Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 15 ಮೇ 2019 (07:25 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ಕೌಟುಂಬಿಕವಾಗಿ ಸಂತೋಷದ ಸಮಯ ನಿಮ್ಮದಾಗಿರುತ್ತದೆ. ಇಷ್ಟ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಾಗದು. ಆದರೆ ದಾಯಾದಿಗಳ ಅಸಮಾಧಾನಕ್ಕೆ ಕಾರಣರಾಗುವಿರಿ.

ವೃಷಭ: ಸಾಂಸಾರಿಕವಾಗಿ ಮನಸ್ಸಿಗೆ ನೆಮ್ಮದಿ ಇರುತ್ತದೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಇರಲಿದೆ.

ಮಿಥುನ: ಕಾರ್ಯ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡವಿರುತ್ತದೆ. ಇದರಿಂದ ದೇಹಾಯಾಸವಾಗಲಿದೆ. ಮನೆಯಲ್ಲಿ ಶುಭಮಂಗಲ ಕಾರ್ಯ ನಡೆಸಲು ತಯಾರಿ ನಡೆಸುತ್ತೀರಿ. ವ್ಯವಹಾರದಲ್ಲಿ ನಿವ್ವಳ ಲಾಭ ಗಳಿಸುವಿರಿ.

ಕರ್ಕಟಕ: ದೈವಾನುಕೂಲದಿಂದ ಇದುವರೆಗೆ ಕೈಗೆಟುಕದ ಕಾರ್ಯ ಇಂದು ನೆರವೇರಲಿದೆ. ಕುಲದೇವರ ದರ್ಶನ ಭಾಗ್ಯ ಸಿಗಲಿದೆ. ಶೀತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗುವುದು.

ಸಿಂಹ: ದಾಯಾದಿಗಳೊಂದಿಗೆ ಮುನಿಸು ಮರೆತು ಸಂಧಾನಕ್ಕೆ ಮುಂದಾಗುವಿರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಕೌಟುಂಬಿಕವಾಗಿ ಕೆಲವೊಂದು ಜವಾಬ್ಧಾರಿ ಹೊರಬೇಕಾಗುತ್ತದೆ. ಅನಿರೀಕ್ಷಿತ ಖರ್ಚುಗಳಿಗೆ ಸಿದ್ಧರಾಗಿ.

 
ಕನ್ಯಾ: ವ್ಯಾಪಾರಿ ವರ್ಗದವರು ವಂಚನೆಗೊಳಗಾದಂತೆ ಎಚ್ಚರಿಕೆ ವಹಿಸಬೇಕು. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗಬಹುದು. ಆದರೆ ಸಾಲಗಾರರು ಹಣ ಮರುಪಾವತಿ ಮಾಡುತ್ತಾರೆ. ದಿನದಂತ್ಯಕ್ಕೆ ಶುಭ ಸುದ್ದಿಯಿದೆ.

ತುಲಾ: ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾದೀತು. ಸಂಗಾತಿಯ ಅಲಂಕಾರಿಕ ವಸ್ತುಗಳಿಗೆ ಹಣ ಖರ್ಚು ಮಾಡಬೇಕಾಗುತ್ತದೆ. ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ಭೂ, ಗೃಹ ಖರೀದಿಗೆ ಮುಂದಾಗುವಿರಿ.

ವೃಶ್ಚಿಕ: ಆಗಾಗ ಖರ್ಚು ವೆಚ್ಚಗಳು ಅಧಿಕವಾಗಲಿದೆ. ನೌಕರ ವರ್ಗಕ್ಕೆ ಉದ್ಯೋಗದಲ್ಲಿ ವರ್ಗಾವಣೆ, ಬದಲಾವಣೆಯಾಗಬಹುದು. ಕೃಷಿಕರಿಗೆ ನಿವ್ವಳ ಲಾಭಾಗುವುದು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.

ಧನು: ನೀವು ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತ ಅನುಭವಿಸಬೇಕಾದೀತು. ಗೃಹ ಸಂಬಂಧೀ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಮಕರ: ವಿವಾಹ ಸಂಬಂಧೀ ಮಾತುಕತೆಗಳಲ್ಲಿ ಆಸಕ್ತಿ ತೋರುವಿರಿ. ಹೊಸ ವ್ಯವಹಾರಗಳಿಗೆ ಕೈ ಹಾಕುವುದಿದ್ದರೆ ಕೂಲಂಕುಷವಾಗಿ ಚಿಂತನೆ ಮಾಡುವುದು ಒಳ್ಳೆಯದು. ಆರೋಗ್ಯದಲ್ಲಿ ಏರುಪೇರಾಗಬಹುದು.

ಕುಂಭ: ಮನೆ ಮಾಲಿಕರಿಂದ ಕಿರಿ ಕಿರಿಯಾಗಬಹುದು. ಮನೆ ಬದಲಾವಣೆ ಬಗ್ಗೆ ಚಿಂತನೆ ಮಾಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳು ನಿಮ್ಮ ಏಳಿಗೆಗೆ ಅಸೂಯೆ ಪಡಬಹುದು. ದೈವತಾ ಪ್ರಾರ್ಥನೆಯಿಂದ ಎಲ್ಲವೂ ಶುಭವಾಗುತ್ತದೆ.

ಮೀನ: ಮಹಿಳೆಯರಿಂದ ಅಪವಾದದ ಭೀತಿಯಿದೆ. ಅನಗತ್ಯ ವಿಚಾರಗಳಿಗೆ ಮೂಗು ತೂರಿಸಲು ಹೋಗಬೇಡಿ. ಹೆಚ್ಚಿನ ಹಣ ಸಂಪಾದನೆಗೆ ನಾನಾ ಮಾರ್ಗ ಹುಡುಕುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments