Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 25 ಏಪ್ರಿಲ್ 2019 (06:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಸ್ನೇಹಿತರ ಮಾತಿಗೆ ಕಿವಿಗೊಡಬೇಕಾಗುತ್ತದೆ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ಆರ್ಥಿಕವಾಗಿ ಸಮಾಧಾನಕರ ದಿನ. ಹಾಗಿದ್ದರೂ ಕಾರ್ಯಾರಂಭಕ್ಕೆ ಕೆಲವೊಂದು ಅಡೆತಡೆಗಳು ತೋರಿಬಂದೀತು.

ವೃಷಭ: ಅನಿರೀಕ್ಷಿತವಾಗಿ ಬರುವ ಬಂಧು ಮಿತ್ರರಿಂದ ಸಂತಸದ ಸುದ್ದಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ತಲೆದೋರುವುದು.

ಮಿಥುನ: ದುರ್ಜನರ ಸಂಗ ನಿಮ್ಮ ಕಾರ್ಯಕ್ಕೆ ಭಂಗ ತಂದೀತು. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿರಲಿ. ಕೋರ್ಟು, ಕಚೇರಿ ವ್ಯವಹಾರಗಳನ್ನು ಕೆಲವು ದಿನ ಮುಂದೂಡುವುದು ಒಳಿತು. ನೀರಿಗಾಗಿ ಪರದಾಟ ತಪ್ಪದು. ದಿನದಂತ್ಯಕ್ಕೆ ಶುಭ ಸುದ್ದಿ.

ಕರ್ಕಟಕ: ಬಂಧು ಮಿತ್ರರೊಂದಿಗೆ ಪ್ರವಾಸ ತೆರಳುವಿರಿ. ಸಂತಾನ ಭಾಗ್ಯಕ್ಕಾಗಿ ಪರಿತಪಿಸುವ ದಂಪತಿ ದೇವತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವರು. ಆರ್ಥಿಕವಾಗಿ ಚೇತರಿಕೆ ಕಾಣುವಿರಿ. ಆದಾಯ ಹೆಚ್ಚುವುದು.

ಸಿಂಹ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರೆಯುವುದು. ನಿರುದ್ಯೋಗಿಗಳು ಹೊಸ ಉದ್ಯೋಗ ಅವಕಾಶ ಅರಸಿಕೊಂಡು ದೂರ ಪ್ರಯಾಣ ಮಾಡುವರು. ಮಿತ್ರರಿಂದ ಸಂಕಷ್ಟದ ಸಮಯದಲ್ಲಿ ಸಹಾಯ ಸಿಗುವುದು.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಮೇಲಧಿಕಾರಿಗಳಿಂದ ಅಡ್ಡಿ ಆತಂಕಗಳು ಎದುರಾಗಬಹುದು. ಆದರೆ ಸಾಮಾಜಿಕವಾಗಿ ನೀವು ಮಾಡಿದ ಕೆಲಸಗಳಿಗೆ ಮನ್ನಣೆ ಸಿಕ್ಕಿ ಗೌರವ ಸಂಪಾದಿಸುವಿರಿ.

ತುಲಾ: ದಾಯಾದಿಗಳೊಂದಿಗೆ ಕಲಹವೇರ್ಪಡುವ ಸಾಧ್ಯತೆಯಿದೆ. ಹಿರಿಯರ ಮಧ್ಯಸ್ಥಿಕೆಯಿಂದ ಬಗೆಹರಿಸಿ. ಅನಾಯಾಚಿತವಾಗಿ ಅವಕಾಶವೊಂದು ಬರಲಿದ್ದು, ಸದುಪಯೋಗಪಡಿಸಿಕೊಳ್ಳಿ. ಮಿತ್ರರ ಭೇಟಿ ಸಾಧ‍್ಯತೆ.

ವೃಶ್ಚಿಕ: ದೈವಾನುಕೂಲದಿಂದ ನೀವು ಇಂದು ಕೈಗೊಂಡ ಕಾರ್ಯಗಳು ನೆರವೇರಲಿವೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಕೌಟುಂಬಿಕವಾಗಿಯೂ ಸಂಗಾತಿ, ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯುವಿರಿ.

ಧನು: ಮಕ್ಕಳ ವಿಚಾರಕ್ಕೆ ತಲೆಕೆಡಿಸಿಕೊಳ್ಳಬೇಕಾಗುತ್ತದೆ. ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚಿ, ಕಾರ್ಯದೊತ್ತಡ ಅನುಭವಕ್ಕೆ ಬರಲಿದೆ. ಹಾಗಿದ್ದರೂ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದರಿಂದ ಮನಸ್ಸಿಗೆ ನೆಮ್ಮದಿಯಾಗುವುದು.

ಮಕರ: ಆರ್ಥಿಕವಾಗಿ ಆದಾಯಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಅಂದುಕೊಂಡ ಕಾರ್ಯಗಳಿಗೆ ಕೆಲವೊಂದು ವಿಘ್ನಗಳು ಎದುರಾದರೂ ಅಂತಿಮವಾಗಿ ಜಯ ನಿಮ್ಮದೇ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ಕುಂಭ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಕಿರಿ ಕಿರಿ. ವಾಸ ಸ್ಥಳ ಬದಲಾವಣೆಗೆ ಚಿಂತನೆ ಮಾಡುವಿರಿ. ವಿನಾಕಾರಣ ಅಪವಾದಕ್ಕೆ ಗುರಿಯಾಗಬೇಕಾದೀತು. ಎಚ್ಚರಿಕೆ ಅಗತ್ಯ.

ಮೀನ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಶುಭ ದಿನ. ಉದ್ಯೋಗದಲ್ಲಿ ಬಡ್ತಿ, ಮುನ್ನಡೆ ಸಿಗಲಿದೆ. ಕೌಟುಂಬಿಕವಾಗಿ ಮತ್ತಷ್ಟು ಜವಾಬ್ಧಾರಿಗಳು ಹೆಗಲಿಗೇರಲಿವೆ. ಕಾರ್ಯದೊತ್ತಡದಿಂದ ದೇಹ ಹೈರಾಣಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments