದ್ಯೋಗಿಗಳೂ ಅಸೂಯೆ ಪಡುವರು.

ತುಲಾ: ಆರ್ಥಿಕವಾಗಿ ಆರಂಭದಲ್ಲಿ ಕೊಂಚ ಮುಗ್ಗಟ್ಟು ಎದುರಿಸಬೇಕಾದೀತು. ಆದರೆ ಸಕಾಲದಲ್ಲಿ ಹಣ ಪಾವತಿಯಾಗಿ ಕೆಲಸಗಳು ಸುಗಮವಾಗಿ ನಡೆಯುವುದು. ಒಂದು ರೀತಿಯ ಮಿಶ್ರಫಲ ನೀವು ಅನುಭವಿಸಬೇಕಾಗುತ್ತದೆ. ಎಚ್ಚರವಾಗಿರಿ.

ವೃಶ್ಚಿಕ: ಹಂತ ಹಂತವಾಗಿ ಅಭಿವೃದ್ಧಿ ಕಾಣುವಿರಿ. ಇದರಿಂದ ನೆಮ್ಮದಿಯ ವಾತಾವರಣವಿರಲಿದೆ. ಕುಟುಂಬದವರು, ಮಿತ್ರರೊಂದಿಗೆ ಸಂತಸದ ಸಮಯ ಕಳೆಯುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆದರೆ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಧನು: ಯಾವುದೇ ಕೆಲಸವಾಗಿದ್ದರೂ ಪರಿಶ್ರಮ ಅಗತ್ಯವಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆತೀತು. ಹಾಗಿದ್ದರೂ ದುಡುಕಿನ ವರ್ತನೆ ತೋರಿದರೆ ಅಪವಾದ ತಪ್ಪದು. ತಾಳ್ಮೆ ಅಗತ್ಯ.

ಮಕರ: ವಿವಾಹಾಪೇಕ್ಷಿಗಳಿಗೆ ಶುಭ ದಿನ. ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬರಲಿದೆ. ಪ್ರೇಮಿಗಳಿಗೂ ಮನೆಯವರ ಒಪ್ಪಿಗೆ ಸಿಗಲಿದೆ. ಕೌಟುಂಬಿಕವಾಗಿ ಶುಭ ದಿನ. ಉದ್ಯೋಗ ಕ್ಷೇತ್ರದಲ್ಲಿ ಕೆಲವೊಂದು ಅಡೆತಡೆಗಳು ಎದುರಾದೀತು, ಹಾಗಿದ್ದರೂ ಚಿಂತೆ ಬೇಡ.

ಕುಂಭ: ಅನವಶ್ಯಕ ಆತಂಕ ಚಿಂತೆ ಮಾಡುವಿರಿ. ನಿರುದ್ಯೋಗಿಗಳು ಉದ್ಯೋಗಾವಕಾಶ ನಿಮಿತ್ತ ದೂರ ಸಂಚಾರ ಮಾಡುವರು. ದಾಯಾದಿಗಳೊಂದಿಗೆ ಕಿರಿ ಕಿರಿ ಆಗಬಹುದು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸುವುದು ಸೂಕ್ತ.

ಮೀನ: ಇಂದು ಆರಂಭಿಸುವ ಕೆಲಸದಲ್ಲಿ ಜಯ ಪಡೆಯುವಿರಿ. ಅವಿವಾಹಿತರಿಗೆ ಕಂಕಣ ಕೂಡಿಬರಲಿದೆ. ಆರ್ಥಿಕವಾಗಿಯೂ ಚೇತರಿಕೆ ಕಾಣುವಿರಿ. ಕುಲದೇವರಿಗೆ ಸಂಬಂಧಪಟ್ಟ ಧಾರ್ಮಿಕ ಕೆಲಸಗಳಲ್ಲಿ ಭಾಗಿಯಾಗುವಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಸತಿಪತಿ ಇಬ್ಬರು ಜೊತೆಯಾಗಿ ಈ ದೇವಸ್ಥಾನಕ್ಕೆ ಹೋಗಬಾರದಂತೆ