Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 11 ಏಪ್ರಿಲ್ 2019 (07:33 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ವಿಪರೀತ ಧನವ್ಯಯವಾಗಲಿದ್ದು, ಆದಾಯವೂ ಕಡಿಮೆಯಾಗಿ ನಿಮ್ಮ ಚಿಂತೆಗೆ ಕಾರಣವಾಗಲಿದೆ. ಬಾಕಿ ಹಣ ವಸೂಲಾತಿಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಕಿರಿ ಕಿರಿ. ಆದರೆ ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ.

ವೃಷಭ: ಕಲೆ, ಸಾಹಿತ್ಯ, ಸಾಮಾಜಿಕ ಕ್ಷೇತ್ರದಲ್ಲಿರುವವರಿಗೆ ಸ್ಥಾನ ಮಾನಗಳು ವೃದ್ಧಿಯಾಗಿ ಮನ್ನಣೆ ಸಿಗಲಿದೆ. ಸಾಂಸಾರಿಕವಾಗಿ ದಾಯಾದಿಗಳಿಂದ ಕಿರಿ ಕಿರಿ ಇರಲಿದೆ. ಅವಿವಾಹಿತರು ಸ್ವಲ್ಪ ದಿನ ಕಾಯಬೇಕಾಗುತ್ತದೆ.

ಮಿಥುನ: ಕಾರ್ಯ ನಿಮಿತ್ತ ದೂರ ಸಂಚಾರ ಮಾಡಿದರೆ ಹಲವು ವಿಘ‍್ನಗಳು ಎದುರಾಗಲಿವೆ. ಆರ್ಥಿಕವಾಗಿ ಕೊಂಚ ಮುಗ್ಗಟ್ಟು ಎದುರಿಸಬೇಕಾಗುತ್ತದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಪಡೆಯುವರು. ದಿನದಂತ್ಯಕ್ಕೆ ಶುಭ ಸುದ್ದಿ.

ಕರ್ಕಟಕ: ಸಕಾಲದಲ್ಲಿ ಧನಾಗಮನವಾಗಿ ಉದ್ದೇಶಿತ ಕಾರ್ಯಗಳು ಸಫಲವಾಗುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ಮಾಡಲು ವಿದೇಶ ಪ್ರಯಾಣ ಮಾಡುವ ಯೋಗವಿದೆ. ವಿವಾಹಾಪೇಕ್ಷಿಗಳಿಗೆ ಪ್ರಯತ್ನಕ್ಕೆ ಫಲ ದೊರೆಯಲಿದೆ.

ಸಿಂಹ: ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ವ್ಯವಹಾರದಲ್ಲಿ ಸಮಸ್ಥಿತಿ ಇರಲಿದೆ. ಬಂಧು ಮಿತ್ರರಿಂದ ಸಹಕಾರ ಸಿಗಲಿದ್ದು, ನೆಮ್ಮದಿ ಮೂಡುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರುವುದು.

ಕನ್ಯಾ: ಸಾಂಸಾರಿಕ ಜೀವನದಲ್ಲಿ ಸಂಗಾತಿ, ಮಕ್ಕಳಿಂದ ಸಹಕಾರ ಸಿಕ್ಕಿ ನೆಮ್ಮದಿ ಸಿಗಲಿದೆ. ಕುಲದೇವರ ಪ್ರಾರ್ಥನೆಯಿಂದ ಮತ್ತಷ್ಟು ಯಶಸ್ಸು, ನೆಮ್ಮದಿ ಸಿಗಲಿದೆ. ಹಿರಿಯರ ಆರೋಗ್ಯ ನಿಮಿತ್ತ ಆಸ್ಪತ್ರೆಗೆ ಅಲೆದಾಡಬೇಕಾದೀತು.

ತುಲಾ: ದುಡುಕುತನ ಒಳ್ಳೆಯದಲ್ಲ. ವ್ಯಾಪಾರ, ವ್ಯವಹಾರಗಳಲ್ಲಿ ತೀವ್ರ ಸ್ಪರ್ಧೆ ಕಂಡುಬರುವುದು. ಹಿತ ಶತ್ರುಗಳನ್ನು ಜಾಣ್ಮೆಯಿಂದ ನಿಭಾಯಿಸುವುದು ಒಳ್ಳೆಯದು. ವಿದ್ಯಾರ್ಥಿಗಳು ನಿರೀಕ್ಷೆಗೆ ತಕ್ಕ ಫಲ ಪಡೆಯುವರು.

ವೃಶ್ಚಿಕ: ಹಣಕಾಸಿನ ಸಮಸ್ಯೆಗಳು ನಿಮ್ಮನ್ನು ಹೈರಾಣಾಗಿಸಲಿದೆ. ಇದರಿಂದ ಕಾರ್ಯ ಹಾನಿ. ಆದರೆ ಸಕಾಲದಲ್ಲಿ ಮಿತ್ರರ ನೆರವು ಸಿಗಲಿದೆ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಕುಟುಂಬದಲ್ಲಿ ಕೆಲವೊಂದು ಜವಾಬ್ಧಾರಿಗಳನ್ನು ನಿಭಾಯಿಸಬೇಕಾಗುತ್ತದೆ.

ಧನು: ಬಂಧು ಮಿತ್ರರ ಆಗಮನದಿಂದ ಖರ್ಚುಗಳು ಅಧಿಕವಾದರೂ ಸಂತೋಷಕ್ಕೆ ಕೊನೆಯಿರದು. ಆದರೆ ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ, ವಿನಾಕಾರಣ ಅಪವಾದಕ್ಕೆ ಗುರಿಯಾಗುವಿರಿ. ಹೊಸ ವ್ಯವಹಾರಗಳಿಗೆ ಬಂಡವಾಳ ಹೂಡುವಾಗ ಎಚ್ಚರಿಕೆ.

ಮಕರ: ನಿರುದ್ಯೋಗಿಗಳಿಗೆ ಯಾವುದೋ ರೂಪದಲ್ಲಿ ಸಹಾಯ ಸಿಗಲಿದೆ. ವೈಯಕ್ತಿಕವಾಗಿ ಆರೋಗ್ಯ ಹದಗೆಡುವುದು, ಆದರೆ ಸಂಗಾತಿಯ ಸಹಕಾರ ಸಿಗುವುದು. ಮಕ್ಕಳು ಸಂತೋಷಕ್ಕೆ ಕಾರಣರಾಗುವರು. ನೂತನ ದಂಪತಿಗಳು ಸುಂದರ ಕ್ಷಣ ಕಳೆಯುವರು.

ಕುಂಭ: ಜೀವನದಲ್ಲಿ ಬರುವ ಅಪರಿಚಿತ ವ್ಯಕ್ತಿಯಿಂದ ಹೊಸ ತಿರುವು ಸಿಗಲಿದೆ. ಅನವಶ್ಯಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ. ಕೋರ್ಟು, ಕಚೇರಿ ವ್ಯವಹಾರಗಳಲ್ಲಿ ಜಯ ಸಿಗುವುದು. ಹಿರಿಯರ ಸಲಹೆಗಳಿಗೆ ಮನ್ನಣೆ ಕೊಡಿ.

ಮೀನ: ಸಂಗಾತಿಯ ಸಲಹೆಗಳನ್ನು ಉಪೇಕ್ಷಿಸದಿರಿ. ನೀವು ಇಂದು ಕ್ರಿಯಾಶೀಲರಾಗಿರುತ್ತೀರಿ. ಆದರೆ ಕಾರ್ಯದೊತ್ತಡದಿಂದ ದೇಹ ಹೈರಾಣಾಗುವುದು. ಹಾಗಿದ್ದರೂ ಕುಟುಂಬದ ನೆಮ್ಮದಿಯಲ್ಲಿ ನಿಮ್ಮ ನೆಮ್ಮದಿ ಕಾಣುವಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments