Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 9 ಮೇ 2019 (07:11 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕೌಟುಂಬಿಕ ಜವಾಬ್ಧಾರಿಗಳ ನಿರ್ವಹಣೆಗೆ ಮುಂದಾಗುವರಿ. ದುಡುಕು ಮಾತುಗಳಿಂದ ಸಂಬಂಧ ಹಾಳುಮಾಡಿಕೊಳ್ಳಬೇಡಿ. ಅವಸರದ ನಿರ್ಧಾರಗಳನ್ನು ಮಾಡಬೇಡಿ.

ವೃಷಭ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲು ಕಠಿಣ ಪರಿಶ್ರಮದ ಅಗತ್ಯವಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಅವಿವಾಹಿತರಿಗೆ ಕಂಕಣ ಬಲ ಅಗತ್ಯ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಕಾರ್ಯ ಸಾಧನೆ ಮಾಡುವಾಗ ಹಲವು ಅಡಚಣೆಗಳು ಉಂಟಾಗುವುದು. ತಾಳ್ಮೆ ಕಳೆದುಕೊಳ್ಳಬೇಡಿ. ಆರ್ಥಿಕವಾಗಿ ಧನಲಾಭವಾಗಲಿದೆ. ಕೃಷಿ ಕ್ಷೇತ್ರದಲ್ಲಿರುವವರಿಗೆ ಲಾಭ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವೈವಾಹಿಕ ಜೀವನದಲ್ಲಿ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳು ದೂರವಾಗಿ ನೆಮ್ಮದಿ ನೆಲೆಸಲಿದೆ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಖರ್ಚು ವೆಚ್ಚಗಳ ಬಗ್ಗೆ ಗಮನಕೊಡಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಿಂಹ: ದೇಹಾರೋಗ್ಯದಲ್ಲಿ ಏರುಪೇರಾಗುವುದು ಮತ್ತು ಗಾಬರಿಯಾಗುವುದು ಬೇಡ. ನೌಕರ ವರ್ಗದವರಿಗೆ ಬಡ್ತಿ, ಮುನ್ನಡೆ ಯೋಗ. ಧನಾಮನವಾದಷ್ಟೇ ಖರ್ಚು ವೆಚ್ಚಗಳಾಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ.

 
ಕನ್ಯಾ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಸಾಂಸಾರಿಕವಾಗಿ ಸ್ವಲ್ಪ ಎಚ್ಚರತಪ್ಪಿದರೂ ಕಲಹ ತಪ್ಪಿದ್ದಲ್ಲ. ವೈವಾಹಿಕ ಪ್ರಸ್ತಾಪಗಳು ಬರುವುದಾದರೂ ಮನಸ್ಸಿಗೆ ಒಪ್ಪಿಗೆಯಾಗದು. ತಾಳ್ಮೆಯಿಂದಿರಿ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇರಬಹುದು. ಆದರೆ ಸಹೋದ್ಯೋಗಿಗಳ ಸಹಕಾರ ಇರುವುದರಿಂದ ಅಂತಿಮ ಜಯ ಸಾಧಿಸುವಿರಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವರ್ಗದಿಂದ ಪ್ರಶಂಸೆ ವ್ಯಕ್ತವಾಗುವುದು.

ವೃಶ್ಚಿಕ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ವ್ಯಾಪಾರಿಗಳು ಬಂಡವಾಳ ಹೂಡಿಕೆ ಮಾಡುವಾಗ ಕಾಗದ ಪತ್ರಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ನೆರೆಹೊರೆಯವರೊಂದಿಗೆ ನಿಷ್ಠುರ ಮಾಡಿಕೊಳ್ಳಬೇಡಿ.

ಧನು: ನಿಮ್ಮ ಮೂಗಿನ ನೇರಕ್ಕೆ ನಿರ್ಧಾರ ಕೈಗೊಳ್ಳುವುದರಿಂದ ಇತರರ ಅಸಮಾಧಾನಕ್ಕೆ ಕಾರಣರಾಗುವಿರಿ. ಮಕ್ಕಳ ಆಗಮನ ಸಂತಸ ನೀಡಲಿದೆ. ಕೌಟುಂಬಿಕವಾಗಿ ಸಾಕಷ್ಟು ಕೆಲಸದೊತ್ತಡವಿರುವುದು.

ಮಕರ: ದೈವಾನುಕೂಲದಿಂದ ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳು ನೆರವೇರಲಿವೆ. ನೂತನ ದಂಪತಿಗಳಲ್ಲಿ ವಿರಸ ಕಂಡುಬರಬಹುದು. ಮಾತಿನ ಮೇಲೆ ನಿಗಾ ಇರಲಿ. ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ.

ಕುಂಭ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಸಿಗಲಿದೆ. ಉದ್ಯೋಗದಲ್ಲಿ ಗೊಂದಲದ ವಾತಾವರಣವಿರಲಿದೆ. ಸಮಾಧಾನದಿಂದ ಸರಿದೂಗಿಸಿಕೊಂಡು ಹೋಗಬೇಕಾಗುವುದು. ದೇವತಾ ಕಾರ್ಯದಿಂದ ಮನಸ್ಸಿಗೆ ನೆಮ್ಮದಿ.

ಮೀನ: ದೃಢ ಚಿತ್ತದಿಂದ ನಿರ್ಧಾರ ಕೈಗೊಳ್ಳಬೇಕಾದ ಸಮಯವಿದು. ಹೆಚ್ಚಿನ ಕಾರ್ಯಲಾಭವಾಗಬೇಕಾದರೆ ಕುಲದೇವರ ಪ್ರಾರ್ಥನೆ ಮಾಡಿ ಮುಂದುವರಿಯಿರಿ. ಸಾಲಗಳು ಮರುಪಾವತಿಯಾಗಿ ಆರ್ಥಿಕವಾಗಿ ಚೇತರಿಕೆ ಕಾಣುವಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments