ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 25 ಮೇ 2019 (07:14 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ಶುಭ ಸೂಚನೆಗಳಿರುತ್ತವೆ.  ಬಾಕಿ ಹಣ ಪಾವತಿಯಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸ ಮೆಚ್ಚುಗೆಗೆ ಪಾತ್ರವಾಗುವುದು. ಆದರೆ ಕೌಟುಂಬಿಕವಾಗಿ ಒತ್ತಡದ ದಿನ. ಕೆಲಸ ಕಾರ್ಯಗಳಿಗೆ ಓಡಾಟ ಹೆಚ್ಚಿರುತ್ತದೆ.

ವೃಷಭ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಬರುವುದು. ದೇವರ ಅನುಗ್ರಹ ನಿಮ್ಮ ಮೇಲಿದ್ದು ಅಂದುಕೊಂಡ ಕಾರ್ಯಗಳು ನೆರವೇರಲಿದೆ. ಹಿರಿಯರಿಗೆ ಸಂತಸದ ವಾರ್ತೆಯಿದೆ. ಆರ್ಥಿಕವಾಗಿ ಅಭಿವೃದ್ಧಿ.

ಮಿಥುನ: ಆಸ್ತಿ, ಮನೆ ಖರೀದಿಗೆ ಅವಸರದ ನಿರ್ಧಾರ ಕೈಗೊಳ್ಳಬೇಡಿ. ಪ್ರತಿಕೂಲ ಫಲಗಳಿಂದ ವಿಚಲಿತರಾಗದಿರಿ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಕ್ಕಾಗಿ ಕೆಲವು ದಿನ ಕಾಯಬೇಕಾದೀತು. ದಿನದಂತ್ಯಕ್ಕೆ ಶುಭ ಸುದ್ದಿ.

ಕರ್ಕಟಕ: ಸಾಂಸಾರಿಕವಾಗಿ ಅಭಿವೃದ್ಧಿ ನೆಮ್ಮದಿ ಇರುವುದು. ಪತ್ನಿ ಮಕ್ಕಳೊಂದಿಗೆ ಸಂತಸದ ಸಮಯ ಕಳೆಯುವಿರಿ. ಕ್ರೀಡಾ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ. ದೇವತಾ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಹಕಾರ, ಮೇಲಧಿಕಾರಿಗಳಿಂದ ಪ್ರಶಂಸೆ ಸಿಗುವುದು. ಅಧಿಕಾರಿ ವರ್ಗದವರಿಗೆ ಉದ್ಯೋಗದಲ್ಲಿ ಬದಲಾವಣೆಯಾಗಲಿದೆ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚುವುದು.

 
ಕನ್ಯಾ: ಆರೋಗ್ಯ ಹದಗೆಡುವ ಸಂಭವವಿದ್ದು, ಅತೀವ ಕಾಳಜಿ ವಹಿಸಬೇಕಾಗುತ್ತದೆ. ಶೈಕ್ಷಣಿಕ ವೃತ್ತಿಯಲ್ಲಿರುವವರಿಗೆ ಶುಭ. ಸಂಸಾರದಲ್ಲಿ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಆರ್ಥಿಕವಾಗಿ ಸಮಸ್ಥಿತಿ.

ತುಲಾ: ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಆದರೆ ಹೊಸ ಕೆಲಸಗಳಿಗೆ ಕೈ ಹಾಕಿದರೆ ಯಶಸ್ಸು ಗಳಿಸುವಿರಿ. ದೂರ ಸಂಚಾರದಿಂದ ಕಾರ್ಯಪ್ರಾಪ್ತಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ಸಿಗಲಿದೆ.

ವೃಶ್ಚಿಕ: ನೂತನ ದಂಪತಿಗಳಿಗೆ ಏಕಾಂತ ಭಂಗ. ಅನಿರೀಕ್ಷಿತವಾಗಿ ಮನೆಗೆ ಬಂಧು ಮಿತ್ರರ ಆಗಮನ. ಖರ್ಚು ವೆಚ್ಚಗಳು ಹೆಚ್ಚುವುದು. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು.

ಧನು: ಆಸ್ತಿ ವಿಚಾರಕ್ಕೆ ದಾಯಾದಿಗಳೊಂದಿಗಿನ ಮನಸ್ತಾಪ ನಿಧಾನವಾಗಿ ಪರಿಹಾರವಾಗುವುದು. ಸಂಗಾತಿಯ ಆಸೆಗಳಿಗೆ ಕಿವಿಗೊಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ. ಹಳೇ ಮಿತ್ರರ ಭೇಟಿ.

ಮಕರ: ಹಿರಿಯರ ತೀರ್ಥ ಯಾತ್ರೆಗೆ ಸಿದ್ಧತೆ ಮಾಡುವಿರಿ. ಪಾಲು ಬಂಡವಾಳ ಹೂಡಿಕೆಯಲ್ಲಿ ಲಾಭ ಗಳಿಸುವಿರಿ. ತಾತ್ಕಾಲಿಕ ಉದ್ಯೋಗಿಗಳಿಗೆ ಖಾಯಂ ಉದ್ಯೋಗ ದೊರಕಲಿದೆ. ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.

ಕುಂಭ: ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದೆ. ಮಿತ್ರರೊಂದಿಗೆ ಪ್ರವಾಸ, ಭೋಜನ ಸಾಧ್ಯತೆ. ದೂರ ಸಂಚಾರದಲ್ಲಿ ತೊಂದರೆ ಎದುರಾಗಲಿದೆ. ವಾಹನ ಸವಾರರು ಎಚ್ಚರವಾಗಿರಬೇಕು.

ಮೀನ: ಸಂತಾನಹೀನ ದಂಪತಿಗಳ ಇಷ್ಟ ನೆರವೇರಲಿದೆ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ.  ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಋಣಾತ್ಮಕ ಚಿಂತನೆಗಳಿಗೆ ಅವಕಾಶ ನೀಡದಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಗುರು ಅಷ್ಟಕಂ ಸ್ತೋತ್ರ ಇಲ್ಲಿದೆ, ಓದುವುದರ ಫಲವೇನು ತಿಳಿದುಕೊಳ್ಳಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments