Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 21 ಮೇ 2019 (07:27 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತಪ್ಪದು. ಪ್ರಾಮಾಣಿಕವಾಗಿದ್ದರೂ ವಿನಾಕಾರಣ ಅಪವಾದದಿಂದಾಗಿ ಬೇಸರವಾದೀತು. ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣವಿರುವುದು.

ವೃಷಭ: ಅನವ‍‍ಶ್ಯಕವಾಗಿ ಕಲಹಕ್ಕೆ ಎಡೆಮಾಡಿಕೊಡದಿರಿ. ಆರೋಗ್ಯ ಭಾಗ್ಯ ಸುಧಾರಿಸಲಿದೆ. ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ. ನೂತನ ದಂಪತಿಗಳಿಗೆ ಸಂತಸದ ವಾರ್ತೆಯಿದೆ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇದ್ದರೂ ನಿಮ್ಮ ಮುನ್ನಡೆಗೆ ತೊಂದರೆಯಾಗದು. ಸರ್ಕಾರಿ ಕೆಲಸ ಕಾರ್ಯಗಳಿಂದ ಕಾರ್ಯ ಸಾಧನೆಗೆ ಅಡ್ಡಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು.

ಕರ್ಕಟಕ: ನೌಕರ ವರ್ಗದವರಿಗೆ ಉದ್ಯೋಗದಲ್ಲಿ ವೇತನ ಹೆಚ್ಚಳ ಸಾಧ್ಯತೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗವಾಕಶಗಳು ಸಿಗಲಿವೆ. ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ ಕಾಣುವಿರಿ. ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ.

ಸಿಂಹ: ಅನಗತ್ಯವಾಗಿ ದುಡುಕಿ ಮಾತನಾಡಿ ಕೊನೆಗೆ ಮಾನಸಿಕವಾಗಿ ಬೇಸರ ಮಾಡಿಕೊಳ್ಳುವಿರಿ. ಆದರೆ ಸಂಗಾತಿಯಿಂದ ಸಮಾಧಾನ ಸಿಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಯಶಸ್ಸು ಸಿಗಲಿದೆ. ತಾಳ್ಮೆ ಅಗತ್ಯ.

 
ಕನ್ಯಾ: ಉದ್ಯೋಗದಲ್ಲಿ ಯಾರೋ ಮಾಡಿದ ಪುಣ್ಯದ ಫಲ ಪ್ರಾಪ್ತಿಯಾಗಿ ಬಡ್ತಿ ಸಿಗಲಿದೆ. ಮನೆ ಬದಲಾವಣೆಗೆ ಚಿಂತನೆ ಮಾಡುವಿರಿ. ಆದರೆ ಸಂಗಾತಿಯ ಅಭಿಪ್ರಾಯಗಳಿಗೆ ಬೆಲೆಕೊಡುವುದು ಮುಖ್ಯ.

ತುಲಾ: ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ವ್ಯಾಪಾರ, ವಹಿವಾಟಿನಲ್ಲಿ ಹೂಡಿಕೆ ಮಾಡಲು ತಕ್ಕ ಸಮಯ. ವಿದ್ಯಾರ್ಥಿಗಳಿಗೆ ಪರಿಶ್ರಮ ಅಗತ್ಯ.

ವೃಶ್ಚಿಕ: ದಾಂಪತ್ಯದಲ್ಲಿ ಹೊಂದಾಣಿಕೆಯಿಂದ ಸಂಗಾತಿಯ ಮನ ಅರಿತು ನಡೆದುಕೊಳ್ಳುವುದು ಮುಖ್ಯ. ಮಕ್ಕಳ ಭವಿಷ್ಯದ ಬಗ್ಗೆ ರೂಪು ರೇಷೆ ಹಾಕುವಿರಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯಿದೆ.

ಧನು: ವೃತ್ತಿರಂಗದಲ್ಲಿ ಪ್ರತಿಷ್ಠಿತರ ಸಹಕಾರದಿಂದ ಕಾರ್ಯ ಸಾಧನೆಗೆ ಅನುಕೂಲವಾಗಲಿದೆ. ಹಣಕಾಸಿನ ವಿಚಾರದಲ್ಲಿ ಯೋಚಿಸಿ ಮುನ್ನಡೆಯಿರಿ. ಸಾಂಸಾರಿಕವಾಗಿ ಋಣಾತ್ಮಕ ಚಿಂತನೆಗಳಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ.

ಮಕರ: ನಿಮ್ಮಲ್ಲಿರುವ ಪ್ರತಿಭೆ ಗುರುತಿಸಲ್ಪಡುವುದು. ವ್ಯಾಪಾರ, ವ್ಯವಹಾರ ಕ್ಷೇತ್ರದಲ್ಲಿ ಆದಾಯ ಗಳಿಸಬಹುದು. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ಅವಿವಾಹಿತರು ಯೋಗ್ಯ ಸಂಬಂಧಕ್ಕಾಗಿ ಕೆಲ ಕಾಲ ಕಾಯುವುದು ಒಳ್ಳೆಯದು.

ಕುಂಭ: ಪ್ರೇಮಿಗಳಿಗೆ ಹಿರಿಯರಿಂದ ಒಪ್ಪಿಗೆ ಸಿಗಲಿದೆ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳು. ಆದರೆ ಉದ್ಯೋಗ ನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಹಿತ ಶತ್ರುಗಳ ಬಗ್ಗೆ ಎಚ್ಚರ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಕೈಗೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ. ದಾಂಪತ್ಯದಲ್ಲಿ ಶುಭವಾರ್ತೆ ಕೇಳುವಿರಿ. ಆರ್ಥಿಕ ಪರಿಸ್ಥಿತಿ ಚಿಂತೆಗೆ ಕಾರಣವಾಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ                  

Share this Story:

Follow Webdunia kannada

ಮುಂದಿನ ಸುದ್ದಿ

ಅಶುಭ ಗ್ರಹಗಳ ದೃಷ್ಟಿ ಬಿದ್ದರೆ ಆಯಾ ರಾಶಿಯವರು ಈ ಮಂತ್ರವನ್ನು ಪಠಿಸಿದರೆ ಯಶಸ್ಸು ಖಂಡಿತ