Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 14 ಮೇ 2019 (06:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಸ್ವಯಂ ಪ್ರಯತ್ನಬಲದಿಂದ ಮುಂದುವರಿದರೆ ಕಾರ್ಯಗಳಲ್ಲಿ ಯಶಸ್ಸು. ವಿವಾಹ ಪ್ರಯತ್ನಗಳಿಗೆ ಅಡ್ಡಿ ಆತಂಕ ಎದುರಾಗಬಹುದು. ಆರ್ಥಿಕವಾಗಿ ಧನಾಗಮನವಾಗಿ ನೆಮ್ಮದಿ ಮೂಡಲಿದೆ.

ವೃಷಭ: ಮಾನಸಿಕ ಚಿಂತೆಯಿಂದ ಒಂದು ರೀತಿಯ ಉದಾಸೀನ ಭಾವ ಬರಲಿದೆ. ಕಾರ್ಯದಲ್ಲಿ ನಿರುತ್ಸಾಹ ತೋರಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಸಾಂಸಾರಿಕವಾಗಿ ಹಿರಿಯರ ಮಾತಿಗೆ ಮನ್ನಣೆ ಕೊಡಬೇಕಾದೀತು.

ಮಿಥುನ: ನಿರುದ್ಯೋಗಿಗಳಿಗೆ ಉದ್ಯೊಗ ಲಾಭವಾಗಲಿದೆ. ನಿಮ್ಮ ಪ್ರಯತ್ನ ಬಲಕ್ಕೆ ತಕ್ಕ ಫಲ ಸಿಗಲಿದೆ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚಲಿದೆ. ರಾಜಕೀಯವಾಗಿ ಸ್ಥಾನ ಮಾನ ಉತ್ತಮವಾಗುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಕೃಷಿ ಕ್ಷೇತ್ರದವರು ನಷ್ಟ ಅನುಭವಿಸುವರು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯುವುದು. ನಿರ್ಧಾರ ಕೈಗೊಳ್ಳುವಾಗ ಒತ್ತಡಕ್ಕೆ ಒಳಗಾಗದಿರಿ.

ಸಿಂಹ: ಕುಟುಂಬ ವರ್ಗದಲ್ಲಿ ಭಿನ್ನಾಭಿಪ್ರಾಯ ತಲೆದೋರಲಿವೆ. ಹೀಗಾಗಿ ಮಾತಿನ ಮೇಲೆ ನಿಗಾ ಅಗತ್ಯ. ವೈವಾಹಿಕ ಸಂಬಂಧಗಳಲ್ಲಿ ಬಿರುಕು ಮೂಡಬಹುದು. ಎಚ್ಚರಿಕೆ ಅಗತ್ಯ. ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

 
ಕನ್ಯಾ: ಕೈಗೊಂಡ ಕಾರ್ಯಗಳಲ್ಲಿ ಪ್ರಗತಿ, ಮುನ್ನಡೆ ಗಳಿಸುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಎಚ್ಚರ ಅಗತ್ಯ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ತುಲಾ: ನಿರುದ್ಯೋಗಿಗಳಿಗೆ ಮನಸ್ಸಿಗೆ ಹಿಡಿಸಿದ ಕೆಲಸ ಸಿಕ್ಕದೇ ಇದ್ದರೂ, ಸದ್ಯಕ್ಕೆ ಕೈಗೆ ಬಂದ ಅವಕಾಶವನ್ನು ಬಳಸಿಕೊಳ್ಳುವುದೇ ಒಳ್ಳೆಯದು. ಮನೆಯಲ್ಲಿ ಶುಭ ಕಾರ್ಯ ನೆರವೇರಿಸಲು ಇದುವೇ ಸೂಕ್ತ ಸಮಯ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಪ್ರಯತ್ನ ಬಲದಿಂದ ಮಾತ್ರ ಯಶಸ್ಸು. ವ್ಯಾಪಾರಿಗಳು ಬಂಡವಾಳ ಹೂಡಿಕೆ ಮಾಡುವಾಗ ಕಾಗದ ಪತ್ರಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ನೆರೆಹೊರೆಯವರೊಂದಿಗೆ ನಿಷ್ಠುರ ಮಾಡಿಕೊಳ್ಳಬೇಡಿ.

ಧನು: ನಿಮ್ಮ ಮೂಗಿನ ನೇರಕ್ಕೆ ನಿರ್ಧಾರ ಕೈಗೊಳ್ಳುವುದರಿಂದ ಇತರರ ಅಸಮಾಧಾನಕ್ಕೆ ಕಾರಣರಾಗುವಿರಿ. ದುಡುಕಿನ ಮಾತನಿಂದ ಮನೆ ಹಾಳು ಎಂಬುದನ್ನು ಮರೆಯಬೇಡಿ. ಆರೋಗ್ಯದ ಬಗ್ಗೆ ಕಾಳಜಿ ಮಾಡಿ.

ಮಕರ: ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬರಲಿದೆ. ಭೂಮಿ ಖರೀದಿ, ಮನೆ ಬದಲಾವಣೆ ಬಗ್ಗೆ ಚಿಂತನೆ ಮಾಡುವಿರಿ. ನಿರುದ್ಯೋಗಿಗಳು ಉದ್ಯೋಗ ಅರಸಿಕೊಂಡು ದೂರ ಪ್ರಯಾಣ ಮಾಡಬೇಕಾದೀತು.

ಕುಂಭ: ದಾಯಾದಿಗಳೊಂದಿಗೆ ಇದ್ದ ವೈಷಮ್ಯಗಳು ದೂರವಾಗುವುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ. ಸಮಾಧಾನದಿಂದ ಸರಿದೂಗಿಸಿಕೊಂಡು ಹೋಗಬೇಕಾಗುವುದು. ದೇವತಾ ಕಾರ್ಯದಿಂದ ಮನಸ್ಸಿಗೆ ನೆಮ್ಮದಿ.

ಮೀನ: ದೃಢ ಚಿತ್ತದಿಂದ ನಿರ್ಧಾರ ಕೈಗೊಳ್ಳಬೇಕಾದ ಸಮಯವಿದು. ಹೆಚ್ಚಿನ ಕಾರ್ಯಲಾಭವಾಗಬೇಕಾದರೆ ಕುಲದೇವರ ಪ್ರಾರ್ಥನೆ ಮಾಡಿ ಮುಂದುವರಿಯಿರಿ. ಸಾಲಗಳು ಮರುಪಾವತಿಯಾಗಿ ಆರ್ಥಿಕವಾಗಿ ಚೇತರಿಕೆ ಕಾಣುವಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ             

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments