Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 18 ಮೇ 2019 (07:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಹಂತ ಹಂತವಾಗಿ ಆರ್ಥಿಕವಾಗಿ ಪ್ರಗತಿ ಕಂಡುಬರಲಿದ್ದು, ತುಸು ಸಮಾಧಾನ ಮೂಡಲಿದೆ. ಉದ್ದೇಶಿತ ಕಾರ್ಯಗಳನ್ನು ಪೂರ್ತಿ ಮಾಡುವಿರಿ. ಆದರೆ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಆರೋಗ್ಯ ಸುಧಾರಿಸುವುದು.

ವೃಷಭ: ತಾಂತ್ರಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಅಭಿವೃದ್ಧಿ, ಮುನ್ನಡೆ ತೋರಿಬರಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರುವುದು. ಹಿತವಂಚಕರ ಬಗ್ಗೆ ಎಚ್ಚರಿಕೆ ಅಗತ್ಯ. ಆರೋಗ್ಯದಲ್ಲಿ ಸುಧಾರಣೆ.

ಮಿಥುನ: ಭೂಮಿ, ಮನೆ ಖರೀದಿ ವ್ಯವಹಾರದಲ್ಲಿ ಲಾಭ ಪಡೆಯುವಿರಿ. ಉದ್ಯೋಗದಲ್ಲಿ ಬದಲಾವಣೆ ಕಂಡುಬರಬಹುದು. ವಾತ, ಪಿತ್ತ ಪ್ರಕೃತಿಯ ದೇಹದವರಿಗೆ ಆರೋಗ್ಯ ಸಮಸ್ಯೆ ಬರಬಹುದು. ಎಚ್ಚರಿಕೆ ಅಗತ್ಯ.

ಕರ್ಕಟಕ: ಸಾಮಾಜಿಕ ಕೆಲಸಗಳಲ್ಲಿ ಪ್ರಶಂಸೆ ಪಡೆಯುವಿರಿ. ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗ ಸಿಗದು. ರಾಜಕೀಯ ವರ್ಗದವರಿಗೆ ಮುನ್ನಡೆ. ಅವಿವಾಹಿತರಿಗೆ ಕಂಕಣ ಬಲ. ದಿನದಂತ್ಯಕ್ಕೆ ಅತಿಥಿಗಳ ಆಗಮನ.

ಸಿಂಹ: ಮಕ್ಕಳೊಂದಿಗೆ ಭಿನ್ನಾಭಿಪ್ರಾಯ ಮೂಡಿಬರಬಹುದು. ಹಿರಿಯರ ತೀರ್ಥ ಯಾತ್ರೆಗೆ ವ್ಯವಸ್ಥೆ ಮಾಡುವಿರಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ದುಡುಕು ನಿರ್ಧಾರಗಳಿಗೆ ಅವಕಾಶ ಕೊಡಬೇಡಿ. ದಿನದಂತ್ಯಕ್ಕೆ ಶುಭ ಸುದ್ದಿ.

 
ಕನ್ಯಾ: ಮನೆಗೆ ಪ್ರೀತಿ ಪಾತ್ರರು, ಬಂಧು ಮಿತ್ರರ ಆಗಮನವಾಗಲಿದೆ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಕಂಡುಬರಲಿದೆ. ವಾಹನ ಖರೀದಿಯಿಂದ ನಷ್ಟವಾಗಬಹುದು. ವೃತ್ತಿರಂಗದಲ್ಲಿ ತಿರುಗಾಟ ನಡೆಸಬೇಕಾಗುತ್ತದೆ.

ತುಲಾ: ನಿಮ್ಮ ಪ್ರಯತ್ನ ಬಲಕ್ಕೆ ತಕ್ಕ ಫಲ ಸಿಗಲಿದೆ. ಆತ್ಮಸ್ಥೈರ್ಯ ವೃದ್ಧಿಯಾಗಲಿದೆ. ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ. ಹಳೆಯ ಬಾಕಿಗಳು ವಸೂಲಿಯಾಗಲಿವೆ. ಆದರೆ ಖರ್ಚುವೆಚ್ಚಗಳ ಬಗ್ಗೆ ಮಿತಿಯಿರಲಿ.

ವೃಶ್ಚಿಕ: ಕಾರ್ಯದಲ್ಲಿ ವಿಳಂಬಾಗುವುದರಿಂದ ಮಾನಸಿಕವಾಗಿ ಬೇಸರವುಂಟಾಗಬಹುದು. ಕ್ರೀಡಾ ಕ್ಷೇತ್ರದಲ್ಲಿರುವವರಿಗೆ ಪೈಪೋಟಿ ಹೆಚ್ಚುವುದು. ಮಹಿಳೆಯರ ಜತೆ ಎಚ್ಚರಿಕೆಯಿಂದ ವರ್ತಿಸಿ. ಆರೋಗ್ಯದಲ್ಲಿ ಸುಧಾರಣೆ.

ಧನು: ಕಿರು ಸಂಚಾರದಿಂದ ಸಂತಸವಾಗುವುದು. ಆದರೆ ದೇಹಾಯಾಸವಾಗುವುದು ತಪ್ಪದು. ಅನಗತ್ಯವಾಗಿ ಇಲ್ಲದ ಜವಾಬ್ಧಾರಿಗಳನ್ನು ಮೈಮೇಲೆಳೆದುಕೊಳ್ಳಬೇಡಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ವರ್ತಿಸಿ.

ಮಕರ: ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ತಮ್ಮ ತಮ್ಮ ಕ್ಷೇತ್ರದಲ್ಲಿ ಮುನ್ನಡೆ ಲಭಿಸುವುದು. ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ.

ಕುಂಭ: ಆಗಾಗ ಧನಪಪ್ರಾಪ್ತಿಯಾಗುವುದರಿಂದ ಕಾರ್ಯಸಾಧನೆಗೆ ಅನುಕೂಲ. ಕುಲದೇವರ ದರ್ಶನ ಪಡೆಯುವುದರಿಂದ ಮನಸ್ಸಿಗೆ ನೆಮ್ಮದಿ. ವೈವಾಹಿಕ ಮಾತುಕತೆಯಲ್ಲಿ ಅಡ್ಡಿ ಆತಂಕಗಳು ಎದುರಾಗಬಹುದು. ತಾಳ್ಮೆ ಅಗತ್ಯ.

ಮೀನ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗದೇ ನಿರಾಸೆಯಾಗಬಹುದು. ಮನೆಯಲ್ಲಿ ಶುಭಮಂಗಲ ಕಾರ್ಯಗಳಿಗಾಗಿ ಒಡಾಟ ಹೆಚ್ಚಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ             

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments