Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 18 ಮೇ 2019 (07:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಹಂತ ಹಂತವಾಗಿ ಆರ್ಥಿಕವಾಗಿ ಪ್ರಗತಿ ಕಂಡುಬರಲಿದ್ದು, ತುಸು ಸಮಾಧಾನ ಮೂಡಲಿದೆ. ಉದ್ದೇಶಿತ ಕಾರ್ಯಗಳನ್ನು ಪೂರ್ತಿ ಮಾಡುವಿರಿ. ಆದರೆ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಆರೋಗ್ಯ ಸುಧಾರಿಸುವುದು.

ವೃಷಭ: ತಾಂತ್ರಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಅಭಿವೃದ್ಧಿ, ಮುನ್ನಡೆ ತೋರಿಬರಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರುವುದು. ಹಿತವಂಚಕರ ಬಗ್ಗೆ ಎಚ್ಚರಿಕೆ ಅಗತ್ಯ. ಆರೋಗ್ಯದಲ್ಲಿ ಸುಧಾರಣೆ.

ಮಿಥುನ: ಭೂಮಿ, ಮನೆ ಖರೀದಿ ವ್ಯವಹಾರದಲ್ಲಿ ಲಾಭ ಪಡೆಯುವಿರಿ. ಉದ್ಯೋಗದಲ್ಲಿ ಬದಲಾವಣೆ ಕಂಡುಬರಬಹುದು. ವಾತ, ಪಿತ್ತ ಪ್ರಕೃತಿಯ ದೇಹದವರಿಗೆ ಆರೋಗ್ಯ ಸಮಸ್ಯೆ ಬರಬಹುದು. ಎಚ್ಚರಿಕೆ ಅಗತ್ಯ.

ಕರ್ಕಟಕ: ಸಾಮಾಜಿಕ ಕೆಲಸಗಳಲ್ಲಿ ಪ್ರಶಂಸೆ ಪಡೆಯುವಿರಿ. ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗ ಸಿಗದು. ರಾಜಕೀಯ ವರ್ಗದವರಿಗೆ ಮುನ್ನಡೆ. ಅವಿವಾಹಿತರಿಗೆ ಕಂಕಣ ಬಲ. ದಿನದಂತ್ಯಕ್ಕೆ ಅತಿಥಿಗಳ ಆಗಮನ.

ಸಿಂಹ: ಮಕ್ಕಳೊಂದಿಗೆ ಭಿನ್ನಾಭಿಪ್ರಾಯ ಮೂಡಿಬರಬಹುದು. ಹಿರಿಯರ ತೀರ್ಥ ಯಾತ್ರೆಗೆ ವ್ಯವಸ್ಥೆ ಮಾಡುವಿರಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ದುಡುಕು ನಿರ್ಧಾರಗಳಿಗೆ ಅವಕಾಶ ಕೊಡಬೇಡಿ. ದಿನದಂತ್ಯಕ್ಕೆ ಶುಭ ಸುದ್ದಿ.

 
ಕನ್ಯಾ: ಮನೆಗೆ ಪ್ರೀತಿ ಪಾತ್ರರು, ಬಂಧು ಮಿತ್ರರ ಆಗಮನವಾಗಲಿದೆ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಕಂಡುಬರಲಿದೆ. ವಾಹನ ಖರೀದಿಯಿಂದ ನಷ್ಟವಾಗಬಹುದು. ವೃತ್ತಿರಂಗದಲ್ಲಿ ತಿರುಗಾಟ ನಡೆಸಬೇಕಾಗುತ್ತದೆ.

ತುಲಾ: ನಿಮ್ಮ ಪ್ರಯತ್ನ ಬಲಕ್ಕೆ ತಕ್ಕ ಫಲ ಸಿಗಲಿದೆ. ಆತ್ಮಸ್ಥೈರ್ಯ ವೃದ್ಧಿಯಾಗಲಿದೆ. ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ. ಹಳೆಯ ಬಾಕಿಗಳು ವಸೂಲಿಯಾಗಲಿವೆ. ಆದರೆ ಖರ್ಚುವೆಚ್ಚಗಳ ಬಗ್ಗೆ ಮಿತಿಯಿರಲಿ.

ವೃಶ್ಚಿಕ: ಕಾರ್ಯದಲ್ಲಿ ವಿಳಂಬಾಗುವುದರಿಂದ ಮಾನಸಿಕವಾಗಿ ಬೇಸರವುಂಟಾಗಬಹುದು. ಕ್ರೀಡಾ ಕ್ಷೇತ್ರದಲ್ಲಿರುವವರಿಗೆ ಪೈಪೋಟಿ ಹೆಚ್ಚುವುದು. ಮಹಿಳೆಯರ ಜತೆ ಎಚ್ಚರಿಕೆಯಿಂದ ವರ್ತಿಸಿ. ಆರೋಗ್ಯದಲ್ಲಿ ಸುಧಾರಣೆ.

ಧನು: ಕಿರು ಸಂಚಾರದಿಂದ ಸಂತಸವಾಗುವುದು. ಆದರೆ ದೇಹಾಯಾಸವಾಗುವುದು ತಪ್ಪದು. ಅನಗತ್ಯವಾಗಿ ಇಲ್ಲದ ಜವಾಬ್ಧಾರಿಗಳನ್ನು ಮೈಮೇಲೆಳೆದುಕೊಳ್ಳಬೇಡಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ವರ್ತಿಸಿ.

ಮಕರ: ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ತಮ್ಮ ತಮ್ಮ ಕ್ಷೇತ್ರದಲ್ಲಿ ಮುನ್ನಡೆ ಲಭಿಸುವುದು. ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ.

ಕುಂಭ: ಆಗಾಗ ಧನಪಪ್ರಾಪ್ತಿಯಾಗುವುದರಿಂದ ಕಾರ್ಯಸಾಧನೆಗೆ ಅನುಕೂಲ. ಕುಲದೇವರ ದರ್ಶನ ಪಡೆಯುವುದರಿಂದ ಮನಸ್ಸಿಗೆ ನೆಮ್ಮದಿ. ವೈವಾಹಿಕ ಮಾತುಕತೆಯಲ್ಲಿ ಅಡ್ಡಿ ಆತಂಕಗಳು ಎದುರಾಗಬಹುದು. ತಾಳ್ಮೆ ಅಗತ್ಯ.

ಮೀನ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗದೇ ನಿರಾಸೆಯಾಗಬಹುದು. ಮನೆಯಲ್ಲಿ ಶುಭಮಂಗಲ ಕಾರ್ಯಗಳಿಗಾಗಿ ಒಡಾಟ ಹೆಚ್ಚಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ             

Share this Story:

Follow Webdunia kannada

ಮುಂದಿನ ಸುದ್ದಿ

ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?