ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
									
										
								
																	
 
ಮೇಷ: ವಿಪರೀತ ಧನವ್ಯಯವಾಗಲಿದ್ದು, ಆದಾಯವೂ ಕಡಿಮೆಯಾಗಿ ನಿಮ್ಮ ಚಿಂತೆಗೆ ಕಾರಣವಾಗಲಿದೆ. ಬಾಕಿ ಹಣ ವಸೂಲಾತಿಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಕಿರಿ ಕಿರಿ. ಆದರೆ ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ.
									
			
			 
 			
 
 			
					
			        							
								
																	ವೃಷಭ: ಕಲೆ, ಸಾಹಿತ್ಯ, ಸಾಮಾಜಿಕ ಕ್ಷೇತ್ರದಲ್ಲಿರುವವರಿಗೆ ಸ್ಥಾನ ಮಾನಗಳು ವೃದ್ಧಿಯಾಗಿ ಮನ್ನಣೆ ಸಿಗಲಿದೆ. ಸಾಂಸಾರಿಕವಾಗಿ ದಾಯಾದಿಗಳಿಂದ ಕಿರಿ ಕಿರಿ ಇರಲಿದೆ. ಅವಿವಾಹಿತರು ಸ್ವಲ್ಪ ದಿನ ಕಾಯಬೇಕಾಗುತ್ತದೆ.
									
										
								
																	ಮಿಥುನ: ಕಾರ್ಯ ನಿಮಿತ್ತ ದೂರ ಸಂಚಾರ ಮಾಡಿದರೆ ಹಲವು ವಿಘ್ನಗಳು ಎದುರಾಗಲಿವೆ. ಆರ್ಥಿಕವಾಗಿ ಕೊಂಚ ಮುಗ್ಗಟ್ಟು ಎದುರಿಸಬೇಕಾಗುತ್ತದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಪಡೆಯುವರು. ದಿನದಂತ್ಯಕ್ಕೆ ಶುಭ ಸುದ್ದಿ.
									
											
									
			        							
								
																	ಕರ್ಕಟಕ: ಸಕಾಲದಲ್ಲಿ ಧನಾಗಮನವಾಗಿ ಉದ್ದೇಶಿತ ಕಾರ್ಯಗಳು ಸಫಲವಾಗುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ವಿದೇಶ ಪ್ರಯಾಣ ಮಾಡುವ ಯೋಗವಿದೆ. ವಿವಾಹಾಪೇಕ್ಷಿಗಳಿಗೆ ಪ್ರಯತ್ನಕ್ಕೆ ಫಲ ದೊರೆಯಲಿದೆ.
									
					
			        							
								
																	ಸಿಂಹ: ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ವ್ಯವಹಾರದಲ್ಲಿ ಸಮಸ್ಥಿತಿ ಇರಲಿದೆ. ಬಂಧು ಮಿತ್ರರಿಂದ ಸಹಕಾರ ಸಿಗಲಿದ್ದು, ನೆಮ್ಮದಿ ಮೂಡುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರುವುದು.
									
					
			        							
								
																	ಕನ್ಯಾ: ಸಾಂಸಾರಿಕ ಜೀವನದಲ್ಲಿ ಸಂಗಾತಿ, ಮಕ್ಕಳಿಂದ ಸಹಕಾರ ಸಿಕ್ಕಿ ನೆಮ್ಮದಿ ಸಿಗಲಿದೆ. ಕುಲದೇವರ ಪ್ರಾರ್ಥನೆಯಿಂದ ಮತ್ತಷ್ಟು ಯಶಸ್ಸು, ನೆಮ್ಮದಿ ಸಿಗಲಿದೆ. ಹಿರಿಯರ ಆರೋಗ್ಯ ನಿಮಿತ್ತ ಆಸ್ಪತ್ರೆಗೆ ಅಲೆದಾಡಬೇಕಾದೀತು.
									
					
			        							
								
																	ತುಲಾ: ದುಡುಕುತನ ಒಳ್ಳೆಯದಲ್ಲ. ವ್ಯಾಪಾರ, ವ್ಯವಹಾರಗಳಲ್ಲಿ ತೀವ್ರ ಸ್ಪರ್ಧೆ ಕಂಡುಬರುವುದು. ಹಿತ ಶತ್ರುಗಳನ್ನು ಜಾಣ್ಮೆಯಿಂದ ನಿಭಾಯಿಸುವುದು ಒಳ್ಳೆಯದು. ವಿದ್ಯಾರ್ಥಿಗಳು ನಿರೀಕ್ಷೆಗೆ ತಕ್ಕ ಫಲ ಪಡೆಯುವರು.
									
			                     
							
							
			        							
								
																	ವೃಶ್ಚಿಕ: ಹಣಕಾಸಿನ ಸಮಸ್ಯೆಗಳು ನಿಮ್ಮನ್ನು ಹೈರಾಣಾಗಿಸಲಿದೆ. ಇದರಿಂದ ಕಾರ್ಯ ಹಾನಿ. ಆದರೆ ಸಕಾಲದಲ್ಲಿ ಮಿತ್ರರ ನೆರವು ಸಿಗಲಿದೆ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಕುಟುಂಬದಲ್ಲಿ ಕೆಲವೊಂದು ಜವಾಬ್ಧಾರಿಗಳನ್ನು ನಿಭಾಯಿಸಬೇಕಾಗುತ್ತದೆ.
									
			                     
							
							
			        							
								
																	ಧನು: ಬಂಧು ಮಿತ್ರರ ಆಗಮನದಿಂದ ಖರ್ಚುಗಳು ಅಧಿಕವಾದರೂ ಸಂತೋಷಕ್ಕೆ ಕೊನೆಯಿರದು. ಆದರೆ ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ, ವಿನಾಕಾರಣ ಅಪವಾದಕ್ಕೆ ಗುರಿಯಾಗುವಿರಿ. ಹೊಸ ವ್ಯವಹಾರಗಳಿಗೆ ಬಂಡವಾಳ ಹೂಡುವಾಗ ಎಚ್ಚರಿಕೆ.
									
			                     
							
							
			        							
								
																	ಮಕರ: ನಿರುದ್ಯೋಗಿಗಳಿಗೆ ಯಾವುದೋ ರೂಪದಲ್ಲಿ ಸಹಾಯ ಸಿಗಲಿದೆ. ವೈಯಕ್ತಿಕವಾಗಿ ಆರೋಗ್ಯ ಹದಗೆಡುವುದು, ಆದರೆ ಸಂಗಾತಿಯ ಸಹಕಾರ ಸಿಗುವುದು. ಮಕ್ಕಳು ಸಂತೋಷಕ್ಕೆ ಕಾರಣರಾಗುವರು. ನೂತನ ದಂಪತಿಗಳು ಸುಂದರ ಕ್ಷಣ ಕಳೆಯುವರು.
									
			                     
							
							
			        							
								
																	ಕುಂಭ: ಜೀವನದಲ್ಲಿ ಬರುವ ಅಪರಿಚಿತ ವ್ಯಕ್ತಿಯಿಂದ ಹೊಸ ತಿರುವು ಸಿಗಲಿದೆ. ಅನವಶ್ಯಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ. ಕೋರ್ಟು, ಕಚೇರಿ ವ್ಯವಹಾರಗಳಲ್ಲಿ ಜಯ ಸಿಗುವುದು. ಹಿರಿಯರ ಸಲಹೆಗಳಿಗೆ ಮನ್ನಣೆ ಕೊಡಿ.
									
			                     
							
							
			        							
								
																	ಮೀನ: ಸಂಗಾತಿಯ ಸಲಹೆಗಳನ್ನು ಉಪೇಕ್ಷಿಸದಿರಿ. ನೀವು ಇಂದು ಕ್ರಿಯಾಶೀಲರಾಗಿರುತ್ತೀರಿ. ಆದರೆ ಕಾರ್ಯದೊತ್ತಡದಿಂದ ದೇಹ ಹೈರಾಣಾಗುವುದು. ಹಾಗಿದ್ದರೂ ಕುಟುಂಬದ ನೆಮ್ಮದಿಯಲ್ಲಿ ನಿಮ್ಮ ನೆಮ್ಮದಿ ಕಾಣುವಿರಿ.
									
			                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ