Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 9 ಮೇ 2019 (07:11 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕೌಟುಂಬಿಕ ಜವಾಬ್ಧಾರಿಗಳ ನಿರ್ವಹಣೆಗೆ ಮುಂದಾಗುವರಿ. ದುಡುಕು ಮಾತುಗಳಿಂದ ಸಂಬಂಧ ಹಾಳುಮಾಡಿಕೊಳ್ಳಬೇಡಿ. ಅವಸರದ ನಿರ್ಧಾರಗಳನ್ನು ಮಾಡಬೇಡಿ.

ವೃಷಭ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲು ಕಠಿಣ ಪರಿಶ್ರಮದ ಅಗತ್ಯವಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಅವಿವಾಹಿತರಿಗೆ ಕಂಕಣ ಬಲ ಅಗತ್ಯ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಕಾರ್ಯ ಸಾಧನೆ ಮಾಡುವಾಗ ಹಲವು ಅಡಚಣೆಗಳು ಉಂಟಾಗುವುದು. ತಾಳ್ಮೆ ಕಳೆದುಕೊಳ್ಳಬೇಡಿ. ಆರ್ಥಿಕವಾಗಿ ಧನಲಾಭವಾಗಲಿದೆ. ಕೃಷಿ ಕ್ಷೇತ್ರದಲ್ಲಿರುವವರಿಗೆ ಲಾಭ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವೈವಾಹಿಕ ಜೀವನದಲ್ಲಿ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳು ದೂರವಾಗಿ ನೆಮ್ಮದಿ ನೆಲೆಸಲಿದೆ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಖರ್ಚು ವೆಚ್ಚಗಳ ಬಗ್ಗೆ ಗಮನಕೊಡಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಿಂಹ: ದೇಹಾರೋಗ್ಯದಲ್ಲಿ ಏರುಪೇರಾಗುವುದು ಮತ್ತು ಗಾಬರಿಯಾಗುವುದು ಬೇಡ. ನೌಕರ ವರ್ಗದವರಿಗೆ ಬಡ್ತಿ, ಮುನ್ನಡೆ ಯೋಗ. ಧನಾಮನವಾದಷ್ಟೇ ಖರ್ಚು ವೆಚ್ಚಗಳಾಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ.

 
ಕನ್ಯಾ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಸಾಂಸಾರಿಕವಾಗಿ ಸ್ವಲ್ಪ ಎಚ್ಚರತಪ್ಪಿದರೂ ಕಲಹ ತಪ್ಪಿದ್ದಲ್ಲ. ವೈವಾಹಿಕ ಪ್ರಸ್ತಾಪಗಳು ಬರುವುದಾದರೂ ಮನಸ್ಸಿಗೆ ಒಪ್ಪಿಗೆಯಾಗದು. ತಾಳ್ಮೆಯಿಂದಿರಿ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇರಬಹುದು. ಆದರೆ ಸಹೋದ್ಯೋಗಿಗಳ ಸಹಕಾರ ಇರುವುದರಿಂದ ಅಂತಿಮ ಜಯ ಸಾಧಿಸುವಿರಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವರ್ಗದಿಂದ ಪ್ರಶಂಸೆ ವ್ಯಕ್ತವಾಗುವುದು.

ವೃಶ್ಚಿಕ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ವ್ಯಾಪಾರಿಗಳು ಬಂಡವಾಳ ಹೂಡಿಕೆ ಮಾಡುವಾಗ ಕಾಗದ ಪತ್ರಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ನೆರೆಹೊರೆಯವರೊಂದಿಗೆ ನಿಷ್ಠುರ ಮಾಡಿಕೊಳ್ಳಬೇಡಿ.

ಧನು: ನಿಮ್ಮ ಮೂಗಿನ ನೇರಕ್ಕೆ ನಿರ್ಧಾರ ಕೈಗೊಳ್ಳುವುದರಿಂದ ಇತರರ ಅಸಮಾಧಾನಕ್ಕೆ ಕಾರಣರಾಗುವಿರಿ. ಮಕ್ಕಳ ಆಗಮನ ಸಂತಸ ನೀಡಲಿದೆ. ಕೌಟುಂಬಿಕವಾಗಿ ಸಾಕಷ್ಟು ಕೆಲಸದೊತ್ತಡವಿರುವುದು.

ಮಕರ: ದೈವಾನುಕೂಲದಿಂದ ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳು ನೆರವೇರಲಿವೆ. ನೂತನ ದಂಪತಿಗಳಲ್ಲಿ ವಿರಸ ಕಂಡುಬರಬಹುದು. ಮಾತಿನ ಮೇಲೆ ನಿಗಾ ಇರಲಿ. ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ.

ಕುಂಭ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಸಿಗಲಿದೆ. ಉದ್ಯೋಗದಲ್ಲಿ ಗೊಂದಲದ ವಾತಾವರಣವಿರಲಿದೆ. ಸಮಾಧಾನದಿಂದ ಸರಿದೂಗಿಸಿಕೊಂಡು ಹೋಗಬೇಕಾಗುವುದು. ದೇವತಾ ಕಾರ್ಯದಿಂದ ಮನಸ್ಸಿಗೆ ನೆಮ್ಮದಿ.

ಮೀನ: ದೃಢ ಚಿತ್ತದಿಂದ ನಿರ್ಧಾರ ಕೈಗೊಳ್ಳಬೇಕಾದ ಸಮಯವಿದು. ಹೆಚ್ಚಿನ ಕಾರ್ಯಲಾಭವಾಗಬೇಕಾದರೆ ಕುಲದೇವರ ಪ್ರಾರ್ಥನೆ ಮಾಡಿ ಮುಂದುವರಿಯಿರಿ. ಸಾಲಗಳು ಮರುಪಾವತಿಯಾಗಿ ಆರ್ಥಿಕವಾಗಿ ಚೇತರಿಕೆ ಕಾಣುವಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಧನ ಪ್ರಾಪ್ತಿಯಾಗಲು ಈ ಮಾಲೆಯನ್ನು ಕೈಯಲ್ಲಿ ಹಿಡಿದು ಜಪಿಸಿ