Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 10 ಏಪ್ರಿಲ್ 2019 (07:09 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಯಾವುದೇ ಕೆಲಸಕ್ಕೆ ಮೊದಲು ಹಿರಿಯರ ಅಭಿಪ್ರಾಯ ಪಡೆದು ಮುಂದುವರಿಯುವುದು ಒಳ್ಳೆಯದು. ವಿದ್ಯಾರ್ಥಿಗಳಲ್ಲಿ ಹೊಸ ವಿಷಯ ಕಲಿಯುವ ಆಸಕ್ತಿ ಕಂಡುಬರುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು.

ವೃಷಭ: ಪತ್ನಿಯ ಅಲಂಕಾರಿಕ ವಸ್ತುಗಳಿಗೆ ಹೆಚ್ಚಿನ ಧನವ್ಯಯವಾದೀತು. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ ಕಂಡುಬರುತ್ತದೆ. ಕೌಟುಂಬಿಕವಾಗಿ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳು ಹಂತ ಹಂತವಾಗಿ ದೂರವಾಗಿ ನೆಮ್ಮದಿ ಮೂಡುವುದು.

ಮಿಥುನ: ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಮನೆಯಲ್ಲಿ ಸಂತಸದ ವಾತಾವರಣವಿರಲಿದೆ. ಇದರ ಜತೆಗೆ ಖರ್ಚು ವೆಚ್ಚಗಳೂ ಹೆಚ್ಚಾಗಲಿವೆ. ಆಸ್ತಿ ವ್ಯವಹಾರದಲ್ಲಿ ದಾಯಾದಿಗಳು ಅಡ್ಡಗಾಲು ಹಾಕಲಿದ್ದಾರೆ. ಎಚ್ಚರಿಕೆಯಿರಲಿ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರುಕುಳ ಉಂಟಾಗಲಿದೆ. ಹಾಗಿದ್ದರೂ ನಿಮ್ಮ ಮುನ್ನಡೆಗೆ ಯಾರೂ ಅಡ್ಡಿ ಮಾಡಲಾಗದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಲಿದೆ. ಓಡಾಟಗಳಿಂದ ದೇಹಾರೋಗ್ಯ ಕ್ಷೀಣಿಸಬಹುದು.

ಸಿಂಹ: ಕಠಿಣ ಪರಿಶ್ರಮದಿಂದ ಜೀವನದಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಅನಿರೀಕ್ಷಿತವಾಗಿ ಕೆಲವೊಂದು ಜವಾಬ್ಧಾರಿಗಳು ಹೆಗಲಿಗೇರಲಿವೆ. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ನಡೆಸಬೇಕಾಗುತ್ತದೆ. ಸಂಚಾರದಲ್ಲಿ ಜಾಗ್ರತೆ ಇರಲಿ.

ಕನ್ಯಾ: ಮನಸ್ಸಿಗೆ ಹೇಗೆ ತೋಚುತ್ತದೋ ಹಾಗೇ ಕೆಲಸ ಕಾರ್ಯಗಳನ್ನು ನಡೆಸುತ್ತಾ ಹೋಗುವಿರಿ. ವ್ಯಾಪಾರ, ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ಮನಸ್ಸು ಚಂಚಲಗೊಳ್ಳದಂತೆ ನೋಡಿಕೊಳ್ಳಿ.

ತುಲಾ: ಕಾರ್ಮಿಕ ವರ್ಗದವರಿಗೆ ಕಷ್ಟ ನಷ್ಟಗಳು ಎದುರಾಗಬಹುದು. ವಾಹನ ಚಾಲನೆ ವೃತ್ತಿಯಲ್ಲಿರುವವರಿಗೆ ಅಪಘಾತದ ಭಯವಿದೆ. ಬೇಡದ ಮಾತುಗಳಿಗೆ ಕಿವಿಗೊಡಬೇಡಿ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಶ್ಚಿಕ: ಉದ್ದೇಶಿತ ಕಾರ್ಯಗಳು ನೆರವೇರಬೇಕಾದರೆ ದೃಢ ಸಂಕಲ್ಪ ಬೇಕು. ಆರ್ಥಿಕವಾಗಿ ತುಸು ಚೇತರಿಕೆ ಕಂಡುಬರುವುದರಿಂದ ನೆಮ್ಮದಿ ಮೂಡುವುದು. ಹೊಸ ವಸ್ತುಗಳ ಖರೀದಿಗೆ ಚಿಂತನೆ ನಡೆಸುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಹಿತಶತ್ರುಗಳ ವಕ್ರ ದೃಷ್ಟಿ ನಿಮ್ಮ ಮೇಲಿರಲಿದೆ. ವಿದ್ಯಾರ್ಥಿಗಳಿಗೆ ಫಲಿತಾಂಶದಲ್ಲಿ ಕೊಂಚ ನಿರಾಶೆಯಾದೀತು. ಪೋಷಕರ ಚಿಂತೆಗೆ ಕಾರಣರಾಗುವಿರಿ. ಆರ್ಥಿಕ ಸ್ಥಿತಿ ಗತಿ ಉತ್ತಮವಾಗಿರಲಿದೆ. ಆದರೆ ನಿಮ್ಮ ಹಣ ಪೋಲು ಮಾಡದಂತೆ ಎಚ್ಚರಿಕೆ ವಹಿಸುವುದು ಮುಖ್ಯ.

ಮಕರ: ಮನೆಯಲ್ಲಿ ಶುಭ ಕಾರ್ಯಗಳು ನೆರವೇರುವುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಸಾಂಸಾರಿಕವಾಗಿ ಶುಭ ವಾರ್ತೆಯೊಂದನ್ನು ಕೇಳುವಿರಿ. ದೈವಾನುಗ್ರಹದಿಂದ ಉದ್ಯೋಗ ಕ್ಷೇತ್ರದಲ್ಲೂ ಮುನ್ನಡೆ ಸಾಧಿಸುವಿರಿ.

ಕುಂಭ: ದುಡುಕಿನ ವರ್ತನೆಯಿಂದ ಉದ್ದೇಶಿತ ಕಾರ್ಯ ಹಾಳುಮಾಡಿಕೊಳ್ಳಬೇಡಿ. ಬಂಧುಗಳಿಂದ ಕಿರಿ ಕಿರಿ ಇರಬಹುದು. ಎಲ್ಲದಕ್ಕೂ ತಾಳ್ಮೆಯೇ ಉತ್ತರವಾಗಬೇಕು. ಎಷ್ಟೋ ದಿನದಿಂದ ಬಾಕಿಯಿದ್ದ ಹರಕೆ ತೀರಿಸುವಿರಿ.

ಮೀನ: ಕೋರ್ಟು ಕಚೇರಿ ವ್ಯವಹಾರಗಳಿಗೆ ಅಲೆದಾಡಬೇಕಾಗುತ್ತದೆ. ಹೆಚ್ಚಿನ ಹಣ ವ್ಯಯ ಮಾಡಬೇಕಾಗುತ್ತದೆ. ಅವಿವಾಹಿತರಿಗೆ ಸಾಕಷ್ಟು ವಿವಾಹ ಪ್ರಸ್ತಾಪಗಳು ಬರುವುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ದೆಶೆ ತಿರುಗಿಬಿದ್ದರೆ ಎಂಥಾ ಕೆಟ್ಟ ಪರಿಣಾಮವಾಗುತ್ತದೆ ನೋಡಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments